ರಾಯಚೂರು:ನಗರದಲ್ಲಿಕೆಮಿಕಲ್ ಸೇಂದಿ ತಯಾರಿಸುತ್ತಿದ್ದ ಮನೆಯ ಮೇಲೆ ದಾಳಿ ನಡೆಸಿದ ಅಬಕಾರಿ ಪೊಲೀಸರು, ನೂರಾರು ಲೀಟರ್ ಸೇಂದಿಯನ್ನು ವಶಪಡಿಸಿಕೊಂಡ ಘಟನೆ ನಡೆದಿದೆ. ನಗರದ ಮಂಗಳವಾರ ಪೇಟೆ ಬಡಾವಣೆಯಲ್ಲಿ ಈ ದಾಳಿ ನಡೆದಿದೆ.
ರವಿ, ವಿಶ್ವನಾಥ, ಮಾರೆಪ್ಪ ಎಂಬುವರ ಮನೆಗಳ ಮೇಲೆ ದಾಳಿ ನಡೆಸುವ ಮೂಲಕ ಶೋಧ ಮಾಡಿದ್ದು, ಈ ವೇಳೆ ಕೆಮಿಕಲ್ ಸೇಂದಿ ಪತ್ತೆಯಾಗಿದೆ. ನೀರಿನ ಬಾಟಲ್ನಲ್ಲಿ ತುಂಬಿ ಇಡಲಾಗಿದ್ದ ಸುಮಾರು 300 ಲೀಟರ್ ಕೆಮಿಕಲ್ ಸೇಂದಿ ಕಂಡು ಬಂದಿದ್ದು, ಸೇಂದಿ ಜಪ್ತಿ ಸಹಿತ ಮೂವರು ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ ಎಂದು ಅಬಕಾರಿ ಪೊಲೀಸರು ತಿಳಿಸಿದ್ದಾರೆ.