ಕರ್ನಾಟಕ

karnataka

By ETV Bharat Karnataka Team

Published : Feb 10, 2024, 6:58 PM IST

ETV Bharat / state

ಅಮೃತ ಕಾಲವಲ್ಲ, ವಾಸ್ತವದಲ್ಲಿ ಇದು ಭಾರತದ ವಿನಾಶ ಕಾಲ: ಸಿಎಂ ಸಿದ್ದರಾಮಯ್ಯ

ಬಿಜೆಪಿ ಆಡಳಿತವನ್ನು ಅಮೃತಕಾಲ ಎಂದು ಬಣ್ಣಿಸುತ್ತಿದ್ದಾರೆ. ಆದ್ರೆ ವಾಸ್ತವದಲ್ಲಿ ಇದು ಭಾರತದ ವಿನಾಶಕಾಲ ಎಂದು ಸಿಎಂ ಟೀಕಿಸಿದ್ದಾರೆ.

Eಅಮೃತ ಕಾಲವಲ್ಲ, ವಾಸ್ತವದಲ್ಲಿ ಇದು ಭಾರತದ ವಿನಾಶ ಕಾಲ: ಸಿಎಂ ಸಿದ್ದರಾಮಯ್ಯ
ಅಮೃತ ಕಾಲವಲ್ಲ, ವಾಸ್ತವದಲ್ಲಿ ಇದು ಭಾರತದ ವಿನಾಶ ಕಾಲ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕಳೆದ 10 ವರ್ಷಗಳ ಬಿಜೆಪಿ ಆಡಳಿತವನ್ನು ನರೇಂದ್ರ ಮೋದಿಯವರು ಮತ್ತು ಬಿಜೆಪಿಯ ನಾಯಕರು "ಅಮೃತ ಕಾಲ" ಎಂದು ಬಣ್ಣಿಸುತ್ತಿದ್ದಾರೆ. ವಾಸ್ತವದಲ್ಲಿ ಇದು ಭಾರತದ ವಿನಾಶ ಕಾಲ. ಈ ಅವಧಿಯಲ್ಲಿ ದೇಶದ ರೈತರು, ಕಾರ್ಮಿಕರು, ಮಹಿಳೆಯರು, ಯುವಜನರು, ಶೋಷಿತರು ಮತ್ತು ಜನಸಾಮಾನ್ಯರು ಎದುರಿಸುತ್ತಿರುವ ಕಷ್ಟ ಕಾರ್ಪಣ್ಯಗಳು ಐದರಿಂದ ಹತ್ತು ಪಟ್ಟು ಹೆಚ್ಚಾಗಿದೆ ಎಂದು ಸಿಎಂ ಸಿದ್ದರಾಮಯ್ಯ ದೂರಿದ್ದಾರೆ.

ಈ ಸಂಬಂಧ ಪತ್ರಿಕಾ ಪ್ರಕಟಣೆ ಹೊರಡಿಸಿರುವ ಸಿಎಂ, ಹತ್ತು ವರ್ಷಗಳ ಹಿಂದೆ ನರೇಂದ್ರ ಮೋದಿ ಅವರು ಈ ದೇಶದ ಮತದಾರರಿಗೆ ನೀಡಿದ್ದ ಒಂದೇ ಒಂದು ಭರವಸೆಯನ್ನು ಕೂಡ ಪೂರ್ಣ ಪ್ರಮಾಣದಲ್ಲಿ ಈಡೇರಿಸಿಲ್ಲ. ರೈತರ ಆದಾಯ ದುಪ್ಪಟ್ಟು, ಯುವಜನರಿಗೆ ವಾರ್ಷಿಕ 2 ಕೋಟಿ ಉದ್ಯೋಗ, ಮಹಿಳೆಯರಿಗೆ ರಕ್ಷಣೆ, ಕಾರ್ಮಿಕರಿಗೆ ಉದ್ಯೋಗ ಭದ್ರತೆ, ಶೋಷಿತ ಸಮುದಾಯಗಳಿಗೆ ರಕ್ಷಣೆ, ಅಗ್ಗದ ದರದಲ್ಲಿ ಅಗತ್ಯವಸ್ತುಗಳ ಪೂರೈಕೆ ಮೊದಲಾದ ಬಣ್ಣಬಣ್ಣದ ಭರವಸೆಗಳನ್ನು ನೀಡಿ ಮೋದಿಯವರು ಚುನಾವಣೆಯಲ್ಲಿ ಗೆದ್ದಿದ್ದರು. ಗೆದ್ದ ನಂತರ ಜನರಿಗೆ ನೀಡಿದ್ದ ಭರವಸೆಗಳನ್ನು ಮರೆತು ದೇವರು-ಧರ್ಮದ ಹೆಸರಿನಲ್ಲಿ ಭಾವನಾತ್ಮಕ ರಾಜಕಾರಣ, ಉದ್ಯಮಿಗಳ ತುಷ್ಟೀಕರಣದಲ್ಲಿ ಮುಳುಗಿ ಹೋಗಿದ್ದಾರೆ ಎಂದು ಆರೋಪಿಸಿದ್ದಾರೆ.

ಕಳೆದ ಹತ್ತು ವರ್ಷಗಳ ನರೇಂದ್ರ ಮೋದಿಯವರ ಅನ್ಯಾಯಕಾಲದ ವಿವರಗಳನ್ನು ಅಂಕಿಅಂಶಗಳ ಸಹಿತ ಕರ್ನಾಟಕದ ಜನತೆಯ ಮುಂದೆ ಇಡುತ್ತಿದ್ದೇನೆ. ದೇಶ ಇಂದು ಅಮೃತ ಕಾಲದಲ್ಲಿ ಇದೆಯೋ? ಅನ್ಯಾಯದ ಕಾಲದಲ್ಲಿ ಇದೆಯೋ? ಎಂದು ಜನರೇ ತೀರ್ಮಾನಿಸಲಿ ಎಂದು ಹೇಳಿದ್ದಾರೆ.

ಇದನ್ನೂ ಓದಿ:ಬಿಜೆಪಿ ತಂದಿದ್ದ 'ಭೂ ಸುಧಾರಣಾ ಕಾಯ್ದೆ 2020'ಕ್ಕೆ ತಿದ್ದುಪಡಿ: ಸಿಎಂ ಸಿದ್ದರಾಮಯ್ಯ

ABOUT THE AUTHOR

...view details