ಕರ್ನಾಟಕ

karnataka

By ETV Bharat Sports Team

Published : Aug 7, 2024, 6:03 PM IST

ETV Bharat / state

ಪ್ಯಾರಿಸ್​ ಒಲಿಂಪಿಕ್ಸ್‌ನಲ್ಲಿ ವಿನೇಶ್ ಫೋಗಟ್‌ಗೆ ಆಘಾತ: ಧೈರ್ಯ ತುಂಬಿದ ಸಿಎಂ, ಮಾಜಿ ಸಿಎಂ - Vinesh Phogat

ವಿನೇಶ್​ ಫೋಗಟ್​ ಅವರನ್ನು ಪ್ಯಾರಿಸ್​ ಒಲಿಂಪಿಕ್ಸ್​ನ ಮಹಿಳಾ ಕುಸ್ತಿ ಫೈನಲ್​ ಪಂದ್ಯದಿಂದ ಅನರ್ಹಗೊಳಿಸಿರುವುದು ದೊಡ್ಡ ಅನ್ಯಾಯ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದು, ಈ ಬಗ್ಗೆ ಒಲಿಂಪಿಕ್ಸ್​ ಮಂಡಳಿಯಲ್ಲಿ ಚರ್ಚೆ ನಡೆಯಬೇಕು ಎಂದು ಆಗ್ರಹಿಸಿದ್ದಾರೆ.

ಸಿದ್ಧರಾಮಯ್ಯ, ವಿನೇಶ್ ಫೋಗಟ್​, ಬಸವರಾಜ್​ ಬೊಮ್ಮಾಯಿ
ಸಿದ್ಧರಾಮಯ್ಯ, ವಿನೇಶ್ ಫೋಗಟ್​, ಬಸವರಾಜ್​ ಬೊಮ್ಮಾಯಿ (ETV Bharat)

ಬೆಂಗಳೂರು/ನವದೆಹಲಿ: ಅಂತಾರಾಷ್ಟ್ರೀಯ ಕುಸ್ತಿಪಟು ವಿನೇಶ್​ ಫೋಗಟ್ ಅವರ ದೇಹ ತೂಕ 100 ಗ್ರಾಂ ಹೆಚ್ಚಳವಾಗಿದೆ ಎಂದು ಅವರನ್ನು ಒಲಿಂಪಿಕ್ಸ್‌ ಸ್ಪರ್ಧೆಯಿಂದ ಅನರ್ಹಗೊಳಿಸಿರುವುದು ದೊಡ್ಡ ಅನ್ಯಾಯ. ಒಲಿಂಪಿಕ್ಸ್ ಕೂಟದ ಕಾನೂನು ಪುನರ್ ವಿಮರ್ಶೆ ಮಾಡುವ ಅಗತ್ಯವಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು.

ಇಂದು ನವದೆಹಲಿಯಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, "ಸಾಮಾನ್ಯವಾಗಿ ಯಾವುದಾದರೂ ಆಟದ ಆರಂಭದಲ್ಲಿ ತೂಕ ಮತ್ತು ಇತರ ಅರ್ಹತೆಗಳನ್ನು ನೋಡುತ್ತಾರೆ. ಆದರೆ, ಪ್ರತಿಯೊಂದು ರೌಂಡ್​ನಲ್ಲಿಯೂ ತೂಕ ನೋಡುವುದು ಬೇರೆ ಯಾವುದೇ ಆಟದಲ್ಲಿ ನೋಡಿಲ್ಲ. ಈ ಒಲಿಂಪಿಕ್ಸ್​ನಲ್ಲಿ ತೂಕ ನೋಡಿರುವುದು ಪ್ರಶ್ನಾರ್ಹ. ಪ್ರತಿದಿನ ವ್ಯಕ್ತಿಯ ತೂಕದಲ್ಲಿ ನೂರರಿಂದ ಮುನ್ನೂರು ಗ್ರಾಂ ವ್ಯತ್ಯಾಸವಾಗುತ್ತಿರುತ್ತದೆ. ಅವರ ತೂಕದಲ್ಲಿ ನೂರು ಗ್ರಾಂ ಹೆಚ್ಚಾಗಿದೆ ಎಂದು ಸ್ಪರ್ಧೆಯಿಂದ ಅಮಾನತು ಮಾಡುವುದು ಸಮಂಜಸ ಅಲ್ಲ" ಎಂದರು.

ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ:ಇದಕ್ಕೂ ಮುನ್ನ ಸಿಎಂ ಸಿದ್ದರಾಮಯ್ಯ ಇದೇ ವಿಚಾರವಾಗಿ ಟ್ವೀಟ್​ ಮೂಲಕ ಪ್ರತಿಕ್ರಿಯಿಸಿ, ಪ್ಯಾರಿಸ್​ ಒಲಿಂಪಿಕ್ಸ್​ನಲ್ಲಿ ಇದೊಂದು ದುರಾದೃಷ್ಟಕರ ಘಟನೆ. ವಿನೇಶ್​ ಫೋಗಟ್​ ನಿಮ್ಮ ಶಕ್ತಿ, ಸ್ಥಿತಿಸ್ಥಾಪಕತ್ವ ಮತ್ತು ಸಮರ್ಪಣೆ ಯಾವಾಗಲೂ ರಾಷ್ಟ್ರವನ್ನು ಪ್ರೇರೇಪಿಸುತ್ತದೆ. ನಿಮ್ಮ ಸಾಧನೆಗಳು ಮತ್ತು ಭಾರತಕ್ಕೆ ನೀವು ತಂದ ಗೌರವ ಎಂದಿಗೂ ಕಡಿಮೆ ಆಗಲ್ಲ. ಧೈರ್ಯವಾಗಿರಿ. ನಾವು ನಿಮ್ಮನ್ನು ಮತ್ತು ನಿಮ್ಮ ಈ ಸುದೀರ್ಘವಾದ ಪ್ರಯಾಣವನ್ನು ಮರೆಯಲ್ಲ. ನೀವೂ ಎಂದೆಂದಿಗೂ ಚಾಂಪಿಯನ್​ ಎಂದು ಧೈರ್ಯ ತುಂಬಿದ್ದಾರೆ.

ಇದನ್ನೂ ಓದಿ:ವಿನೇಶ್​​ ಫೋಗಟ್​ ಅನರ್ಹತೆ: ಧೈರ್ಯ ತುಂಬಿದ ಪ್ರಧಾನಿ ಮೋದಿ, ಸಿಎಂ ಸಿದ್ದರಾಮಯ್ಯ ​ - Paris Olympics 2024

ABOUT THE AUTHOR

...view details