ಕರ್ನಾಟಕ

karnataka

ETV Bharat / state

ಅಂಬೇಡ್ಕರ್‌ ಕುರಿತು ಅಮಿತ್ ಶಾ ಹೇಳಿಕೆಗೆ ಖಂಡನೆ: ಡಿ.31ಕ್ಕೆ ಚಾಮರಾಜನಗರ ಬಂದ್​ ಕರೆ - CHAMARAJANAGAR BANDH

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಅಂಬೇಡ್ಕರ್ ಕುರಿತು ನೀಡಿದ ಹೇಳಿಕೆಯನ್ನು ಖಂಡಿಸಿ ಡಿ.31ಕ್ಕೆ ಚಾಮರಾಜನಗರ ಬಂದ್​ಗೆ ಕರೆ ನೀಡಲಾಗಿದೆ.

ದಲಿತ ಹಾಗೂ ಪ್ರಗತಿಪರ ಸಂಘಟನೆಗಳ ಮುಖಂಡರು
ದಲಿತ ಹಾಗೂ ಪ್ರಗತಿಪರ ಸಂಘಟನೆಗಳ ಮುಖಂಡರು (ETV Bharat)

By ETV Bharat Karnataka Team

Published : Dec 27, 2024, 9:37 PM IST

ಚಾಮರಾಜನಗರ: ಇತ್ತೀಚೆಗಷ್ಟೇ ರಾಜ್ಯಸಭೆಯಲ್ಲಿ ನಡೆದ ಚರ್ಚೆಯ ವೇಳೆ ಡಾ.ಬಿ.ಆರ್.ಅಂಬೇಡ್ಕರ್ ಕುರಿತು ಕೇಂದ್ರ ಗೃಹ ಸಚಿವ ಅಮಿತ್ ಶಾ ನೀಡಿದ ಹೇಳಿಕೆಯನ್ನು ವಿರೋಧಿಸಿ ದಲಿತ ಹಾಗೂ ಪ್ರಗತಿಪರ ಸಂಘಟನೆಗಳು ಡಿ.31ರಂದು ಚಾಮರಾಜನಗರ ಬಂದ್ ಆಚರಿಸಲು ನಿರ್ಧರಿಸಿವೆ.

ನಗರದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ದಲಿತ ಮಹಾಸಭಾದ ರಾಜ್ಯ ಉಪಾಧ್ಯಕ್ಷ ವೆಂಕಟರಮಣಸ್ವಾಮಿ(ಪಾಪು) ನೇತೃತ್ವದಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಚಾಮರಾಜನಗರ ಬಂದ್​ಗೆ ನಿರ್ಧರಿಸಲಾಯಿತು. ಸಭೆಯಲ್ಲಿ ಎಸ್‌ಡಿಪಿಐ ನಗರಸಭಾ ಸದಸ್ಯ ಎಂ.ಮಹೇಶ, ದಲಿತ ಸಂಘರ್ಷ ಸಮಿತಿ ಸಂಚಾಲಕ ಸಿ.ಎಂ.ಶಿವಣ್ಣ, ಯ.ನಾಗರಾಜು, ಲಾರಿ ಮಾಲೀಕರ ಸಂಘದ ಇರ್ಷಾದ್, ರಾಮಸಮುದ್ರ ಸುರೇಶ್ ಬಂದ್​ಗೆ ಸಂಪೂರ್ಣ ಬೆಂಬಲ ನೀಡುವುದಾಗಿ ತಿಳಿಸಿದರು.

ದಲಿತ ಹಾಗೂ ಪ್ರಗತಿಪರ ಸಂಘಟನೆಗಳ ಸಭೆ (ETV Bharat)

ಸಭೆಯ ನೇತೃತ್ವವಹಿಸಿದ್ದ ವೆಂಕಟರಮಣಸ್ವಾಮಿ ಮಾತನಾಡಿ, "ಸಂಸತ್​ನಲ್ಲಿ ಡಾ.ಬಿ‌.ಆರ್.ಅಂಬೇಡ್ಕರ್ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಸಚಿವ ಸಂಪುಟದಿಂದ ವಜಾಗೊಳಿಸಿ, ದೇಶದಿಂದ ಗಡಿಪಾರು ಮಾಡುವಂತೆ ಆಗ್ರಹಿಸಿ ಚಾಮರಾಜನಗರ ಬಂದ್​ಗೆ ಕರೆ ನೀಡಲಾಗಿದೆ. ಬಂದ್​ಗೆ ಬೆಂಬಲ ನೀಡುವಂತೆ ವರ್ತಕರು, ಚಿತ್ರಮಂದಿರ ಮಾಲೀಕರು, ಬಸ್ ಮಾಲೀಕರ ಸಂಘ, ಲಾರಿ ಮಾಲೀಕರ ಸಂಘ, ಪಟ್ಟಣದ ಎಲ್ಲಾ ಕೋಮಿನ ಸಮುದಾಯದವರು ಹಾಗೂ ಸಂಘ-ಸಂಸ್ಥೆಗಳಲ್ಲಿ ಮನವಿ ಮಾಡಲಾಗಿದ್ದು, ಅವರು ಬೆಂಬಲ ಕೊಡುವುದಾಗಿ ತಿಳಿಸಿದ್ದಾರೆ" ಎಂದರು.

ಇದನ್ನೂ ಓದಿ:ದಾವಣಗೆರೆ: ಡಿ.31ರಿಂದ ಸಾರಿಗೆ ಬಸ್ ನೌಕರರ ಮುಷ್ಕರ

ABOUT THE AUTHOR

...view details