ಕರ್ನಾಟಕ

karnataka

ETV Bharat / state

ದಾವಣಗೆರೆ ಬಿಜೆಪಿಯಲ್ಲಿ ಮತ್ತೆ ಭಿನ್ನಮತ ಸ್ಫೋಟ: ಸ್ಪಪಕ್ಷದ ಶಾಸಕನ ವಿರುದ್ಧವೇ ಹರಿಹಾಯ್ದ ನಾಯಕರು - dissent erupted in bjp - DISSENT ERUPTED IN BJP

ಲೋಕಸಭಾ ಚುನಾವಣೆ ಪೂರ್ವದಲ್ಲಿ ದಾವಣಗೆರೆ ಕ್ಷೇತ್ರ ರಾಜಕೀಯ ನಾಯಕರಲ್ಲಿನ ಭಿನ್ನಮತದಿಂದ ಸುದ್ದಿಯಾಗಿತ್ತು. ಫಲಿತಾಂಶದ ಬಳಿಕವೂ ಜಿಲ್ಲಾ ಬಿಜೆಪಿಯಲ್ಲಿ ಭಿನ್ನಮತ ಸ್ಫೋಟಗೊಂಡಿದೆ. ಹರಿಹರ ಶಾಸಕ ಹರೀಶ್ ವಿರುದ್ಧ ಬಿಜೆಪಿ ನಾಯಕರು ವಾಗ್ದಾಳಿ ನಡೆಸಿದ್ದಾರೆ. ಮಾಜಿ ಶಾಸಕ ಎಂ.ಪಿ. ರೇಣುಕಾಚಾರ್ಯ, ಎಸ್​.ಎ ರವೀಂದ್ರನಾಥ್, ಮಾಡಾಳ್ ಅವರು ಶಾಸಕ ಬಿ ಪಿ ಹರೀಶ್​ಗೆ ಎಚ್ಚರಿಕೆ ಕೊಟ್ಟಿದ್ದಾರೆ.

ದಾವಣಗೆರೆ ಬಿಜೆಪಿಯಲ್ಲಿ ಮತ್ತೆ ಭಿನ್ನಮತ ಸ್ಫೋಟ:
ದಾವಣಗೆರೆ ಬಿಜೆಪಿಯಲ್ಲಿ ಮತ್ತೆ ಭಿನ್ನಮತ ಸ್ಫೋಟ: (ETV Bharat)

By ETV Bharat Karnataka Team

Published : Jun 17, 2024, 8:46 PM IST

Updated : Jun 17, 2024, 9:32 PM IST

ದಾವಣಗೆರೆ ಬಿಜೆಪಿಯಲ್ಲಿ ಮತ್ತೆ ಭಿನ್ನಮತ ಸ್ಫೋಟ (ETV Bharat)

ದಾವಣಗೆರೆ:ಲೋಕಸಭಾ ಚುನಾವಣೆ ಫಲಿತಾಂಶ ಹೊರಬಿದ್ದ ಬೆನ್ನಲ್ಲೇ ದಾವಣಗೆರೆ ಜಿಲ್ಲಾ ಬಿಜೆಪಿಯಲ್ಲಿ ಮತ್ತೆ ಭಿನ್ನಮತ ಭುಗಿಲೆದ್ದಿದೆ. ಲೋಕಸಭಾ ಚುನಾವಣೆಯಲ್ಲಿ ಹೊಂದಾಣಿಕೆ ರಾಜಕೀಯದ ಬಗ್ಗೆ ಬಿಜೆಪಿ ಶಾಸಕ ಹರೀಶ್ ಗಂಭೀರ ಆರೋಪ ಮಾಡಿದ್ದರು. ಇದೀಗ ಹರೀಶ್ ವಿರುದ್ಧ ಹೊನ್ನಾಳಿ ಮಾಜಿ ಶಾಸಕ ಎಂ.ಪಿ. ರೇಣುಕಾಚಾರ್ಯ, ಎಸ್​.ಎ ರವೀಂದ್ರನಾಥ್, ಮಾಡಾಳ್ ಮಲ್ಲಿಕಾರ್ಜುನ್‌ ವಾಗ್ದಾಳಿ ನಡೆಸಿದ್ದಾರೆ.

ನಗರದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಮಾಜಿ ಸಚಿವ ಎಂ.ಪಿ ರೇಣುಕಾಚಾರ್ಯ, ಲೋಕಸಭೆ ಚುನಾವಣೆಯಲ್ಲಿ ನಾವು ರವೀಂದ್ರನಾಥ್ ನೇತೃತ್ವದಲ್ಲಿ ಪ್ರಾಮಾಣಿಕವಾಗಿ ಕೆಲಸ ಮಾಡಿದ್ದೇವೆ. ಆದರೆ ಕೆಲವರು ನಮ್ಮ ಮೇಲೆ ಆರೋಪ ಮಾಡುತ್ತಾರೆ. ಬಿ.ಪಿ. ಹರೀಶ್ ಕ್ಷೇತ್ರದಲ್ಲೇ ‌ಕಾಂಗ್ರೆಸ್​ಗೆ ಹೆಚ್ಚು ಮತ ಬಂದಿದೆ. ಜೊತೆಗೆ ಇವರಿಗೆ ಸಾಥ್ ನೀಡಲು ಜೆಡಿಎಸ್ ಮಾಜಿ ಶಾಸಕ ಹೆಚ್​.ಎಸ್​. ಶಿವಶಂಕರ್ ಇದ್ದರು. ಕಳೆದ ವಿಧಾನಸಭೆ ಚುನಾವಣೆಯಲ್ಲಿ ಇವರಿಬ್ಬರು 1 ಲಕ್ಷಕ್ಕೂ ಹೆಚ್ಚು ಮತ ಪಡೆದಿದ್ದರು. ಆದರೆ ಲೋಕಸಭೆ ಚುನಾವಣೆಯಲ್ಲಿ ಕೇವಲ 70 ಸಾವಿರ ಮತ ಬಂದಿದೆ. ತನ್ನ ಕ್ಷೇತ್ರದಲ್ಲೇ ಶಾಸಕ ಬಿ.ಪಿ. ಹರೀಶ್ ಬಿಜೆಪಿಗೆ‌ ಲೀಡ್ ಕೊಟ್ಟಿಲ್ಲ. ಹರಿಹರ ಶಾಸಕ ಹರೀಶ್ ನಮ್ಮ‌ ವಿರುದ್ಧ ಆರೋಪಿಸಿದ್ರೆ ಸುಮ್ಮನಿರಲ್ಲ. ಬಿ ಎಸ್​ ಯಡಿಯೂರಪ್ಪ, ಬಿ.ವೈ.ವಿಜಯೇಂದ್ರ ಬಗ್ಗೆ ಮಾತಾಡಿದ್ರೆ ಸರಿ ಇರಲ್ಲ ಎಂದು ಶಾಸಕ ಹರೀಶ್​ಗೆ ಖಡಕ್ ಎಚ್ಚರಿಕೆ ನೀಡಿದರು.

ಮಾಜಿ ಸಚಿವ ಎಸ್.ಎ. ರವೀಂದ್ರನಾಥ್​ ಮಾತನಾಡಿ, 4 ಬಾರಿ ಗೆದ್ದು ಒಂದು ಬಾರಿ ಸೋತಿದ್ದಕ್ಕೆ ಆತಂಕಪಡುವ ಅಗತ್ಯವಿಲ್ಲ. ಒಂದಿಷ್ಟು ದಿನ ಯಾವುದಾದ್ರು ಆಲದ‌ ಮರ‌ದ ಕೆಳಗೆ ಶಾಂತವಾಗಿ‌ ಕುಳಿತುಕೊಳ್ಳಿ. ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ್​​ ಅವರಿಗೆ ಸೋಲಾಗಿದೆ. ನಾನು ಕೂಡಾ ಐದು ಸಲ ಚುನಾವಣೆಯಲ್ಲಿ ಗೆದ್ದು, 5 ಸಲ ಸೋತಿದ್ದೇನೆ. ಹಾಗಂತ ಸಿಕ್ಕ ಸಿಕ್ಕವರ ಮೇಲೆ ಆರೋಪ ಮಾಡುತ್ತಾ ಸುತ್ತಾಡುತ್ತಿಲ್ಲ. ಈ ಹಿಂದೆ ಪ್ರಚಾರಕ್ಕೆ ಹೋದಾಗ ಕಲ್ಲಿನಿಂದ ಹೊಡೆಯಲು ಬರುತ್ತಿದ್ದರು. ಆದರೆ ಈಗ ಆ ವಾತಾವರಣ ಇಲ್ಲ. ಮತ್ತೆ ಕಾರ್ಯಕರ್ತರ ಬಳಿ ಹೋಗಿ ನಿಮ್ಮ ಮಕ್ಕಳನ್ನಾದ್ರು ಜನ ಗೆಲ್ಲಿಸ್ತಾರೆ. ಸ್ವಲ್ಪ ದಿನ ಶಾಂತವಾಗಿ ಇರಿ ಎಂದು ಸಲಹೆ ಕೊಟ್ಟರು.

ಹೊಸದುರ್ಗದಲ್ಲಿ ಎಸ್. ನಿಜಲಿಂಗಪ್ಪರನ್ನ ಸೊಸೈಟಿ ಅಧ್ಯಕ್ಷ ಸೋಲಿಸಿದ್ದ. ಹರಿಹರ ಹಿರಿಯ ರಾಜಕಾರಣಿ ಸಿದ್ದವೀರಪ್ಪರನ್ನ ಯುವಕ ಸೋಲಿಸಿದ್ದ. ಪ್ರಜಾಪ್ರಭುತ್ವ ವ್ಯವಸ್ಥೆಯ ಈ ಚುನಾವಣೆಯಲ್ಲಿ ಸೋಲು-ಗೆಲುವು ಸಹಜ. ನಮ್ಮ ಮನೆಗೆ ಕಾಂಗ್ರೆಸ್​ ಅಭ್ಯರ್ಥಿ ಡಾ.‌ ಪ್ರಭಾ ‌ಮಲ್ಲಿಕಾರ್ಜುನ ಬಂದಿದ್ದು ನಿಜ‌. ಹಾಗಂತ ಕಾಂಗ್ರೆಸ್ ಜತೆ ಒಳಒಪ್ಪಂದ ಮಾಡಿಕೊಂಡಿದ್ದೇವೆ ಅಂದ್ರೆ ಏನರ್ಥ ಎಂದು ಅವರು ಮಾಜಿ ಸಂಸದ ಜಿಎಂ ಸಿದ್ದೇಶ್ವರಗೆ ಪ್ರಶ್ನಿಸಿದರು.

ಚನ್ನಗಿರಿ ಮಾಜಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಪುತ್ರ ಮಾಡಾಳ್ ಮಲ್ಲಿಕಾರ್ಜುನ ಮಾತನಾಡಿ, ಹರಿಹರ ಬಿಜೆಪಿ ಶಾಸಕ ಬಿ.ಪಿ ಹರೀಶ್ ಒಂದು ಕ್ರಿಮಿ. ಮಾನಸಿಕ ಸ್ಥಿಮಿತ ಕಳೆದುಕೊಂಡು‌ ನನ್ನ ಬಗ್ಗೆ ಹಾಗೂ ನಮ್ಮ ತಂದೆ ವಿರುದ್ಧ ಮಾತಾಡುತ್ತಿದ್ದಾರೆ. ಕೆಲ ದಿ‌ನಗಳ ಹಿಂದೆ ಬೆಂಗಳೂರಿನಲ್ಲಿ ಮಾಧ್ಯಮಗೋಷ್ಟಿ ನಂತರ ದಾವಣಗೆರೆ ನಡೆದ ಕಾರ್ಯಕ್ರಮದಲ್ಲಿ ‌ನಮ್ಮ ತಂದೆ ಮಾಡಾಳ್ ವಿರೂಪಾಕ್ಷಪ್ಪ ಭ್ರಷ್ಟಾಚಾರ ಮಾಡಿದ್ದಾರೆ. ಅದ್ದರಿಂದ ಕಳೆದ ಚುನಾವಣೆಯಲ್ಲಿ ಬಿಜೆಪಿ ಕಡಿಮೆ ಸ್ಥಾನ ಗೆದ್ದಿದೆ ಎಂದು ಹೇಳಿದ್ದರು. ನಮ್ಮ ತಂದೆ ವಿರುದ್ಧ ಇದ್ದ ಕೇಸ್ ಸಹ‌ ಕೋರ್ಟನಲ್ಲಿ ರದ್ದಾಗಿದೆ. ಇದೇ ವಿಚಾರ ಹೇಳಿದೆ. ಇಲ್ಲವಾದ್ರೆ ಜನರೇ ನಿಮ್ಮ ಹುಚ್ಚು ಬಿಡಿಸುತ್ತಾರೆ ಎಂದಿದ್ದು‌ ನಿಜ. ನಮ್ಮ ತಂದೆಯ ವ್ಯಕ್ತಿತ್ವ ಏನು.‌‌? ನಮ್ಮ ಕುಟುಂಬದ ಬಗ್ಗೆ ಮಾತಾಡಲು ಹರೀಶ್ ಯಾರು? ಹರಿಹರದ ಜನ ಅವರಿಗೆ ಮತ ಹಾಕಿ ಗೆಲ್ಲಿಸಿದ್ದಾರೆ. ಆ ಕ್ಷೇತ್ರದ ಜನರ ಸೇವೆ ಮಾಡಲಿ. ಅದು ಬಿಟ್ಟು ನಮ್ಮ ಕುಟುಂಬದ ಬಗ್ಗೆ ಟೀಕೆ ಮಾಡಿದ್ರೆ ಚೆನ್ನಾಗಿರಲ್ಲ ಎಂದು ಎಚ್ಚರಿಕೆ ರವಾನಿಸಿದರು.

ಇದನ್ನೂ ಓದಿ:ಬಿಜೆಪಿ ಜೊತೆ ಹೊಂದಾಣಿಕೆ ಮಾಡಿಕೊಂಡಿಲ್ಲ ಎಂದ ಸಂಸದೆ; ಬಿಎಸ್​ವೈ ಪರ ಶಾಮನೂರು ಬ್ಯಾಟಿಂಗ್ - Prabha Mallikarjun

Last Updated : Jun 17, 2024, 9:32 PM IST

ABOUT THE AUTHOR

...view details