ಬೆಂಗಳೂರು :ಚನ್ನಪಟ್ಟಣ ಕ್ಷೇತ್ರದ ರಾಜಕಾರಣ ಹೊಸ ಟ್ವಿಸ್ಟ್ ಪಡೆದುಕೊಂಡಿದೆ. ಸದಾಶಿವನಗರದಲ್ಲಿರುವ ಡಿಸಿಎಂ ಡಿ.ಕೆ. ಶಿವಕುಮಾರ್ ನಿವಾಸಕ್ಕೆ ಇಂದು ಬೆಳಗ್ಗೆ ಆಗಮಿಸಿದ ಸಿ.ಪಿ. ಯೋಗೇಶ್ವರ್, ಕೆಲವೊಂದು ಚರ್ಚೆ ನಡೆಸಿ ನಂತರ ಇಬ್ಬರು ಒಂದೇ ಕಾರಿನಲ್ಲಿ ಸಿಎಂ ನಿವಾಸಕ್ಕೆ ಆಗಮಿಸಿದರು.
ಸಿಎಂ ನಿವಾಸದಲ್ಲಿ ಸಿ.ಪಿ. ಯೋಗೇಶ್ವರ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು. ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಸಚಿವರಾದ ಶಿವರಾಜ ತಂಗಡಗಿ, ಜಮೀರ್ ಅಹಮದ್ ಖಾನ್, ಶಾಸಕರಾದ ಡಾ. ಯತೀಂದ್ರ ಸಿದ್ದರಾಮಯ್ಯ, ಪೊನ್ನಣ್ಣ, ಮಾಜಿ ಸಂಸದ ಡಿ.ಕೆ. ಸುರೇಶ್ ಹಾಜರಿದ್ದರು.
ಸಿದ್ದರಾಮಯ್ಯ ಅವರನ್ನು ಭೇಟಿಯಾದ ಯೋಗೇಶ್ವರ್ ಅವರ ಆಶೀರ್ವಾದ ಪಡೆದರು. ನಂತರ ಸಿದ್ದರಾಮಯ್ಯ ಅವರು ಯೋಗೇಶ್ವರ್ ಅವರ ಬೆನ್ನು ತಟ್ಟಿ ಬರಮಾಡಿಕೊಂಡರು.