ಕರ್ನಾಟಕ

karnataka

ರೇಣುಕಾಸ್ವಾಮಿ ಕೊಲೆ ಪ್ರಕರಣ: ಆರೋಪಿಗಳ ಸಿಸಿಟಿವಿ ದೃಶ್ಯಗಳು FSL, CID ತಾಂತ್ರಿಕ ಘಟಕಕ್ಕೆ ರವಾನೆ - Darshan Case

By ETV Bharat Karnataka Team

Published : Jul 15, 2024, 5:00 PM IST

ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಸಂಬಂಧ ಘಟನೆಯ ದಿನ ನಟ ದರ್ಶನ್ ಮತ್ತು ಸಹವರ್ತಿಗಳು ಸಂಚರಿಸಿರುವ ಸಿಸಿಟಿವಿ ದೃಶ್ಯಗಳನ್ನು ಪೊಲೀಸರು ಸಂಗ್ರಹಿಸಿ ಎಫ್​ಎಎಸ್, ಸಿಐಡಿಯ ತಾಂತ್ರಿಕ ಘಟಕಕ್ಕೆ ರವಾನಿಸಿದ್ದಾರೆ.

DARSHAN
ನಟ ದರ್ಶನ್ (ETV Bharat)

ಬೆಂಗಳೂರು:ರೇಣುಕಾಸ್ವಾಮಿ ಹತ್ಯೆ ಪ್ರಕರಣದ ತನಿಖೆ ನಡೆಸುತ್ತಿರುವ ಕಾಮಾಕ್ಷಿಪಾಳ್ಯ ಠಾಣಾ ಪೊಲೀಸರು, ಘಟನೆಯ ದಿನ ನಟ ದರ್ಶನ್ ಮತ್ತು ಸಹವರ್ತಿಗಳು ಸಂಚರಿಸಿರುವ ಮಾರ್ಗದ ಸಿಸಿಟಿವಿ ದೃಶ್ಯಗಳನ್ನ ಕಲೆಹಾಕಿ, ವಿಧಿ ವಿಜ್ಞಾನ ಪ್ರಯೋಗಾಲಯ (ಎಫ್ಎಸ್ಎಲ್) ಹಾಗೂ ಸಿಐಡಿಯ ತಾಂತ್ರಿಕ ಘಟಕಕ್ಕೆ ರವಾನಿಸಿದ್ದಾರೆ.

ಆರೋಪಿಗಳು ಪಾರ್ಟಿ ಮಾಡಿದ್ದ ಆರ್. ಆರ್ ನಗರದ ಸ್ಟೋನಿ ಬ್ರೂಕ್ ರೆಸ್ಟೋರೆಂಟ್‌ನಿಂದ ಪಟ್ಟಣಗೆರೆ ಶೆಡ್ ಮಾರ್ಗದಲ್ಲಿರುವ‌ ಸಿಸಿಟಿವಿ ಕ್ಯಾಮೆರಾ ದೃಶ್ಯಗಳು, ಪಟ್ಟಣಗೆರೆ ಶೆಡ್​ನಲ್ಲಿರುವ ಸಿಸಿಟಿವಿ ದೃಶ್ಯಾವಳಿಗಳು, ಮೃತದೇಹ ಸಾಗಿಸಿದ್ದಾರೆನ್ನಲಾದ ಸುಮನಹಳ್ಳಿ ರಾಜಕಾಲುವೆ ಮಾರ್ಗದಲ್ಲಿನ ಸಿಸಿಟಿವಿ ದೃಶ್ಯಾವಳಿಗಳನ್ನ ಕಲೆ ಹಾಕಲಾಗಿದೆ. ಅಲ್ಲದೆ ದರ್ಶನ್, ಪವಿತ್ರಾಗೌಡ ಸೇರಿದಂತೆ ಪ್ರಮುಖ ಆರೋಪಿಗಳ ಮನೆಗಳು, ಸುತ್ತಮುತ್ತಲಿನ ಸಿಸಿಟಿವಿ ದೃಶ್ಯಾವಳಿಗಳು ಸೇರಿದಂತೆ ಇದುವರೆಗೂ 30ಕ್ಕೂ ಅಧಿಕ ಸಿಸಿಟಿವಿಗಳ ದೃಶ್ಯಾವಳಿಗಳನ್ನ ಸಂಗ್ರಹಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರಕರಣದಲ್ಲಿ ಪ್ರಮುಖ ಸಾಕ್ಷ್ಯ ಆಗಲಿರುವ ಸಿಸಿಟಿವಿ ದೃಶ್ಯಗಳನ್ನ ಟೈಮ್ ಲೈನ್ ಹೊಂದಾಣಿಕೆ, ಕೂಲಂಕಷವಾದ ಪರಿಶೀಲನೆಗಾಗಿ ಎಫ್ಎಸ್ಎಲ್ ಹಾಗೂ ಸಿಐಡಿಯ ತಾಂತ್ರಿಕ ಘಟಕಕ್ಕೆ ರವಾನಿಸಲಾಗಿದೆ. ಸಮಗ್ರ ವರದಿಗಾಗಿ ಕಾಯುತ್ತಿರುವ ಪೊಲೀಸರು, ಬಳಿಕ ವಿವರವನ್ನ ಚಾರ್ಜ್​ಶೀಟ್​ನಲ್ಲಿ ಸೇರಿಸಲು ಸಿದ್ಧತೆ ಮಾಡಿಕೊಂಡಿದ್ದಾರೆ.

ಇದನ್ನೂ ಓದಿ :ಜೈಲಿನಲ್ಲಿ ನಟ ದರ್ಶನ್‌ಗೆ ಇತರ ಕೈದಿಗಳಂತೆಯೇ ವ್ಯವಸ್ಥೆ: ಗೃಹ ಸಚಿವ ಪರಮೇಶ್ವರ್ - Home Minister Parameshwara

ABOUT THE AUTHOR

...view details