ಕರ್ನಾಟಕ

karnataka

ETV Bharat / state

ರಾಜ್ಯದಲ್ಲಿ ಡೆಂಗ್ಯೂ ಪ್ರಕರಣಗಳ ಹೆಚ್ಚಳ ಕುರಿತು ದಾಖಲಿಸಿದ್ದ ಸ್ವಯಂಪ್ರೇರಿತ ಅರ್ಜಿ ವಿಚಾರಣೆ ಮುಂದೂಡಿದ ಹೈಕೋರ್ಟ್ - DENGUE CASES IN KARNATAKA - DENGUE CASES IN KARNATAKA

ರಾಜ್ಯದಲ್ಲಿ ಡೆಂಗ್ಯೂ ಪ್ರಕರಣಗಳ ಹೆಚ್ಚಳ ಕುರಿತು ದಾಖಲಿಸಿದ್ದ ಸ್ವಯಂಪ್ರೇರಿತ ಅರ್ಜಿಯನ್ನು ಹೈಕೋರ್ಟ್ ಮುಂದೂಡಿದೆ.

VOLUNTARY PETITION
ಹೈಕೋರ್ಟ್ (RTV Bharat)

By ETV Bharat Karnataka Team

Published : Jul 24, 2024, 4:29 PM IST

ಬೆಂಗಳೂರು: ರಾಜಧಾನಿ ಬೆಂಗಳೂರು ನಗರ ಸೇರಿದಂತೆ ರಾಜ್ಯದ ಗ್ರಾಮೀಣ ಭಾಗಗಳಲ್ಲಿ ಡೆಂಗ್ಯೂ ಪ್ರಕರಣಗಳ ಹೆಚ್ಚಳ ಕುರಿತಂತೆ ದಾಖಲಿಸಿಕೊಂಡಿದ್ದ ಸ್ವಯಂಪ್ರೇರಿತ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ಸಂಬಂಧ ಅಮೈಕಸ್ ಕ್ಯೂರಿಯನ್ನಾಗಿ(ನ್ಯಾಯಾಲಯಕ್ಕೆ ನೆರವಾಗಲು) ಹಿರಿಯ ವಕೀಲ ಕೆ.ಎನ್.ಫಣೀಂದ್ರ ಅವರನ್ನು ನೇಮಕ ಮಾಡಿ ಹೈಕೋರ್ಟ್ ಆದೇಶಿಸಿದೆ. ಅರ್ಜಿ ವಿಚಾರಣೆ ನಡೆಸಿದ ಎನ್.ವಿ. ಅಂಜಾರಿಯಾ ಮತ್ತು ನ್ಯಾಯಮೂರ್ತಿ ಕೆ.ವಿ. ಅರವಿಂದ್ ಅವರಿದ್ದ ನ್ಯಾಯಪೀಠ ಈ ಆದೇಶ ಮಾಡಿತು.

ಅಲ್ಲದೆ, ಅರ್ಜಿಗೆ ಸಂಬಂಧಿಸಿದಂತೆ ಎಲ್ಲ ದಾಖಲೆಗಳನ್ನು ಫಣೀಂದ್ರ ಅವರಿಗೆ ಹಸ್ತಾಂತರಿಸಬೇಕು ಎಂದು ಸೂಚನೆ ನೀಡಿ ವಿಚಾರಣೆಯನ್ನು ಜುಲೈ 31ಕ್ಕೆ ಮುಂದೂಡಿತು.

ಈ ಹಿಂದೆ ಅರ್ಜಿ ವಿಚಾರಣೆ ನಡೆಸಿದ್ದ ನ್ಯಾಯಪೀಠ, ಉತ್ತಮ ವಾತಾವರಣದಲ್ಲಿ ಬದುಕುವುದು ಸಂವಿಧಾನ ಪರಿಚ್ಛೇದ 21ರ ಅಡಿಯಲ್ಲಿ ಮೂಲಭೂತ ಹಕ್ಕಾಗಿದೆ ಎಂದು ಪೀಠ ತಿಳಿಸಿತು. ಅಲ್ಲದೇ ಬೆಂಗಳೂರು ನಗರ ಸೇರಿದಂತೆ ರಾಜ್ಯದ ಗ್ರಾಮೀಣ ಭಾಗಗಳಲ್ಲಿ ಸೊಳ್ಳೆಗಳನ್ನು ನಿಂತ್ರಿಸಿ ಡೆಂಗ್ಯೂ ಹರಡದಂತೆ ತಡೆಯಲು ರಾಜ್ಯ ಸರ್ಕಾರ ಕೈಗೊಂಡಿರುವ ಕ್ರಮಗಳು, ರಾಜ್ಯಾದ್ಯಂತ ಡೆಂಗ್ಯೂ ರೋಗಿಗಳಿಗಾಗಿ ಒದಗಿಸಿರುವ ವೈದ್ಯಕೀಯ ಮೂಲ ಸೌಲಭ್ಯಗಳ ಕುರಿತ ಸಂಪೂರ್ಣ ವಿವರ, ಈ ಕುರಿತಂತೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಕೈಗೊಂಡಿರುವ ಕ್ರಮಗಳು, ಸೊಳ್ಳೆಗಳ ಸಂಖ್ಯೆ ನಿಯಂತ್ರಣಕ್ಕಾಗಿ ಕೈಗೊಂಡಿರುವ ಕ್ರಮಗಳ ಕುರಿತು ವಿವರಣೆ ನೀಡಬೇಕು ಎಂದು ನ್ಯಾಯಪೀಠ ತನ್ನ ಆದೇಶದಲ್ಲಿ ತಿಳಿಸಿತು.

ಅಲ್ಲದೆ, ರಿಜಿಸ್ಟ್ರಾರ್ ಜನರಲ್ ಅವರು ಪ್ರಕರಣದಲ್ಲಿ ಪ್ರತಿವಾದಿಗಳಾಗಿರುವ ಸರ್ಕಾರ, ಎಲ್ಲಾ ಪ್ರಾಧಿಕಾರಗಳಿಗೆ ಅರ್ಜಿ ಸಲ್ಲಿಕೆಗೆ ಇರುವ ಪ್ರಕ್ರಿಯೆಗಳು ಪೂರ್ಣಗೊಳ್ಳದಿದ್ದರೂ ಇಂದೇ ನೋಟಿಸ್ ತಲುಪುವಂತೆ ವ್ಯವಸ್ಥೆ ಮಾಡಬೇಕು ಎಂದು ಸೂಚನೆ ನೀಡಿತು.

ಇದನ್ನೂ ಓದಿ:ಒಂದೇ ಕಡೆ 2 ಡೆಂಗ್ಯೂ ಕೇಸ್​ ದಾಖಲಾದರೆ ಆ ಪ್ರದೇಶ ಹಾಟ್​ ಸ್ಪಾಟ್ ಆಗಿ ಘೋಷಣೆ; ಸಚಿವ ದಿನೇಶ್ ಗುಂಡೂರಾವ್ - DENGUE CASES IN STATE

ABOUT THE AUTHOR

...view details