ಕರ್ನಾಟಕ

karnataka

ETV Bharat / state

ಉತ್ತರ ಕನ್ನಡ: ಕಾರಿನಲ್ಲಿ ಗೋವಾ ಮದ್ಯ ಸಾಗಾಟ ಪ್ರಕರಣ; ಹೆಡ್​ ಕಾನ್ಸ್​ಟೇಬಲ್​ ಅಮಾನತು - GOA LIQUOR TRANSPORT CASE

ಗೋವಾ ಮದ್ಯ ಸಾಗಾಟ ಪ್ರಕರಣ ಸಂಬಂಧ ಹಳಿಯಾಳ ಪೊಲೀಸ್ ಠಾಣೆಯ ಹೆಡ್​ ಕಾನ್ಸ್​ಟೇಬಲ್​ವೊಬ್ಬರನ್ನು ಅಮಾನತು ಮಾಡಲಾಗಿದೆ.

GOA LIQUOR TRANSPORT CASE
ಕಾರಿನಲ್ಲಿ ಗೋವಾ ಮದ್ಯ ಸಾಗಾಟ (ETV Bharat)

By ETV Bharat Karnataka Team

Published : Feb 8, 2025, 9:50 AM IST

ಕಾರವಾರ (ಉತ್ತರಕನ್ನಡ):ಜಿಲ್ಲೆಯ ಅಂಕೋಲಾ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 66ರ ಹಟ್ಟಿಕೇರಿ ಬಳಿ ಕಾರಿನಲ್ಲಿ ಅಕ್ರಮವಾಗಿ ಮದ್ಯ ಸಾಗಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಅಂಕೋಲಾ ಠಾಣೆ ಪೊಲೀಸರು ಬಂಧಿಸಿದ್ದಾರೆ. ಪ್ರಕರಣ ಸಂಬಂಧ ಹಳಿಯಾಳ ಪೊಲೀಸ್ ಠಾಣೆಯ ಹೆಡ್​ ಕಾನ್ಸ್​ಟೇಬಲ್​​ ಸಂತೋಷ ಲಮಾಣಿ ಅವರನ್ನು ಅಮಾನತು ಮಾಡಲಾಗಿದೆ.

ಈ ಬಗ್ಗೆ ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ ಎಂ.ನಾರಾಯಣ ಆದೇಶ ಹೊರಡಿಸಿದ್ದಾರೆ. ಖಚಿತ ಮಾಹಿತಿ ಮೇರೆಗೆ ಕಾರವಾರದ ಕಡೆಯಿಂದ ಬರುತ್ತಿದ್ದ ಕಾರನ್ನು ಪೊಲೀಸರು ಅಡ್ಡಗಟ್ಟಿ ತಪಾಸಣೆ ನಡೆಸಿದಾಗ 80,905 ರೂಪಾಯಿ ಮೌಲ್ಯದ ಗೋವಾ ಮದ್ಯ ದೊರೆತಿತ್ತು. ಪ್ರಕರಣ ಸಂಬಂಧ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದ ಪಾಂಡವಪುರ ಮೂಲದ ದಿವಾಕರ ಆರ್.ಈರಯ್ಯ (33) ಮತ್ತು ಮಾದೇವ ಕೆ.ಕೃಷ್ಣಪ್ಪ (40) ಎಂಬವರನ್ನು ಬಂಧಿಸಲಾಗಿದೆ.

ಎಸ್​ಪಿ ಆದೇಶದ ವಿವರ:ಆರೋಪಿಗಳು ಈ ಹಿಂದೆ ಮದ್ಯ ಸಾಗಾಟ ಪ್ರಕರಣವೊಂದರಲ್ಲಿ ಸಿಕ್ಕಿ ಬಿದ್ದಿದ್ದ ಹಳಿಯಾಳ ಪೊಲೀಸ್ ಠಾಣೆಯ ಸಂತೋಷ ಲಮಾಣಿ ಹೆಸರನ್ನು ಹೇಳಿದ್ದಾರೆ. ಕಳೆದ ಕೆಲ ತಿಂಗಳುಗಳ ಹಿಂದಷ್ಟೇ ಗೋವಾ ಅಕ್ರಮ ಸಾರಾಯಿ ಸಾಗಾಟ ಪ್ರಕರಣದಲ್ಲಿ ಗೋಕರ್ಣ ಪೊಲೀಸರಿಗೆ ಸಿಕ್ಕಿಬಿದ್ದಿದ್ದರು. ಇದೀಗ ಮತ್ತೆ ಹೆಡ್​ ಕಾನ್ಸ್​ಟೇಬಲ್ ಅಣತಿ ಮೇರೆಗೆ ಅಕ್ರಮ ಗೋವಾ ಮದ್ಯ ಸಾಗಾಟ ಮಾಡುತ್ತಿರುವ ಬಗ್ಗೆ ಬಂಧಿತ ಆರೋಪಿಗಳು ತಿಳಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಹೆಡ್​ ಕಾನ್ಸ್​ಟೇಬಲ್ ಸಂತೋಷರನ್ನು ಅಮಾನತುಗೊಳಿಸಲಾಗಿದೆ ಎಂದು ಎಸ್​ಪಿ ಆದೇಶದಲ್ಲಿ ತಿಳಿಸಿದ್ಧಾರೆ.

ವಿಚಾರಣೆ ವೇಳೆ ಆರೋಪಿಗಳು, ಆಕಾಶ ಹಾಗೂ ಸಂತೋಷ್ ಎನ್ನುವವರು ತಮ್ಮ‌ಕಾರಿಗೆ ಮದ್ಯ ಲೋಡ್ ಮಾಡಿ ಗೋವಾ ಗಡಿ ದಾಟಿಸಿಕ್ಕೊಟ್ಟಿರುವ ಬಗ್ಗೆ ತಿಳಿಸಿ, ಅವರು ಕರೆ ಮಾಡಿರುವ ಬಗ್ಗೆ ಇಬ್ಬರ ಫೋನ್ ನಂಬರ್ ಕೂಡ ನೀಡಿದ್ದರು. ಅದರಂತೆ ತನಿಖೆ ಕೈಗೊಂಡಾಗ ಆರೋಪಿಗಳಾದ ಆಕಾಶ ಹಾಗೂ ಸಂತೋಷ್​​ ಎಂಬವರ ಸಹಾಯದಿಂದ 80,905 ರೂ. ಮೌಲ್ಯದ ಸಾರಾಯಿ ಬಾಟಲಿಗಳನ್ನು ಯಾವುದೇ ಪರವಾನಗಿ ಇಲ್ಲದೇ ಸಾಗಾಟ ಮಾಡುತ್ತಿರುವುದು ಗೊತ್ತಾಯಿತು. ಇಬ್ಬರು ಆರೋಪಿಗಳು ಹಾಗೂ ಸಾರಾಯಿ ಬಾಟಲಿಗಳ ಸಹಿತ ಕಾರನ್ನು ವಶಕ್ಕೆ ಪಡೆಯಲಾಗಿದೆ. ಆರೋಪಿತರ ಮೇಲೆ ಅಂಕೋಲಾ ಪೊಲೀಸ್ ಠಾಣೆಯಲ್ಲಿ ಕಲಂ: 32,34,38(ಎ) ಕರ್ನಾಟಕ ಅಬಕಾರಿ ಕಾಯಿದೆ ಪ್ರಕಾರ ಪ್ರಕರಣ ದಾಖಲಿಸಿ, ತನಿಖೆ ಕೈಗೊಳ್ಳಲಾಗಿದೆ ಎಂದು ಎಸ್​​ಪಿ ಆದೇಶದಲ್ಲಿ ಮಾಹಿತಿ ನೀಡಿದ್ದಾರೆ.

ಪ್ರಕರಣ ಸಂಬಂಧ ತನಿಖೆ ನಡೆಸಿದಾಗ ಪುನಃ ಅಕ್ರಮ ಮದ್ಯ ಸಾಗಾಟ ದಂಧೆಯಲ್ಲಿ ತೊಡಗಿಕೊಂಡಿರುವುದು ಕಂಡುಬಂದ ಹಿನ್ನೆಲೆಯಲ್ಲಿ ಹೆಡ್​ ಕಾನ್ಸ್​ಟೇಬಲ್ ಸಂತೋಷ ಲಮಾಣಿಯನ್ನು ಅಂಕೋಲಾ ಪೊಲೀಸರು ಬಂಧಿಸಿದ್ದಾರೆ. ಅಲ್ಲದೆ, ನ್ಯಾಯಾಂಗ ಬಂಧನದಲ್ಲಿರುವುದರಿಂದ ಸದ್ರಿಯವರ ಮೇಲಿನ ಆರೋಪಗಳ ಬಗ್ಗೆ ಇಲಾಖಾ ವಿಚಾರಣೆಯನ್ನು ಬಾಕಿ ಇರಿಸಿ ತಕ್ಷಣ ಜಾರಿಗೆ ಬರುವಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಮಾನತುಗೊಳಿಸಿ ಆದೇಶ ನೀಡಿದ್ದಾರೆ.

ಇದನ್ನೂ ಓದಿ:ಪರ ಸ್ತ್ರೀಯೊಂದಿಗೆ ಸಲುಗೆ: ಸುಫಾರಿ ನೀಡಿ ಗಂಡನ ಕಾಲು ಮುರಿಸಿದ ಪತ್ನಿ ಜೈಲಿಗೆ

ABOUT THE AUTHOR

...view details