ಕರ್ನಾಟಕ

karnataka

ನಿನ್ನೆ ಪತಿ, ಇಂದು ಪತ್ನಿ: ಉಡುಪಿಯಲ್ಲಿ ಅಗ್ನಿ ಅವಘಡದಲ್ಲಿ ದಂಪತಿಯ ದುರಂತ ಅಂತ್ಯ - Udupi Fire Incident

By ETV Bharat Karnataka Team

Published : Jul 16, 2024, 7:30 PM IST

ಅಂಬಲಪಾಡಿ ಗಾಂಧಿನಗರದ ಮನೆಯಲ್ಲಿ ಸಂಭವಿಸಿದ ಅಗ್ನಿ ಅವಘಡಕ್ಕೆ ದಂಪತಿ ಬಲಿಯಾಗಿದ್ದಾರೆ. ಸೋಮವಾರ ಪತಿ ಮೃತಪಟ್ಟರೆ, ಇಂದು ಪತ್ನಿ ಸಾವನ್ನಪ್ಪಿದ್ದಾರೆ.

ಉಡುಪಿಯಲ್ಲಿ ಅಗ್ನಿ ಅವಘಡ
ಉಡುಪಿಯಲ್ಲಿ ಅಗ್ನಿ ಅವಘಡ (ETV Bharat)

ಉಡುಪಿ: ಅಂಬಲಪಾಡಿ ಗಾಂಧಿನಗರದ ಮನೆಯಲ್ಲಿ ಸೋಮವಾರ ಸಂಭವಿಸಿದ ಭೀಕರ ಅಗ್ನಿ ಅವಘಡ ಪ್ರಕರಣದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಅಶ್ವಿನಿ ಶೆಟ್ಟಿ(43) ಇಂದು ಮಧ್ಯಾಹ್ನ ವೇಳೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.

ನಿನ್ನೆ ಬೆಳಗಿನ ಜಾವ ಮನೆಯಲ್ಲಿ ಮಲಗಿದ್ದ ವೇಳೆ ಶಾರ್ಟ್ ಸರ್ಕ್ಯೂಟ್‌ನಿಂದ ಉಂಟಾದ ಅಗ್ನಿ ಅವಘಡದಿಂದ ಮನೆಯೊಳಗೆ ಬೆಂಕಿ ಜೊತೆ ದಟ್ಟ ಹೊಗೆ ಆವರಿಸಿತ್ತು. ಪರಿಣಾಮ ತೀವ್ರವಾಗಿ ಅಸ್ವಸ್ಥಗೊಂಡ ಉದ್ಯಮಿ ರಮಾನಂದ ಶೆಟ್ಟಿ ಹಾಗೂ ಅಶ್ವಿನಿ ಶೆಟ್ಟಿ ದಂಪತಿಯನ್ನು ಮಣಿಪಾಲ ಆಸ್ಪತ್ರೆಗೆ ದಾಖಲಾಗಿಸಲಾಗಿತ್ತು. ಇದರಲ್ಲಿ ಗಂಭೀರ ಸ್ಥಿತಿಯಲ್ಲಿದ್ದ ರಮಾನಂದ ಶೆಟ್ಟಿ ಸೋಮವಾರ ಬೆಳಗ್ಗೆಯೇ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದರು.

ಇತ್ತ ಗಂಭೀರ ಸ್ಥಿತಿಯಲ್ಲಿ ಜೀವನ್ಮರಣದ ಹೋರಾಟ ನಡೆಸುತ್ತಿದ್ದ ಅವರ ಪತ್ನಿ ಅಶ್ವಿನಿ ಶೆಟ್ಟಿ ಇಂದು ಮಧ್ಯಾಹ್ನ ವೇಳೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ ಎಂದು ವೈದ್ಯಾಧಿಕಾರಿಗಳು ಮಾಹಿತಿ ನೀಡಿದ್ದಾರೆ. ಈ ಮೂಲಕ ಅಗ್ನಿ ಅವಘಡದಿಂದ ದಂಪತಿ ದುರಂತ ಅಂತ್ಯ ಕಂಡಿದ್ದಾರೆ. ಇವರಿಬ್ಬರ ಅಂತ್ಯಕ್ರಿಯೆ ಆದಿ ಉಡುಪಿಯ ಪಂದು ಬೆಟ್ಟುವಿನಲ್ಲಿರುವ ರಮಾನಂದ ಶೆಟ್ಟಿ ಮೂಲ ಮನೆಯಲ್ಲಿ ನಡೆಯಲಿದೆ ಎಂದು ಮೂಲಗಳು ತಿಳಿಸಿವೆ.

ಈ ಅಗ್ನಿ ದುರಂತದಲ್ಲಿ ಇವರ ಇಬ್ಬರು ಮಕ್ಕಳಾದ ಅಂಶುಲಾ ಶೆಟ್ಟಿ ಹಾಗೂ ಅಭಿಕ್ ಶೆಟ್ಟಿ ರಕ್ಷಿಸಲ್ಪಟ್ಟಿದ್ದರು. ದಟ್ಟ ಹೊಗೆಯಿಂದ ಪಾರಾಗಲು ಇವರು ಕೂಡಲೇ ಶೌಚಾಲಯಕ್ಕೆ ಹೋಗಿ ಬಾಗಿಲು ಹಾಕಿ ಜೀವ ಉಳಿಸಿಕೊಂಡಿದ್ದರು. ಈ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಉಡುಪಿಯಲ್ಲಿ ಅಗ್ನಿ ಅವಘಡ: ಬಾರ್ & ರೆಸ್ಟೋರೆಂಟ್‌ ಮಾಲೀಕ ಸಾವು, ಪತ್ನಿ ಗಂಭೀರ

ಇದನ್ನೂ ಓದಿ:ಶಿರೂರು ಗುಡ್ಡ ಕುಸಿತ: ಮಣ್ಣಿನಡಿ ಸಿಲುಕಿ ಏಳು ಜನರ ದಾರುಣ ಸಾವು, ಮುಂದುವರಿದ ಕಾರ್ಯಾಚರಣೆ - hill collapsed

ABOUT THE AUTHOR

...view details