ಕರ್ನಾಟಕ

karnataka

ETV Bharat / state

ಬೆಂಗಳೂರು: ಸಿಲಿಂಡರ್ ಗೋದಾಮಿನ ಪಕ್ಕದಲ್ಲೇ ಸ್ಫೋಟ, ತಪ್ಪಿದ ಭಾರೀ ಅನಾಹುತ - Gas leakage and explosion

ಸಿಲಿಂಡರ್ ಗೋದಾಮಿನ ಪಕ್ಕದಲ್ಲೇ ಗ್ಯಾಸ್ ಸೋರಿಕೆಯಾಗಿ ಸ್ಫೋಟಗೊಂಡಿದ್ದು, ಸಂಭವಿಸಬೇಕಾಗಿದ್ದ ಅನಾಹುತವೊಂದು ಸ್ವಲ್ಪದರಲ್ಲೇ ತಪ್ಪಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

By ETV Bharat Karnataka Team

Published : Mar 22, 2024, 1:47 PM IST

GAS LEAKAGE  HUGE DISASTER  EXPLOSION  GAS CYLINDER
ತಪ್ಪಿದ ಭಾರಿ ಅನಾಹುತ

ಬೆಂಗಳೂರು:ಗ್ಯಾಸ್ ಸೋರಿಕೆಯಿಂದ ಸಿಲಿಂಡರ್ ಗೋದಾಮಿನ ಬಳಿ ಸ್ಫೋಟ ಸಂಭವಿಸಿರುವ ಘಟನೆ ಕಲಾಸಿಪಾಳ್ಯ ಠಾಣಾ ವ್ಯಾಪ್ತಿಯ ಮಾವಳ್ಳಿಯ ಕೃಂಬಿಗಲ್ ರಸ್ತೆಯಲ್ಲಿ ನಡೆದಿದೆ. ಸುಮಾರು 300ಕ್ಕೂ ಅಧಿಕ ಸಿಲಿಂಡರ್​ಗಳನ್ನ ಗೋದಾಮಿನಲ್ಲಿ ಸಂಗ್ರಹಿಸಿಡಲಾಗಿತ್ತು. ನೋಡಿಕೊಳ್ಳಲು ಓರ್ವ ವ್ಯಕ್ತಿ ಸಹ ಇದ್ದ. ಗ್ಯಾಸ್​ ಗೋದಾಮಿನ ಪಕ್ಕದಲ್ಲೇ ಆತನ ರೂಮ್​ ಇತ್ತು. ಆತನ ರೂಮ್​ನಲ್ಲಿದ್ದ ಸಿಲಿಂಡರ್​ನಿಂದ ಗ್ಯಾಸ್ ಸೋರಿಕೆಯಾದ ಪರಿಣಾಮ ಸ್ಫೋಟ ಸಂಭವಿಸಿದೆ ಎನ್ನಲಾಗಿದ್ದು, ಕಟ್ಟಡದ ಗೋಡೆಗಳು ಬಿರುಕು ಬಿಟ್ಟಿವೆ.

ಸ್ಫೋಟದಿಂದ ಓರ್ವ ವ್ಯಕ್ತಿ ಗಾಯಗೊಂಡಿದ್ದು, ಅದೃಷ್ಟವಶಾತ್ ಭಾರಿ ಅನಾಹುತವೊಂದು ತಪ್ಪಿದಂತಾಗಿದೆ. ಸ್ಥಳಕ್ಕೆ ಕಲಾಸಿಪಾಳ್ಯ ಠಾಣಾ ಪೊಲೀಸರು ಭೇಟಿ ನೀಡಿ ಮುಂದಿನ ಕ್ರಮ ಕೈಗೊಂಡಿದ್ದಾರೆ. ಈ ಘಟನೆ ಕುರಿತು ಇನ್ನಷ್ಟು ಮಾಹಿತಿ ಲಭ್ಯವಾಗಬೇಕಿದೆ.

ಓದಿ:ಕೇಜ್ರಿವಾಲ್ ಬಂಧನ ಖಂಡಿಸಿ ಇಂದು ರಾಷ್ಟ್ರವ್ಯಾಪಿ ಪ್ರತಿಭಟನೆಗೆ ಕರೆ ನೀಡಿದ ಆಪ್‌ - AAP Protest

ABOUT THE AUTHOR

...view details