ಬೆಂಗಳೂರು:ಗಣರಾಜ್ಯೋತ್ಸವದ ಸಂದರ್ಭದಲ್ಲಿ ಬೆಂಗಳೂರಿನ ವಿವಿಧೆಡೆ ಬಾಂಬ್ ಸ್ಫೋಟಿಸಲು ಸಂಚು ರೂಪಿಸಲಾಗಿದೆ ಎಂದು ಪೊಲೀಸ್ ಕಂಟ್ರೋಲ್ ರೂಮ್ಗೆ ಕರೆ ಮಾಡಿದ್ದ ಆರೋಪಿಯನ್ನ ವಿಧಾನಸೌಧ ಠಾಣೆ ಪೊಲೀಸರು ಬಂಧಿಸಿದ್ದಾರೆ. ಮನ್ಸೂರ್ ಬಂಧಿತ ಆರೋಪಿ.
ಜನವರಿ 9ರಂದು ಸಂಜೆ ಬೆಂಗಳೂರು ಪೊಲೀಸ್ ಕಂಟ್ರೋಲ್ ರೂಮ್ಗೆ ಕರೆ ಮಾಡಿದ್ದ ಮನ್ಸೂರ್ ತನ್ನನ್ನ ರಿಯಾಜ್ ಎಂಬ ಹೆಸರಿನಲ್ಲಿ ಪರಿಚಯಿಸಿಕೊಂಡು, ''ರಾಮೇಶ್ವರಂ ಕೆಫೆಯಲ್ಲಿ ಸ್ಪೋಟಿಸಿದಂತೆ ಬೆಂಗಳೂರಿನ ವಿವಿಧೆಡೆ ಗಣರಾಜ್ಯೋತ್ಸವ ದಿನ ಸ್ಫೋಟಿಸಲು ಮೂವರು ಸಂಚು ರೂಪಿಸಿದ್ದಾರೆ ಎಂದು ಆರು ಜನರ ಹೆಸರು ಮತ್ತು ವಿಳಾಸ ತಿಳಿಸಿದ್ದ. ಈ ಮಾಹಿತಿಯನ್ನ ಕಡೆಗಣಿಸದೆ ಪೊಲೀಸರು ಪರಿಶೀಲಿಸಿದಾಗ, ಅದೊಂದು ಹುಸಿ ಕರೆ ಎಂದು ತಿಳಿದು ಬಂದಿತ್ತು. ಬಳಿಕ ಕರೆ ಮಾಡಿದ್ದ ಆರೋಪಿಯನ್ನ ವಶಕ್ಕೆ ಪಡೆದು ವಿಚಾರಣೆಗೊಳಪಡಿಸಿದಾಗ ಆತ ಉದ್ದೇಶಪೂರ್ವಕವಾಗಿ ಸುಳ್ಳು ಮಾಹಿತಿ ನೀಡಿರುವುದು ಬಯಲಾಗಿದೆ.