ಕರ್ನಾಟಕ

karnataka

ETV Bharat / state

ಒಕ್ಕಲಿಗ ಸಚಿವರು, ಶಾಸಕರಿಗೆ ಡಿಸಿಎಂ ಡಿ.ಕೆ.ಶಿವಕುಮಾರ್ ಔತಣಕೂಟ: ಈ ದಿಢೀರ್​ ಸಭೆ ಹಿಂದಿನ ಕಾರಣವೇನು? - DK Shivakumar dinner party

ಒಕ್ಕಲಿಗ ಸಮುದಾಯದ ಸಚಿವರು ಹಾಗೂ ಶಾಸಕರಿಗೆ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಔತಣಕೂಟ ​​ಏರ್ಪಡಿಸಿದ್ದರು.

By ETV Bharat Karnataka Team

Published : Jun 14, 2024, 6:58 AM IST

DCM DK Shivakumar dinner party
ಡಿಸಿಎಂ ಡಿ.ಕೆ.ಶಿವಕುಮಾರ್ ಔತಣಕೂಟ (ETV Bharat)

ಬೆಂಗಳೂರು:ಉಪ ಮುಖ್ಯಮಂತ್ರಿಡಿ.ಕೆ.ಶಿವಕುಮಾರ್ ಅವರು ದಿಢೀರ್​​ ಒಕ್ಕಲಿಗ ಸಮುದಾಯದ ಸಚಿವರು ಹಾಗೂ ಶಾಸಕರಿಗೆ ಔತಣಕೂಟ ಏರ್ಪಡಿಸಿರುವುದು ಕುತೂಹಲ ಮೂಡಿಸಿದೆ. ಡಿಸಿಎಂ ಅವರ ಸದಾಶಿವನಗರ ನಿವಾಸದಲ್ಲಿ ಗುರುವಾರ ರಾತ್ರಿ ಕಾಂಗ್ರೆಸ್ ಪಕ್ಷದ ಒಕ್ಕಲಿಗ ಸಮುದಾಯದ ಮುಖಂಡರ ಔತಣಕೂಟ ನಡೆಯಿತು.

ಡಿಸಿಎಂ ಡಿ.ಕೆ.ಶಿವಕುಮಾರ್ ಔತಣಕೂಟ (ETV Bharat)

ಸಚಿವರಾದ ರಾಮಲಿಂಗಾರೆಡ್ಡಿ, ಕೃಷ್ಣಬೈರೇಗೌಡ, ಎನ್. ಚಲುವರಾಯಸ್ವಾಮಿ, ವೆಂಕಟೇಶ್, ಡಾ. ಎಂ.ಸಿ. ಸುಧಾಕರ್, ಮಾಜಿ ಸಂಸದ ಡಿ.ಕೆ‌. ಸುರೇಶ್ ಹಾಗೂ ಸಂಸದರು, ಶಾಸಕರು, ಮಾಜಿ ಸಂಸದರು, ಮಾಜಿ ಶಾಸಕರು, ಮೇಲ್ಮನೆ ಸದಸ್ಯರು, ಮಾಜಿ ವಿಧಾ‌ನ ಪರಿಷತ್ ಸದಸ್ಯರು ಹಾಗೂ ಮುಖಂಡರು ಔತಣಕೂಟದಲ್ಲಿ ಪಾಲ್ಗೊಂಡಿದ್ದರು.

ಡಿಸಿಎಂ ಡಿ.ಕೆ.ಶಿವಕುಮಾರ್ ಔತಣಕೂಟ (ETV Bharat)

ಲೋಕಸಭೆ ಚುನಾವಣೆಯಲ್ಲಿ ಒಕ್ಕಲಿಗ ಸಮುದಾಯ ಕಾಂಗ್ರೆಸ್ ಕೈ ಹಿಡಿದಿಲ್ಲ ಎಂಬ ಲೆಕ್ಕಾಚಾರ, ಎಡವಿದ್ದೆಲ್ಲಿ ಎಂಬುದರ ಬಗ್ಗೆ ಈ ಸಂದರ್ಭದಲ್ಲಿ ಸಮುದಾಯದ ನಾಯಕರು ಪರಾಮರ್ಶೆ ನಡೆಸಿದ್ದಾರೆ ಎನ್ನಲಾಗಿದೆ. ಚುನಾವಣೆಯಲ್ಲಿ ಒಕ್ಕಲಿಗ ಸಮುದಾಯ ಕೈಕೊಟ್ಟ ಬೆನ್ನಲ್ಲೇ ಅಲರ್ಟ್ ಆದ ಡಿ.ಕೆ. ಶಿವಕುಮಾರ್ ಅವರು, ಒಕ್ಕಲಿಗ ಸಚಿವರು, ಶಾಸಕರಿಗೆ ಔತಣಕೂಟ ಆಯೋಜಿಸುವ ಮೂಲಕ ಸಮುದಾಯದ ಸಚಿವರು, ಶಾಸಕರನ್ನು ವಿಶ್ವಾಸಕ್ಕೆ ಪಡೆಯಲು ಮುಂದಾಗಿದ್ದಾರೆ ಎಂದು ಹೇಳಲಾಗುತ್ತಿದೆ.

ಇದನ್ನೂ ಓದಿ:ಮೂಲಭೂತ ಸೌಕರ್ಯಗಳಿಲ್ಲದ ನರ್ಸಿಂಗ್ ಕಾಲೇಜುಗಳಿಗೆ ಬೀಗ ಜಡಿಯಿರಿ: ಸಚಿವ ಶರಣ್ ಪ್ರಕಾಶ್ ಪಾಟೀಲ್ - Minister Sharan Prakash Patil

ಲೋಕಸಭಾ ಸಮರದಲ್ಲಿ ಹಳೇ ಮೈಸೂರು ಭಾಗ, ಬೆಂಗಳೂರು ಗ್ರಾಮಾಂತರ, ಕೋಲಾರ, ತುಮಕೂರು, ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್​​ಗೆ ಭಾರಿ ಹಿನ್ನೆಡೆಯಾಗಿದ್ದು, ಒಕ್ಕಲಿಗ ಸಮುದಾಯ ಕಾಂಗ್ರೆಸ್ ಕೈ ಹಿಡಿಯಲಿಲ್ಲ ಎಂಬ ಚರ್ಚೆಗಳು ರಾಜಕೀಯ ವಲಯದಲ್ಲಿ ಕೇಳಿಬಂದಿದೆ. ಹಾಗಾಗಿ, ಡಿಕೆಶಿ ಅವರು ಸಮುದಾಯದ ಮುಖಂಡರ ಜೊತೆ ಇದಕ್ಕೆ ಸಂಬಂಧಿಸಿದಂತೆ ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ:ಪೋಕ್ಸೋ ಕೇಸ್​ ರದ್ದು ಕೋರಿದ ಯಡಿಯೂರಪ್ಪ ಅರ್ಜಿ ನಾಳೆ ವಿಚಾರಣೆ - BSY POCSO Case

ಇದನ್ನೂ ಓದಿ:ಗ್ಯಾರಂಟಿ ಯೋಜನೆ ನಿಲ್ಲಿಸುವಂತೆ ಕಾಂಗ್ರೆಸ್​ ಶಾಸಕರೇ ಅಭಿಯಾನ ಶುರು ಮಾಡಿದ್ದಾರೆ: ಶೆಟ್ಟರ್ - SHETTAR ON GUARANTEE SCHEME

ABOUT THE AUTHOR

...view details