ಕರ್ನಾಟಕ

karnataka

ಹುಬ್ಬಳ್ಳಿ: ದರ್ವೇಶ್ ಕಂಪನಿ ಬಹುಕೋಟಿ ವಂಚನೆ ಪ್ರಕರಣ, ಸಿಐಡಿ ಅಧಿಕಾರಿಗಳಿಂದ ದಾಳಿ - CID Raid

By ETV Bharat Karnataka Team

Published : Aug 3, 2024, 3:13 PM IST

Updated : Aug 5, 2024, 1:28 PM IST

ದರ್ವೇಶ್​ ಕಂಪನಿಯಿಂದ ಬಹುಕೋಟಿ ವಂಚನೆ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಹಳೇ ಹುಬ್ಬಳ್ಳಿಯ ವಿಶಾಲನಗರದ ನಿವಾಸವೊಂದರ ಮೇಲೆ ಸಿಐಡಿ ಅಧಿಕಾರಿಗಳು ಬೆಳ್ಳಂಬೆಳಗ್ಗೆ ದಾಳಿ ನಡೆಸಿದ್ದಾರೆ.

ಸಿಐಡಿ ಅಧಿಕಾರಿಗಳಿಂದ ದಾಳಿ
ಸಿಐಡಿ ಅಧಿಕಾರಿಗಳಿಂದ ದಾಳಿ (ETV Bharat)

ಹುಬ್ಬಳ್ಳಿ:ದರ್ವೇಶ್​ ಕಂಪನಿಯಿಂದ ಬಹುಕೋಟಿ ವಂಚನೆ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಹಳೇ ಹುಬ್ಬಳ್ಳಿಯ ವಿಶಾಲನಗರದ ನಿವಾಸವೊಂದರ ಮೇಲೆ ಸಿಐಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ದರ್ವೇಶ್ ಎಂಬ ಕಂಪನಿಯಲ್ಲಿ ಹಣ ಹೂಡಿಕೆ ಮಾಡಿದರೆ ಹೆಚ್ಚುವರಿ ಬಡ್ಡಿ ನೀಡುವ ಆಮಿಷವೊಡ್ಡಿ ವಂಚನೆ ಮಾಡಲಾಗಿತ್ತು ಎಂದು ಆರೋಪಿಸಲಾಗಿದೆ. ರಾಯಚೂರು ನಗರದಲ್ಲಿ ಹಲವರು ಈ ಸಂಬಂಧ ದೂರು ನೀಡಿದ್ದಾರೆ.

ವಂಚನೆ ಆರೋಪ ಸಂಬಂಧ ಅಧಿಕಾರಿಗಳು ಈಗಾಗಲೇ ಕೆಲ ಆರೋಪಿಗಳನ್ನು ಬಂಧಿಸಿದ್ದಾರೆಂದು ಮೂಲಗಳಿಂದ ತಿಳಿದು ಬಂದಿದೆ. ಪ್ರಮುಖ ಆರೋಪಿ ಪತ್ತೆಗಾಗಿ ಇಂದು ಸಿಐಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಇದನ್ನೂ ಓದಿ:ದಾವಣಗೆರೆ: ಪತ್ನಿಯ ಶೀಲ ಶಂಕಿಸಿ ಕೊಲೆ, ಬಳಿಕ ಆತ್ಮಹತ್ಯೆಗೆ ಯತ್ನಿಸಿದ್ದ ಪತಿ ಚಿಕಿತ್ಸೆ ಫಲಿಸದೇ ಸಾವು - HUSBAND SUICIDE

Last Updated : Aug 5, 2024, 1:28 PM IST

ABOUT THE AUTHOR

...view details