ಕರ್ನಾಟಕ

karnataka

ETV Bharat / state

ಪ್ರತ್ಯೇಕ ರಸ್ತೆ ಅಪಘಾತ: ಇಬ್ಬರು ಮಕ್ಕಳು ಸೇರಿ ಐದು ಜನ ಸಾವು

ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ ಇಬ್ಬರು ಮಕ್ಕಳು ಸೇರಿದಂತೆ ಒಟ್ಟು ಐದು ಜನ ಮೃತಪಟ್ಟ ಘಟನೆ ನಡೆದಿದೆ. ಘಟನೆ ಸಂಬಂಧ ಬೇರೆ ಬೇರೆ ಪೊಲೀಸ್​ ಠಾಣೆಯಲ್ಲಿ ದೂರು ದಾಖಲಾಗಿದೆ.

By ETV Bharat Karnataka Team

Published : Feb 27, 2024, 7:32 AM IST

ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಬಳ್ಳಾರಿ: ನಿಂತಿದ್ದ ಎತ್ತಿನ ಬಂಡಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಬೈಕ್​ನಲ್ಲಿ ಚಲಿಸುತ್ತಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟು, ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬಳ್ಳಾರಿ ಜಿಲ್ಲೆಯ ಸಂಡೂರು ತಾಲೂಕಿನ ಹೊಸ ದರೋಜಿ ಗ್ರಾಮದ ಬಳಿ ಸೋಮವಾರ ಸಂಜೆ ನಡೆದಿದೆ.

ಒಂದೇ ಬೈಕ್​​ನಲ್ಲಿ ಐದು ಜನ ಪ್ರಯಾಣ ಮಾಡುತ್ತಿದ್ದು, ಚಾಲಕನ ನಿರ್ಲಕ್ಷ್ಯದಿಂದಾಗಿ ಈ ದುರಂತ ಸಂಭವಿಸಿದೆ ಎನ್ನಲಾಗುತ್ತಿದೆ. ವಿಜಯನಗರ ಜಿಲ್ಲೆಯ ಜಂಬುನಾಥನ ಹಳ್ಳಿಯ ವೆಂಕಟೇಶ(46), ಹೊಸಪೇಟೆಯ ಅಖಿಲಾ(06), ಆಶಾ (08) ಮೃತ ದುರ್ದೈವಿಗಳು ಎಂದು ತಿಳಿದು ಬಂದಿದೆ.

ನಾಲ್ಕು ವರ್ಷದ ಸರಸ್ವತಿ ಹಾಗೂ ಜಂಬಕ್ಕ ಎಂಬುವರಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ಬಳ್ಳಾರಿ ಟ್ರಾಮ್ ಕೇರ್​​ನಲ್ಲಿ ದಾಖಲು ಮಾಡಲಾಗಿದೆ. ಘಟನಾ ಸ್ಥಳಕ್ಕೆ ತೋರಣಗಲ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದು, ತೋರಣಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಲಬುರಗಿಯಲ್ಲಿ ಮಾವ - ಸೊಸೆ ಸಾವು:ಮತ್ತೊಂದೆಡೆ ಕಲಬುರಗಿ ತಾಲೂಕಿನ ಅವರಾದ ಗ್ರಾಮದಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮಾವ ಹಾಗೂ ಸೊಸೆ ಮೃತಪಟ್ಟ ಘಟನೆ ನಡೆದಿದೆ. ಗುರುನಾಥ್(46) ಹಾಗೂ ಸಂಗೀತಾ (32) ಮೃತ ದುರ್ದೈವಿಗಳು. ಗ್ರಾಮದಿಂದ ಕಮಲಾಪೂರ ತಾಲೂಕು ಪ್ರವೇಶ ಮಾಡುವ ಸ್ವಾಗತ ಕಮಾನ್ ಬಳಿ ನಿಂತಿದ್ದ ಲಾರಿಗೆ ಇವರ ಬೈಕ್ ಡಿಕ್ಕಿ ಹೊಡೆದಿದೆ. ಪರಿಣಾಮ ಸ್ಥಳದಲ್ಲಿಯೇ ಇಬ್ಬರು ಮೃತಪಟ್ಟಿದ್ದಾರೆ.

ಘಟನೆಯಲ್ಲಿ ಲಕ್ಷ್ಮಣ್ ಎಂಬುವರಿಗೆ ಗಂಭೀರ ಸ್ವರೂಪದ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಕಲಬುರಗಿ ತಾಲೂಕಿನ ಬೇಲೂರು ಗ್ರಾಮದಿಂದ ಬಸವಕಲ್ಯಾಣಕ್ಕೆ ಮದುವೆಗೆ ಎಂದು ಹೋಗುವಾಗ ಈ ಘಟನೆ ನಡೆದಿದೆ. ಕಲಬುರಗಿ ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.

ಇದನ್ನೂ ಓದಿ:ಪ್ರತ್ಯೇಕ ಅಪಘಾತ; ಒಂದೇ ದಿನದಲ್ಲಿ 12 ಜನ ಸಾವು, 40ಕ್ಕೂ ಹೆಚ್ಚು ಮಂದಿಗೆ ಗಾಯ

ABOUT THE AUTHOR

...view details