ಚಿಕ್ಕಬಳ್ಳಾಪುರ: ಬಿಜೆಪಿ ಅಭ್ಯರ್ಥಿ ಸುಧಾಕರ್ ತನಿಖೆಯ ನಂತರ ಜೈಲಿಗೆ ಹೋಗಲಿದ್ದು, ಭ್ರಷ್ಟ ಬಿಜೆಪಿ ಅಭ್ಯರ್ಥಿಯನ್ನು ಮತ್ತೆ ಸೋಲಿಸುವಂತೆ ಸಿಎಂ ಸಿದ್ದರಾಮಯ್ಯ ಕಾಂಗ್ರೆಸ್ ಅಭ್ಯರ್ಥಿ ರಕ್ಷಾ ರಾಮಯ್ಯ ಪರ ಮತಯಾಚನೆ ನಡೆದರು. ನಗರದ ಪಿಳ್ಳಪ್ಪ ಕಾಂಪ್ಲೆಕ್ಸ್ನಿಂದ ಶಿಡ್ಲಘಟ್ಟ ವೃತ್ತದವರೆಗೂ ಭರ್ಜರಿ ರೊಡ್ ಶೋ ನಡೆಸಿದ ನಂತರ ಅವರು ಮಾತನಾಡಿದರು.
ರಕ್ಷಾ ರಾಮಯ್ಯ ಅವರಿಗೆ ಕ್ಷೇತ್ರದ ಜನತೆ ಆಶೀರ್ವಾದ ಮಾಡಬೇಕು. ಈ ತಿಂಗಳು 26 ಚುನಾವಣೆ ನಡೆಯಲಿದ್ದು ಭ್ರಷ್ಟ ಬಿಜೆಪಿ ಅಭ್ಯರ್ಥಿಯನ್ನು ಮತ್ತೆ ಸೋಲಿಸುವಂತೆ ಸಿಎಂ ಸಿದ್ದರಾಮಯ್ಯ ಕರೆ ನೀಡಿದರು. ಎನ್ಡಿಎ ಅಭ್ಯರ್ಥಿಯಾಗಿರುವ ಸುಧಾಕರ್ ಭ್ರಷ್ಟ ಮಂತ್ರಿಯಾಗಿದ್ದು, ಹಣ ಲೂಟಿ ಮಾಡಿದ್ದಾರೆ ಎಂದು ವಿಧಾನಸಭೆ ಚುನಾವಣೆಯಲ್ಲಿ ಸೋಲಿಸಿ ಮನೆಗೆ ಕಳೆಹಿಸಿದ್ದೀರಿ. ಈಗ ಮತ್ತೆ ಪ್ರಭಾವ ಬಳಸಿ ಲೋಕಸಭೆ ಸ್ಪರ್ಧೆ ಮಾಡಿದ್ದಾರೆ. ನೀವೆಲ್ಲ ತೀರ್ಮಾನ ಮಾಡಬೇಕಾಗಿದೆ. ಒಮ್ಮೆ ತಿರಸ್ಕಾರ ಮಾಡಿದ ಭ್ರಷ್ಟನನ್ನು ಲೋಕಸಭೆ ಕಳುಹಿಸಿಬೇಕಾ ಅಂತಾ ಯೋಚಿಸಬೇಕಾಗಿದೆ. ಮಂತ್ರಿಯಾಗಿದ್ದ ವೇಳೆ ಬಹಳಷ್ಟು ಭ್ರಷ್ಟಾಚಾರ ಮಾಡಿದ್ದಾರೆ. ಇದರ ಬಗ್ಗೆ ಒಂದು ನ್ಯಾಯಾಂಗ ಆಯೋಗ ರಚನೆಯಾಗಿದೆ. ಅದು ತನಿಖೆ ನಡೆಯುತ್ತಿದೆ. ನನಗೆ ಇದ್ದ ಮಾಹಿತಿ ಪ್ರಕಾರ ಎನ್ಡಿಎ ಅಭ್ಯರ್ಥಿ ಮಂತ್ರಿ ವಿರುದ್ದ ಸಾಕಷ್ಟು ಸಾಕ್ಷ್ಯದಾರಗಳಿವೆ. ತನಿಖೆ ಪೂರ್ಣ ಆದ ಮೇಲೆ ತಪ್ಪಿತಸ್ಥರು ಎಂದು ಸಾಬೀತಾಗುತ್ತೆ. ನೂರಕ್ಕೆ ನೂರು ಜೈಲಿಗೆ ಹೋಗಲಿದ್ದಾರೆ. ಆದರಿಂದ ಈ ಚುನಾವಣೆಯಲ್ಲಿ ಅಭ್ಯರ್ಥಿಯನ್ನು ಮತ್ತೊಮ್ಮೆ ಸೋಲಿಸಿ ಎಂದು ಸಿಎಂ ಕ್ಷೇತ್ರದ ಮತದಾರರಲ್ಲಿ ಮನವಿ ಮಾಡಿದರು.