ಕರ್ನಾಟಕ

karnataka

ETV Bharat / state

ಹುಬ್ಬಳ್ಳಿ: ಯುವಕನ ಬರ್ಬರ ಹತ್ಯೆ, ಶವಕ್ಕೆ ಬೆಂಕಿ ಹಚ್ಚಿ ದುಷ್ಕರ್ಮಿಗಳು ಪರಾರಿ - ಕೊಲೆ

ಹುಬ್ಬಳ್ಳಿಯಲ್ಲಿ ಯುವಕನ ಭೀಕರ ಹತ್ಯೆ ನಡೆದಿದೆ.

murder
ಹತ್ಯೆಗೊಂಡ ಯುವಕ

By ETV Bharat Karnataka Team

Published : Jan 31, 2024, 11:13 AM IST

Updated : Jan 31, 2024, 10:28 PM IST

ಯುವಕನ ಬರ್ಬರ ಕೊಲೆ

ಹುಬ್ಬಳ್ಳಿ:ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ತಡರಾತ್ರಿ ಭೀಕರ ಕೊಲೆ ಪ್ರಕರಣ ನಡೆದಿದೆ. ಯುವಕನನ್ನು ಕಲ್ಲು ಎತ್ತಿ ಹಾಕಿ ಕೊಲೆಗೈದ ದುಷ್ಕರ್ಮಿಗಳು, ಶವಕ್ಕೆ ಬೆಂಕಿ ಹಚ್ಚಿದ್ದಾರೆ. ಕಾರವಾರ ರಸ್ತೆಯ ಎಂಟಿಎಸ್ ಕಾಲೊನಿಯ ಪಾಳು ಜಾಗದಲ್ಲಿ ಘಟನೆ ನಡೆದಿದೆ. ಕೊಲೆಯಾದ ಯುವಕನನ್ನು ಮಾರುತಿನಗರದ ನಿವಾಸಿ ವಿಜಯ ಬಸವ (25) ಎಂದು ಗುರುತಿಸಲಾಗಿದೆ‌. ಹು-ಧಾ ಪೊಲೀಸ್ ಆಯುಕ್ತೆ ರೇಣುಕಾ ಸುಕುಮಾರ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಬಳಿಕ ಪ್ರತಿಕ್ರಿಯಿಸಿದ ಅವರು, "ಕೊಲೆಯಾದ ಯುವಕ ವಿಜಯ ಬಸವ ಎಂದು ತಿಳಿದುಬಂದಿದೆ. ಮೊಬೈಲ್ ಸರ್ವಿಸ್ ಕಂಪನಿಯ ಟೀಮ್ ಹೆಡ್ ಆಗಿ ಕೆಲಸ ಮಾಡುತ್ತಿದ್ದ. ಆತನ ಬಗ್ಗೆ ಕುಟುಂಬಸ್ಥರಿಂದ ಮಾಹಿತಿ ಕಲೆ ಹಾಕಲಾಗಿದೆ. ತನಿಖೆಯ ನಂತರ ಕಾರಣ ತಿಳಿದು ಬರಲಿದೆ" ಎಂದು ತಿಳಿಸಿದರು. ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮೃತ ಯುವಕನ ಸಹೋದರ ವಿಶಾಲಬಸವ ಹಾಗೂ ಸ್ನೇಹಿತ ರಘು ಮಾಧ್ಯಮದವರೊಂದಿಗೆ ಮಾತನಾಡಿದ್ದು, ''ವಿಜಯ ಸ್ನೇಹ ಜೀವಿಯಾಗಿದ್ದ. ಈ‌ ಕೊಲೆ ಯಾರು ಮಾಡಿದ್ದಾರೆ. ಯಾಕೆ ಮಾಡಿದ್ದಾರೆ? ಎಂಬ ಬಗ್ಗೆ ಮಾಹಿತಿ ಇಲ್ಲ. ಆತ ಮನೆಯಲ್ಲಿ ಹಾಗೂ ಸ್ನೇಹಿತರ ಜೊತೆ ಉತ್ತಮ ಬಾಂಧವ್ಯ ಹೊಂದಿದ್ದು, ಕೊಲೆಗೆ ಹಣಕಾಸು ಹಾಗೂ ಪ್ರೀತಿ ಪ್ರೇಮವೂ ಕಾರಣ ಅಲ್ಲ. ಕೊಲೆ ಆರೋಪಿಗಳನ್ನು ಕೂಡಲೇ ಬಂಧಿಸಬೇಕು'' ಎಂದು ಒತ್ತಾಯಿಸಿದ್ದಾರೆ.

ಇದನ್ನೂ ಓದಿ:ಜಮೀನು ವಿವಾದ: ಕಾರು ಗುದ್ದಿಸಿ ಮೂವರ ಮೇಲೆ ಮಾರಣಾಂತಿಕ ಹಲ್ಲೆ

Last Updated : Jan 31, 2024, 10:28 PM IST

ABOUT THE AUTHOR

...view details