ಕರ್ನಾಟಕ

karnataka

ETV Bharat / state

ದಾವಣಗೆರೆ: ಹಾಸ್ಟೆಲ್​ನಲ್ಲಿ ಅಗ್ನಿ ಅವಘಡ; ಹೊಗೆ ಕಂಡು ಹೊರಗೆ ಓಡಿದ ವಿದ್ಯಾರ್ಥಿಗಳು - Fire Incident

ಶಾರ್ಟ್ ಸರ್ಕ್ಯೂಟ್​ನಿಂದ ಬೆಂಕಿ ಹೊತ್ತಿಕೊಂಡ ಘಟನೆ ದಾವಣಗೆರೆಯ ಹಾಸ್ಟೆಲ್​ವೊಂದರಲ್ಲಿ ಸಂಭವಿಸಿದೆ. ಇದ್ದಕ್ಕಿದ್ದಂತೆ ಹಾಸ್ಟೆಲ್​ನಲ್ಲಿ ಬೆಂಕಿ ಮತ್ತು ಹೊಗೆ ಆವರಿಸಿದ್ದನ್ನು ಕಂಡು ವಿದ್ಯಾರ್ಥಿಗಳು ಹೊರಗೆ ಓಡಿಬಂದು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

By ETV Bharat Karnataka Team

Published : Sep 2, 2024, 12:42 PM IST

fire
ಹಾಸ್ಟೆಲ್​ನಲ್ಲಿ ಬೆಂಕಿ (ETV Bharat)

ಹಾಸ್ಟೆಲ್​ನಲ್ಲಿ ಅಗ್ನಿ ಅವಘಡ (ETV Bharat)

ದಾವಣಗೆರೆ: ನಗರದ ತಿಮ್ಮಾರೆಡ್ಡಿ ಖಾಸಗಿ ಕಾಲೇಜಿನ ಬಾಲಕರ ಹಾಸ್ಟೆಲ್​ನಲ್ಲಿ ಭಾನುವಾರ ರಾತ್ರಿ ಎಲೆಕ್ಟ್ರಿಕ್ ಪ್ಯಾನೆಲ್ ಬೋರ್ಡ್​ನಲ್ಲಿ ಶಾರ್ಟ್ ಸರ್ಕ್ಯೂಟ್​ ಪರಿಣಾಮ ಬೆಂಕಿ ಅವಘಡ ಸಂಭವಿಸಿದೆ. ಘಟನೆಯಲ್ಲಿ ಲಕ್ಷಾಂತರ ಮೌಲ್ಯದ ವಿದ್ಯುತ್ ಸಾಮಗ್ರಿ ಬೆಂಕಿಗಾಹುತಿಯಾಗಿದ್ದು, ಭಾರಿ ದುರಂತ ತಪ್ಪಿದೆ‌.

ನಗರದ ಅನಂತಭವನ ವೃತ್ತದ ಹಿಂಭಾಗದಲ್ಲಿರುವ ತಿಮ್ಮಾರೆಡ್ಡಿ ಕಾಲೇಜಿನ ಹಾಸ್ಟೆಲ್​ನಲ್ಲಿ ಈ ಘಟನೆ ನಡೆದಿದೆ. ​ಇದ್ದಕ್ಕಿದ್ದಂತೆ ಪ್ಯಾನೆಲ್ ಬೋರ್ಡ್​ನಲ್ಲಿ ಶಾರ್ಟ್​​ ಸರ್ಕ್ಯೂಟ್ ಆಗಿ ಬೆಂಕಿ ಹೊತ್ತಿಕೊಂಡಿದೆ. 3 ಅಂತಸ್ತಿನ ಕಟ್ಟಡದಲ್ಲಿ ದಟ್ಟ ಹೊಗೆ ಕಂಡುಬಂದಿದ್ದನ್ನು ಅರಿತ ವಿದ್ಯಾರ್ಥಿಗಳು ಆತಂಕದಿಂದ ಹೊರಗೆ ಓಡಿ ಬಂದಿದ್ದಾರೆ.

ಮಾಹಿತಿ ತಿಳಿದು ಸ್ಥಳಕ್ಕೆ ದೌಡಾಯಿಸಿದ ಬೆಸ್ಕಾಂ ಮತ್ತು ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ವಿದ್ಯಾರ್ಥಿಗಳ ಸಮಯಪ್ರಜ್ಞೆಯಿಂದ ಹೆಚ್ಚಿನ ಅವಘಡ ತಪ್ಪಿದೆ.

ಘಟನೆಯಲ್ಲಿ ಲಕ್ಷಕ್ಕೂ ಅಧಿಕ ಮೌಲ್ಯದ ವಿದ್ಯುತ್ ಸಾಮಗ್ರಿ ಬೆಂಕಿಗೆ ಆಹುತಿಯಾಗಿದೆ. ಬೆಂಕಿ ಕಾಣಿಸಿಕೊಂಡ ಬೆನ್ನಲ್ಲೇ ಸ್ಥಳದಲ್ಲಿ ಅಪಾರ ಸಂಖ್ಯೆಯ ಜನರು ನೆರೆದಿದ್ದರು. ಪೊಲೀಸರು ಕೆಲಕಾಲ ಜನರನ್ನು ನಿಯಂತ್ರಿಸಲು ಹರಸಾಹಸಪಟ್ಟರು. ಅದೃಷ್ಟವಶಾತ್ ಯಾರಿಗೂ ತೊಂದರೆ ಆಗಿಲ್ಲ ಎಂದು ತಿಳಿದುಬಂದಿದೆ.

ಇದನ್ನೂ ಓದಿ:ಬೆಂಗಳೂರು: ತಲ್ವಾರ್ ತೋರಿಸಿ ಡೆಲಿವರಿ ಬಾಯ್‌ಗಳನ್ನು ದೋಚುತ್ತಿದ್ದ ಮೂವರ ಬಂಧನ - Robbery Case

ABOUT THE AUTHOR

...view details