ಬೆಂಗಳೂರು:ಕೇಂದ್ರ ಗ್ರಾಹಕ ವ್ಯವಹಾರಗಳು, ನಾಗರಿಕ ಪೂರೈಕೆ ಮತ್ತು ಸಾರ್ವಜನಿಕ ವಿತರಣಾ ಸಚಿವಾಲಯ ಜನರಿಗೆ ಕೈಗೆಟುಕುವ ದರದಲ್ಲೇ ನಾನಾ ಅಗತ್ಯ ಧಾನ್ಯಗಳ ವಿತರಣೆ ಪುನಾರಂಭಿಸಲು ನಿರ್ಧರಿಸಿದೆ.
ಬುಧವಾರದಿಂದ ಉತ್ಪನ್ನಗಳು ಲಭ್ಯವಾಗಲಿವೆ. ಈ ಯೋಜನೆ ಅಡಿಯಲ್ಲಿ ಅಕ್ಕಿ ಕೆ.ಜಿಗೆ 34 ರೂಪಾಯಿ, ಗೋಧಿ ಹಿಟ್ಟು 30 ರೂಪಾಯಿ, ಕಡಲೆ ಬೆಳೆ 70 ರೂಪಾಯಿ, ಹೆಸರು ಬೇಳೆ 107 ರೂಪಾಯಿಗೆ ಮಾರಾಟ ಮಾಡಲಾಗುತ್ತಿದೆ. ಈ ಮೂಲಕ, ಬೆಂಗಳೂರಿಗರಿಗೆ ಅಗ್ಗದ ದರದಲ್ಲಿ ಉತ್ತಮ ದರ್ಜೆಯ ಆಹಾರ ಪದಾರ್ಥಗಳು ದೊರೆಯಲಿವೆ. ಬೆಲೆ ಏರಿಕೆಯ ಬಿಸಿಯಿಂದ ಜನಸಾಮಾನ್ಯರಿಗೆ ರಕ್ಷಣೆ ಸಿಗಲಿದೆ.