ಕರ್ನಾಟಕ

karnataka

By ETV Bharat Karnataka Team

Published : Apr 2, 2024, 7:58 AM IST

ETV Bharat / state

ವೀಸಾ ಅವಧಿ ಅಂತ್ಯವಾದರೂ ಬೆಂಗಳೂರಲ್ಲಿ ವಾಸವಿದ್ದ ವಿದೇಶಿಯರ ನಿವಾಸಗಳ ಮೇಲೆ ಸಿಸಿಬಿ ದಾಳಿ - CCB RAID

ವೀಸಾ ಅವಧಿ ಮುಗಿದ ಬಳಿಕವೂ ನಗರದಲ್ಲಿ ಅಕ್ರಮವಾಗಿ ವಾಸವಿರುವ ವಿದೇಶಿ ಪ್ರಜೆಗಳ ನಿವಾಸಗಳ ಮೇಲೆ ಸೋಮವಾರ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದಾರೆ.

ಸಿಸಿಬಿ ದಾಳಿ
ಸಿಸಿಬಿ ದಾಳಿ

ಬೆಂಗಳೂರು:ವೀಸಾ ಅವಧಿ ಮುಗಿದ ಬಳಿಕವೂ ನಗರದಲ್ಲಿ ಅಕ್ರಮವಾಗಿ ವಾಸವಿರುವ ವಿದೇಶಿ ಪ್ರಜೆಗಳ ನಿವಾಸಗಳ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿ, ಪರಿಶೀಲನೆ ನಡೆಸಿದ್ದಾರೆ.

ಪಾಸ್‌ಪೋರ್ಟ್​ ಮತ್ತು ವೀಸಾ ಅವಧಿ ಮುಗಿದಿದ್ದರೂ ಸಹ ಕೆಲ ವಿದೇಶಿ ಪ್ರಜೆಗಳು ನಗರದಲ್ಲಿ ಅಕ್ರಮವಾಗಿ ವಾಸವಿರುವ ಬಗ್ಗೆ ಮಾಹಿತಿ ಬಂದ ಹಿನ್ನೆಲೆಯಲ್ಲಿ ಬಾಣಸವಾಡಿ, ಸುಬ್ಬಯ್ಯನಪಾಳ್ಯ, ಶಿವಾಜಿನಗರ ಮತ್ತು ರಾಮಮೂರ್ತಿ ನಗರದಲ್ಲಿ ದಾಳಿ ನಡೆಸಲಾಗಿದೆ. ಅಕ್ರಮವಾಗಿ ನೆಲೆಸಿರುವ ಆಫ್ರಿಕಾ ಸೇರಿದಂತೆ ವಿವಿಧ ವಿದೇಶಿ ಪ್ರಜೆಗಳ ವೀಸಾ ಮತ್ತು ಪಾಸ್‌ಪೋರ್ಟ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ.

ವಿದ್ಯಾರ್ಥಿ, ಬ್ಯುಸಿನೆಸ್ ವೀಸಾ ಪಡೆದು ನಗರಕ್ಕೆ ಆಗಮಿಸುವ ಕೆಲ ವಿದೇಶಿಯರು ತಮ್ಮ ವೀಸಾ ಅವಧಿ ಮುಗಿದಿದ್ದರೂ ತಮ್ಮ ದೇಶಗಳಿಗೆ ಹಿಂದಿರುಗದೆ ಅಕ್ರಮವಾಗಿ ನೆಲೆಸಿ ಮಾದಕವಸ್ತು ಮಾರಾಟ ಮತ್ತು ಇನ್ನಿತರ ಅಪರಾಧ ಚಟುವಟಿಕೆಗಳಲ್ಲಿ ಭಾಗಿಯಾಗುತ್ತಿರುವುದು ಕಂಡು ಬಂದ ಹಿನ್ನೆಲೆಯಲ್ಲಿ ಪೊಲೀಸರು ದಿಢೀರ್ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ:ಬೆಂಗಳೂರು: ಮಹಿಳೆಯ ಕಾರು ಹಿಂಬಾಲಿಸಿ ಕಿರುಕುಳ; ಇಬ್ಬರು ಪೊಲೀಸರ​ ವಶಕ್ಕೆ - Harassing Case

ABOUT THE AUTHOR

...view details