ಕರ್ನಾಟಕ

karnataka

By ETV Bharat Karnataka Team

Published : Mar 14, 2024, 7:30 PM IST

ETV Bharat / state

ಅಧಿಕಾರ ಇದ್ದರೆ ಇನ್ನೂ ಹೆಚ್ಚು ಅಭಿವೃದ್ಧಿ ಮಾಡಲು ಅವಕಾಶ ಸಿಗುತ್ತೆ: ಯದುವೀರ ಒಡೆಯರ್

ಬೆಂಗಳೂರಿನ ಬಿಜೆಪಿ ರಾಜ್ಯ ಕಾರ್ಯಾಲಯಕ್ಕೆ ಬಿಜೆಪಿ ಅಭ್ಯರ್ಥಿ ಹಾಗೂ ಮೈಸೂರು ರಾಮವಂಶಸ್ಥ ಯದುವೀರ್ ಒಡೆಯರ್ ಅವರು ಭೇಟಿ ನೀಡಿ ಹಿರಿಯ ನಾಯಕರೊಂದಿಗೆ ಚರ್ಚಿಸಿದರು.

bjp candidate Yaduveer Wadiyar
ಬಿಜೆಪಿ ಅಭ್ಯರ್ಥಿ ಯದುವೀರ್ ಒಡೆಯರ್ ಅವರು ಭಾರತ ಮಾತೆ ಭಾವಚಿತ್ರಕ್ಕೆ ಪುಷ್ಪಾರ್ಚನೆ ನೆರವೇರಿಸಿದರು.

ಬೆಂಗಳೂರು:ಅಭಿವೃದ್ಧಿ ಮತ್ತು ಸಾರ್ವಜನಿಕ ಸೇವೆ ಮಾಡುವ ದೃಷ್ಟಿಕೋನ ಇಟ್ಟುಕೊಂಡು ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗಲು ನಿರ್ಧರಿಸಿದೆ ಎಂದು ಮೈಸೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಸ್ಪಷ್ಟಪಡಿಸಿದ್ದಾರೆ.

ನಗರದ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನಕ್ಕೆ ಮೈಸೂರು ರಾಮವಂಶಸ್ಥ ಯದುವೀರ್ ಒಡೆಯರ್ ಭೇಟಿ ನೀಡಿದ ವೇಳೆ, ಅವರಿಗೆ ಖುದ್ದಾಗಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಸ್ವಾಗತ ಕೋರಿದರು. ನಂತರ ಬಿಜೆಪಿ ಸಂಪ್ರದಾಯದಂತೆ ಭಾರತ ಮಾತೆ ಭಾವಚಿತ್ರ ಹಾಗೂ ಪಕ್ಷದ ಸಂಸ್ಥಾಪಕ ಜಗನ್ನಾಥರಾವ್ ಜೋಶಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ನೆರವೇರಿಸಿದರು. ನಂತರ ಪಕ್ಷದ ನಾಯಕರ ಜೊತೆ ಕೆಲಕಾಲ ಮಾತುಕತೆ ನಡೆಸಿದರು. ರಾಜಕೀಯ ಕ್ಷೇತ್ರಕ್ಕೆ ಈಗಷ್ಟೇ ಕಾಲಿಡುತ್ತಿರುವ ಯದುವೀರ್ ಅವರು ಚುನಾವಣೆ ಕುರಿತು ಸಾಕಷ್ಟು ಚರ್ಚೆ ನಡೆಸಿದರು.

ಜನರ ಋಣ ತೀರಿಸೋಕೆ ಇದು ಒಂದು ಅವಕಾಶ:ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಯದುವೀರ್ ಅವರು, ಮೈಸೂರು ರಾಜಮನೆತನಕ್ಕೆ ಸೇರಿ ಉತ್ತರಾಧಿಕಾರಿಯಾಗಿ ಜವಾಬ್ದಾರಿ ವಹಿಸಿಕೊಂಡ ನಂತರ ಒಂಬತ್ತು ವರ್ಷಗಳಿಂದ ನಾನು ಜನರ ಜೊತೆ ಇದ್ದೇನೆ. ಜನತೆ ನನ್ನನ್ನು ಸಹೋದರನ ತರಹ ನೋಡಿದ್ದಾರೆ. ಜನರ ಋಣ ತೀರಿಸೋಕೆ ಇದು ಒಂದು ಅವಕಾಶ. ಅಧಿಕಾರ ಇದ್ದಾಗ ಹೆಚ್ಚಿನ ಅಭಿವೃದ್ಧಿ ಮಾಡಲು ಅವಕಾಶ ಸಿಗುತ್ತದೆ ಹಾಗಾಗಿ ರಾಜಕೀಯಕ್ಕೆ ಬರುತ್ತಿದ್ದೇನೆ ಎಂದರು.

ಪ್ರತಾಪ್ ಸಿಂಹ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಯದುವೀರ್, ಸಾರ್ವಜನಿಕ ಬದುಕಿಗೆ ಬಂದ ಮೇಲೆ ಸಾರ್ವಜನಿಕವಾಗಿ ಇರಬೇಕಾಗುತ್ತದೆ. ಪ್ರತಾಪ್ ಸಿಂಹ ಎರಡು ಅವಧಿಗೆ ಸಂಸದರಾಗಿ ಕೆಲಸಮಾಡಿದ್ದಾರೆ. ಒಳ್ಳೆಯ ಅಡಿಪಾಯ ಹಾಕಿದ್ದಾರೆ. ಅವರ ಸಹಕಾರ ಇದ್ದರೆ ಅನುಕೂಲ ಆಗುತ್ತದೆ. ಅವರು ಒಳ್ಳೆಯ ಅಭಿವೃದ್ಧಿ ಕಾರ್ಯ ಮಾಡುತ್ತಿದ್ದಾರೆ. ಪ್ರತಾಪ್ ಸಿಂಹ ಜೊತೆ ಯಾವಾಗಲೂ ನಾನು ಸಂಪರ್ಕದಲ್ಲಿ ಇದ್ದೇನೆ. ಅವರ ಬೆಂಬಲ ಇರುತ್ತದೆ. ಒಂದು ವರ್ಷದ ಹಿಂದೆಯೆ ನನಗೆ ಚುನಾವಣೆ ಯೋಚನೆ ಬಂದಿತ್ತು. ಈಗ ಅವಕಾಶ ಸಿಕ್ಕಿದೆ ಈಗ ಸ್ಕೇಲ್ ದೊಡ್ಡದಾಗುತ್ತದೆ. ಅಧಿಕಾರ ಇದ್ದರೆ ಇನ್ನೂ ಒಳ್ಳೆಯ ಕೆಲಸ ಮಾಡುವುದಕ್ಕೆ ಆಗತ್ತದೆ ಎಂದು ತಿಳಿಸಿದರು.

ಈ ವೇಳೆ, ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ ವೈ ವಿಜಯೇಂದ್ರ, ವಿರೋಧ ಪಕ್ಷದ ನಾಯಕ ಆರ್. ಅಶೋಕ್, ರಾಜ್ಯದ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ರಾಜ್ಯ ಸಂಘಟನಾ ಪ್ರಧಾನ ಕಾರ್ಯದರ್ಶಿ ರಾಜೇಶ್ ಜಿ.ವಿ, ಕೋಲಾರ ಸಂಸದ ಎಸ್. ಮುನಿಸ್ವಾಮಿ, ಶಾಸಕ ಶರಣು ಸಲಗರ್, ರಾಜ್ಯ ಪ್ರಧಾನ ಕಾರ್ಯದರ್ಶಿ ಪ್ರೀತಮ್ ಗೌಡ, ರಾಜ್ಯ ಕಾರ್ಯದರ್ಶಿ ಶರಣು ತಳ್ಳಿಕೇರಿ ಮತ್ತು ಪ್ರಮುಖರು ಉಪಸ್ಥಿತರಿದ್ದರು.

ಇದನ್ನೂಓದಿ:ಪಕ್ಷ ಸೇರಿದ ನಂತರವೇ ಯದುವೀರ್, ಮಂಜುನಾಥ್​ಗೆ ಟಿಕೆಟ್: ವಿಜಯೇಂದ್ರ ಸ್ಪಷ್ಟನೆ

ABOUT THE AUTHOR

...view details