ಕರ್ನಾಟಕ

karnataka

ETV Bharat / state

ಬೆಂಗಳೂರಿನಲ್ಲಿ ನಾಳೆ ಬಿಜೆಪಿ ಕಾರ್ಯಕಾರಿಣಿ ಸಭೆ: ಸಿದ್ದತೆಗಳ ಪರಿಶೀಲನೆ ಮಾಡಿದ ವಿಜಯೇಂದ್ರ

ದೇಶದಲ್ಲಿ ಬಿಜೆಪಿ ಪರ ವಾತಾವರಣವಿದೆ. ಬಿಜೆಪಿ ಕಾರ್ಯಕಾರಿಣಿ ಸಭೆಯಲ್ಲಿ ಮೋದಿ ಸರ್ಕಾರದ ಸಾಧನೆಗಳನ್ನು ಮನೆಮನೆಗೆ ತಲುಪಿಸುವ ಕುರಿತು ಚರ್ಚೆ, ರಾಜ್ಯದ 28 ಲೋಕಸಭೆ ಕ್ಷೇತ್ರಗಳಲ್ಲಿ ಗೆಲ್ಲುವ ಕುರಿತು ಕಾರ್ಯತಂತ್ರ ರೂಪಿಸುತ್ತೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ತಿಳಿಸಿದ್ದಾರೆ.

By ETV Bharat Karnataka Team

Published : Jan 26, 2024, 7:49 PM IST

Updated : Jan 26, 2024, 7:57 PM IST

Vijayendra checked the readiness of the meeting.
ಬಿಜೆಪಿ ಕಾರ್ಯಕಾರಿಣಿ ಸಭೆಯ ಸಿದ್ದತೆಯನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಪರಿಶೀಲಿಸಿದರು.

ಬೆಂಗಳೂರು: ನಾಳೆ ಅರಮನೆ ಮೈದಾನದಲ್ಲಿ ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಭೆ ನಡೆಯಲಿದ್ದು, ಸರ್ಕಾರದ ವೈಫಲ್ಯಗಳ ವಿರುದ್ಧ ನಡೆಸಬೇಕಾದ ಹೋರಾಟಗಳ ಕುರಿತು ಚರ್ಚೆ ನಡೆಯಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ತಿಳಿಸಿದ್ದಾರೆ.

ಬಿಜೆಪಿ ಕಾರ್ಯಕಾರಿಣಿ ಸಭೆ ಶನಿವಾರ ನಡೆಯಲಿರುವ ಹಿನ್ನೆಲೆ ಸಭೆಯ ಪೂರ್ವಸಿದ್ಧತಾ ಕಾರ್ಯವನ್ನು ವಿಜಯೇಂದ್ರ ಪರಿಶೀಲಿಸಿದರು. ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ದೇಶದಲ್ಲಿ ಬಿಜೆಪಿ ಪರ ವಾತಾವರಣ ಇದೆ. ಸಭೆಯಲ್ಲಿ ಮೋದಿಯವರ ಸಾಧನೆಗಳನ್ನು ಮನೆ ಮನೆಗೆ ತಲುಪಿಸುವ ಕುರಿತು ಚರ್ಚಿಸಲಾಗುವುದು. ಲೋಕಸಭೆ ಚುನಾವಣೆ ಎದುರಿಸಲು ಬೇಕಾದ ಕಾರ್ಯತಂತ್ರ, ಕಾರ್ಯಕ್ರಮಗಳನ್ನು ರೂಪಿಸುತ್ತೇವೆ. ಕೇಂದ್ರ ಸಚಿವ ಭೂಪೇಂದ್ರ ಯಾದವ್ ಕಾರ್ಯಕಾರಿಣಿ ಉದ್ಘಾಟನೆ ಮಾಡಲಿದ್ದಾರೆ ಎಂದು ಮಾಹಿತಿ ನೀಡಿದರು.

ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಭೆ

ಶನಿವಾರ ಬೆಳಗ್ಗೆ 10.30ರಿಂದ ಬಿಜೆಪಿ ಕಾರ್ಯಕಾರಿಣಿ ಸಭೆ ಆರಂಭ ಆಗುತ್ತದೆ. ರಾಜ್ಯದ ಬಿಜೆಪಿ ಪದಾಧಿಕಾರಿಗಳ ನೇಮಕದ ಬಳಿಕ ಮೊದಲ ಸಭೆ ಇದಾಗಿದೆ. 900ಕ್ಕೂ ಹೆಚ್ಚು ನಮ್ಮ ಪಕ್ಷದ ಮುಖಂಡರು ಬರಲಿದ್ದಾರೆ. ಪಕ್ಷದ ಹಿರಿಯ ನಾಯಕರು ಮಾಜಿ ಸಿಎಂಗಳು ವೇದಿಕೆಯಲ್ಲಿ ಇರಲಿದ್ದಾರೆ. ನನ್ನ ಮುಂದಿರುವ ದೊಡ್ಡ ಗುರಿ ಲೋಕಸಭಾ ಚುನಾವಣೆ ಅಷ್ಟೇ, ನಾನು ರಾಜ್ಯಾದ್ಯಂತ ಪ್ರವಾಸ ಮಾಡುತ್ತೇನೆ. ಚುನಾವಣೆ ಸಂಬಂಧ ಮುಂದಿನ ಎಲ್ಲ ಕಾರ್ಯ ಯೋಜನೆ ಕುರಿತು ನಾಳಿನ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದರು.

ಲೋಕಸಭೆ 28 ಸ್ಥಾನ ಗೆಲ್ಲುವ ಗುರಿ:ಜಗದೀಶ್ ಶೆಟ್ಟರ್ ಬಿಜೆಪಿಗೆ ವಾಪಸ್​ ಆಗಿದ್ದಾರೆ. ಮುಂದಿನ ಗುರಿ‌ ಲಕ್ಷ್ಮಣ ಸವದಿ ಅವರೇ ಎನ್ನುವ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ವಿಜಯೇಂದ್ರ, ನಾನು ಯಾವುದೇ ನಿಶ್ಚಿತ ಗುರಿ ಇಟ್ಟುಕೊಂಡು ಹೋಗುತ್ತಿಲ್ಲ. ಮುಂದಿನ ಲೋಕಸಭೆ ಚುನಾವಣೆಯಲ್ಲಿ 28 ಸ್ಥಾನ ಗೆಲ್ಲುವುದೇ ನನ್ನ ಗುರಿ. 28 ಸ್ಥಾನ ಗೆಲ್ಲುವ ಬಗ್ಗೆ ಮಾಧ್ಯಮದವರಿಗೆ ತಮಾಷೆಯಾಗಿ ಕಾಣಬಹುದು. ಆದರೆ, ನಾವು ಗುರಿಯೊಂದಿಗೆ ಮುನ್ನಡೆಯುತ್ತಿದ್ದೇವೆ. ಪಕ್ಷಕ್ಕೆ ಯಾರೇ ಬಂದರೂ ಸ್ವಾಗತ ಮಾಡುತ್ತೇವೆ. ಪಕ್ಷದ ಸಿದ್ಧಾಂತ ಒಪ್ಪಿ ಬರುವವರಿಗೆ ಸ್ವಾಗತ ಕೋರುತ್ತೇವೆ ಎಂದು ಅಭಿಪ್ರಾಯ ತಿಳಿಸಿದರು.

ಶೆಟ್ಟರ್ ಅವರು ಕಾಂಗ್ರೆಸ್​​ನಲ್ಲಿದ್ದರೂ ಅವರ ಮನಸ್ಸು ಇಲ್ಲೇ ಇತ್ತು. ಅವರು ಮರಳಿ ಮನೆಗೆ ಬಂದಿದ್ದಾರೆ. ಆದರೆ, ಜನಾರ್ದನ ರೆಡ್ಡಿ ಜತೆ ಚರ್ಚೆ ಮಾಡಿಲ್ಲ, ಚರ್ಚೆ ಮಾಡಿದ ನಂತರ ಅವರ ಬಗ್ಗೆ ಮಾತನಾಡುತ್ತೇನೆ ಎಂದರು. ಮಂಡ್ಯ ಲೋಕಸಭಾ ಕ್ಷೇತ್ರದ ಟಿಕೆಟ್ ಸುಮಲತಾ ಅವರಿಗೆ ಕೊಡುವಂತೆ ಮಂಡ್ಯ ಸ್ಥಳೀಯ ಬಿಜೆಪಿಗರ ಆಗ್ರಹ ವಿಚಾರದ ಕುರಿತು ಪ್ರತಿಕ್ರಿಯೆ ನೀಡಿದ ವಿಜಯೇಂದ್ರ, ಮಂಡ್ಯ ಸಂಸದೆ ಸುಮಲತಾ ಅವರ ಜತೆ ನಿನ್ನೆ ದೂರವಾಣಿ ಮೂಲಕ‌ ಮಾತನಾಡಿದ್ದೇನೆ. ಇನ್ನೊಂದು ಎರಡು ಮೂರು ದಿನಗಳಲ್ಲಿ ಅವರನ್ನು ಭೇಟಿ ಮಾಡುವುದಾಗಿ ಹೇಳಿದ್ದೇನೆ. ಜೆಡಿಎಸ್ ನಾಯಕರ ಜತೆಗೂ ಚರ್ಚೆ ಮಾಡುತ್ತೇವೆ. ಕ್ಷೇತ್ರ ಗೆಲ್ಲುವ ನಿಟ್ಟಿನಲ್ಲಿ ಎಲ್ಲರೂ ಕುಳಿತು ಚರ್ಚಿಸಿ ತೀರ್ಮಾನ ಮಾಡುತ್ತೇವೆ ಎಂದು ತಿಳಿಸಿದರು.

ಯಾರು ಹೊರಗಡೆಯವರು, ಒಳಗಡೆಯವರು ಎಂಬ ಪ್ರಶ್ನೆ ಇಲ್ಲ. ಅಭ್ಯರ್ಥಿ ಯಾರಾಗಬೇಕು ಎಂಬ ನಿರ್ಧಾರ ಕೇಂದ್ರದ ವರಿಷ್ಠರು ನಿರ್ಧಾರ ಮಾಡುತ್ತಾರೆ. ಎಲ್ಲ ರೀತಿಯ ಅವಲೋಕನ ನಡೆಸಿ ಗೆಲ್ಲುವ ಮಾನದಂಡದ ಆಧಾರದಲ್ಲಿಯೇ ಅಭ್ಯರ್ಥಿ ಆಯ್ಕೆ ಆಗಲಿದೆ ಎಂದರು.

ಶನಿವರ ನಡೆಯಲಿರುವ ಬಿಜೆಪಿ ಕಾರ್ಯಕಾರಿಣಿ ಸಭೆ ಹಿನ್ನೆಲೆಯಲ್ಲಿ ಸಭೆಯ ಪೂರ್ವ ಸಿದ್ಧತಾ ಕಾರ್ಯವನ್ನು ವಿಜಯೇಂದ್ರ ಪರಿಶೀಲಿಸಿದರು. ಅರಮನೆ ಮೈದಾನದ ಗಾಯತ್ರಿ ಗ್ರ್ಯಾಂಡ್ ನಲ್ಲಿ ನಡೆದಿರುವ ಸಿದ್ಧತಾ ಕಾರ್ಯವನ್ನು ಅವರು ವೀಕ್ಷಿಸಿದರು.

ಇದನ್ನೂಓದಿ:ಶೆಟ್ಟರ್​​​ ಬಿಜೆಪಿ ಸೇರ್ಪಡೆ ವಿಚಾರದಲ್ಲಿ ಸಿದ್ದರಾಮಯ್ಯ ಇಂಟಲಿಜೆನ್ಸಿ ಫೇಲ್‌ ಆಗಿದೆ: ಬಿ.ವೈ.ವಿಜಯೇಂದ್ರ ವ್ಯಂಗ್ಯ


Last Updated : Jan 26, 2024, 7:57 PM IST

ABOUT THE AUTHOR

...view details