ಕರ್ನಾಟಕ

karnataka

ETV Bharat / state

ಸಿದ್ದರಾಮಯ್ಯ ಮಾತಿಗೆ ನಗಬೇಕೋ, ಅಳಬೇಕೋ ಗೊತ್ತಾಗ್ತಿಲ್ಲ: ಯಡಿಯೂರಪ್ಪ - B S YEDIYURAPPA - B S YEDIYURAPPA

ಸಿಎಂ ಸಿದ್ದರಾಮಯ್ಯ ವಿರುದ್ಧ ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ವಾಗ್ದಾಳಿ ನಡೆಸಿದ್ದಾರೆ. ​

ಪ್ರಧಾನಿ ಮೋದಿ ವಿರುದ್ದ ಮಾತನಾಡಿದ್ರೆ ದೊಡ್ಡವರಾಗುತ್ತೇವೆಂಬ ಭ್ರಮೆ ಇದೆ
ಪ್ರಧಾನಿ ಮೋದಿ ವಿರುದ್ದ ಮಾತನಾಡಿದ್ರೆ ದೊಡ್ಡವರಾಗುತ್ತೇವೆಂಬ ಭ್ರಮೆ ಇದೆ

By ETV Bharat Karnataka Team

Published : Mar 27, 2024, 1:44 PM IST

ಬಿ.ಎಸ್​ ಯಡಿಯೂರಪ್ಪ ಹೇಳಿಕೆ

ಬೆಳಗಾವಿ: ಪ್ರಧಾನಿ ಮೋದಿ ಬಗ್ಗೆ ಮಾತನಾಡಿದ್ರೆ ದೊಡ್ಡವರು ಆಗುತ್ತೇವೆ ಎನ್ನುವ ಭ್ರಮೆ ಇದೆ. ಇದು ಎಷ್ಟರ ಮಟ್ಟಿಗೆ ಸರಿ ಎಂಬ ಬಗ್ಗೆ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಅವರೇ ಯೋಚಿಸಬೇಕು. ಈಗಾಗಲೇ ಹಣಕಾಸಿನ ನೆರವಿನ ಬಗ್ಗೆ ನಿರ್ಮಲಾ ಸೀತಾರಾಮನ್ ಸ್ಪಷ್ಟವಾಗಿ ಹೇಳಿದ್ದಾರೆ. ಆದರೂ ಮಾತನಾಡುತ್ತಿದ್ದಾರೆ ಎಂದು ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್. ಯಡಿಯೂರಪ್ಪ ವಾಗ್ದಾಳಿ ನಡೆಸಿದರು.

ಅತ್ಯಂತ ಸುಳ್ಳು ಹೇಳುವ ಪ್ರಧಾನಿ ಮೋದಿ ಎಂಬ ಸಿಎಂ ಸಿದ್ದರಾಮಯ್ಯ ಟೀಕೆ ಬಗ್ಗೆ ಬೆಳಗಾವಿಯಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, ಈ ಮಾತಿಗೆ ನಗಬೇಕೋ, ಅಳಬೇಕೋ ಗೊತ್ತಾಗ್ತಿಲ್ಲ. ಮೋದಿ ಬಗ್ಗೆ ಹಗುರವಾಗಿ ಮಾತಾಡಿದರೆ ದೊಡ್ಡವರಾಗುತ್ತೇವೆ ಎನ್ನುವ ಭಾವನೆ ಇದ್ದರೆ ಅದು ಖಂಡಿತ ಸಾಧ್ಯವಿಲ್ಲ. ಇಂತಹ ಮಾತು ಕಡಿಮೆ ಮಾಡಿ, ನಿಮ್ಮ ಸಿಎಂ ಸ್ಥಾನಕ್ಕೆ ಗೌರವ ತರಲ್ಲ ಎಂದು ಕಿಡಿಕಾರಿದರು.

ಮೋದಿ ಹೆಸರು ಹೇಳಿ ಮತ ಕೇಳಿದ್ರೆ ಕಪಾಳಮೋಕ್ಷ ಮಾಡಿ ಎಂಬ ಸಚಿವ ಶಿವರಾಜ ತಂಗಡಗಿ ಹೇಳಿಕೆ ವಿಚಾರಕ್ಕೆ, ಸಚಿವ ಸ್ಥಾನಕ್ಕೆ ಮತ್ತು ಪಕ್ಷಕ್ಕೆ ಇದು ಶೋಭೆ ತರಲ್ಲ. ಅತಿರೇಕದ ಪರಾಮಾವಧಿ. ಹಗುರವಾದ ಮಾತುಗಳನ್ನು ಆಡಿದವರ ಮೇಲೆ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಇನ್ನು ಮಂಡ್ಯದಲ್ಲಿ ಎಚ್​.ಡಿ ಕುಮಾರಸ್ವಾಮಿ ಸ್ಪರ್ಧೆ ಬಗ್ಗೆ ಮಾತನಾಡಿ, ಬಹುತೇಕ ಕುಮಾರಸ್ವಾಮಿ ಅವರೇ ಮಂಡ್ಯದಲ್ಲಿ ಸ್ಪರ್ಧಿಸೋದು ನಿಶ್ಚಯವಾಗಿದೆ. ಸುಮಲತಾ ಅವರಿಗೆ ಬೇರೆ ಅವಕಾಶ ಇದೆ. ಸಮಾಧಾನದಿಂದ ಇದ್ದರೆ ಮುಂದೆ ಸೂಕ್ತ ಸ್ಥಾನಮಾನ ಸಿಗಲಿದೆ. ದಿಲ್ಲಿಯವರು ಕರೆದು ಅವರ ಜೊತೆ ಮಾತನಾಡುತ್ತಾರೆ ಎಂದು ಸ್ಪಷ್ಟಪಡಿಸಿದರು. ಪ್ರಮುಖ ನಾಯಕರು ಎಲ್ಲರೂ ಇಂದು ಬೆಳಗಾವಿಯಲ್ಲಿ ಸಭೆಯಲ್ಲಿ ಸೇರಿದ್ದರು.

ಎಲ್ಲರೂ ಒಮ್ಮತದಿಂದ ಜಗದೀಶ್​ ಶೆಟ್ಟರ್ ಅವರನ್ನು ಬಹು ದೊಡ್ಡ ಅಂತರದಲ್ಲಿ ಗೆಲ್ಲಿಸುವ ಭರವಸೆ ನೀಡಿದ್ದಾರೆ. ನನಗೂ ವಿಶ್ವಾಸವಿದ್ದು, ಚಿಕ್ಕೋಡಿ ಮತ್ತು ಬೆಳಗಾವಿಯಲ್ಲಿ ಗೆಲುವು ನಿಶ್ಚಿತ. ಈ ಸಲ 28 ಕ್ಷೇತ್ರ ಗೆಲ್ಲಿಸಬೇಕು ಎನ್ನುವುದು ನಮ್ಮ ಗುರಿ ಎಂದರು.

ಇದನ್ನೂ ಓದಿ:ಬೆಳಗಾವಿ, ದಾವಣಗೆರೆ ಜಿಲ್ಲಾ ಬಿಜೆಪಿಯಲ್ಲಿ ಯಾವುದೇ ಒಡಕಿಲ್ಲ, ಒಟ್ಟಾಗಿ ಚುನಾವಣೆ ಎದುರಿಸುತ್ತೇವೆ: ಯಡಿಯೂರಪ್ಪ - B S Yediyurappa

ABOUT THE AUTHOR

...view details