ಕರ್ನಾಟಕ

karnataka

ETV Bharat / state

ಬೆಂಗಳೂರಲ್ಲಿ ಮಳೆಗೆ ಕುಸಿದ ನಿರ್ಮಾಣ ಹಂತದ ಕಟ್ಟಡ; ಓರ್ವ ಸಾವು, ಅವಶೇಷಗಳಡಿ 7 ಕಾರ್ಮಿಕರು - ಸಿಸಿಟಿವಿಯಲ್ಲಿ ದೃಶ್ಯ ಸೆರೆ

ಬೆಂಗಳೂರಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿದ ಪರಿಣಾಮ ಓರ್ವ ಮೃತಪಟ್ಟಿದ್ದು, ಇನ್ನೂ7 ಜನ ಕಾರ್ಮಿಕರು ಅವಶೇಷಗಳಡಿ ಸಿಲುಕಿದ್ದಾರೆ.

ನಿರ್ಮಾಣ ಹಂತದ ಕಟ್ಟಡ ಕುಸಿತ
ನಿರ್ಮಾಣ ಹಂತದ ಕಟ್ಟಡ ಕುಸಿತ (ETV Bharat)

By ETV Bharat Karnataka Team

Published : 5 hours ago

ಬೆಂಗಳೂರು:ರಾಜಧಾನಿಯಲ್ಲಿ ಸುರಿಯುತ್ತಿರುವ ಮಳೆಯಿಂದಾಗಿ ಅವಾಂತರದ ಸರಮಾಲೆಯೇ ಸೃಷ್ಟಿಯಾಗಿದೆ. ಯಲಹಂಕ, ಮಲ್ಲೇಶ್ವರ, ಸಿಲ್ಕ್ ಬೋರ್ಡ್ ಸೇರಿದಂತೆ ನಾನಾ ಕಡೆಗಳಲ್ಲಿ ಮಳೆ ನೀರು ರಸ್ತೆಗಳಲ್ಲಿ ತುಂಬಿಕೊಂಡಿದ್ದರೆ ಇನ್ನೂ‌ ಕೆಲವು ಕಡೆಗಳಲ್ಲಿ ಮನೆಯಿಂದ ಆಚೆ ಬರಲಾಗದಷ್ಟು ಜಲಾವೃತವಾಗಿದೆ. ಇದರ ಬೆನ್ನಲ್ಲೇ ಹೆಣ್ಣೂರು ಪೊಲೀಸ್ ಠಾಣಾ ವ್ಯಾಪ್ತಿಯ ಬಾಬುಸಾಪಾಳ್ಯದಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿದಿದ್ದು, ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ.

ಕಟ್ಟಡ ಕುಸಿತದ ಅವಘಡದಲ್ಲಿ 20 ಕ್ಕೂ ಕಾರ್ಮಿಕರು ಅವಶೇಷಗಳಡಿ ಸಿಲುಕಿದ್ದರು. ಈ ಪೈಕಿ ಬಿಹಾರ ಮೂಲದ ಅರ್ಮನ್ ಎಂಬ ಕಾರ್ಮಿಕ ಓರ್ವ ಮೃತಪಟ್ಟಿದ್ದಾನೆ. ಇನ್ನು 13 ಜನರನ್ನು ರಕ್ಷಣೆ ಮಾಡಲಾಗಿದೆ. ಇನ್ನೂ ಏಳು ಕಾರ್ಮಿಕರು ಅವಶೇಷಗಳಡಿ ಸಿಲುಕಿದ್ದಾರೆ.

ಬೆಂಗಳೂರಲ್ಲಿ ಮಳೆಗೆ ಕುಸಿದ ನಿರ್ಮಾಣ ಹಂತದ ಕಟ್ಟಡ (ETV Bharat)

ಓರ್ವ ಕಾರ್ಮಿಕರ ಮೃತಪಟ್ಟಿದ್ದು, ಹಲವರನ್ನು 13 ಕಾರ್ಮಿಕರನ್ನು ರಕ್ಷಿಸಲಾಗಿದೆ. ಅವಶೇಷಗಳಡಿ ಇನ್ನೂ ಕೆಲವರು ಸಿಲುಕಿದ್ದಾರೆ. ಎಲ್ಲರನ್ನು ರಕ್ಷಿಸಲು ಭರದಿಂದ ರಕ್ಷಣಾ ಕಾರ್ಯ ನಡೆಸುತ್ತಿದ್ದೇವೆ ಎಂದು ಎಂದು ಪೂರ್ವ ವಿಭಾಗದ ಡಿಸಿಪಿ ದೇವರಾಜ್ ಖಚಿತಪಡಿಸಿದ್ದಾರೆ.

ರಕ್ಷಣೆಯಾದವರು: ಬಿಹಾರ ಮೂಲದ ಕಾರ್ಮಿಕರಾದ ಜಿಸಾನ್, ಮಹಮ್ಮದ್ ಸಾಹಿಲ್, ರಶೀದ್, ಸಿತಾರೆ, ಇಲಿಫ್, ಸೋಹಿಲ್, ಆಂಧ್ರಪ್ರದೇಶದ ಚಿತ್ತೂರಿನ ಪ್ರದೀಪ್ ರೆಡ್ಡಿ ಅವರನ್ನು ರಕ್ಷಣೆ ಮಾಡಲಾಗಿದೆ.

ಗಾಯಾಳುಗಳು: ಯಾದಗಿರಿ ಮೂಲದ ಜಗಮ್ಮ, ಮಲ್ಲಪ್ಪ, ನಾಗರಾಜ್ ಮತ್ತು ಬಿಹಾರ ಮೂಲದ ರಮೇಶ್ ಕುಮಾರ್ ಮತ್ತು ವಕೀಲ್ ಪಾಶ್ವಾನ್ ಘಟನೆಯಲ್ಲಿ ಗಾಯಗೊಂಡಿದ್ದಾರೆ.

ನಾಪತ್ತೆಯಾದವರು: ಬಿಹಾರ ಮೂಲದ ಮಹಮ್ಮದ್ ಅರ್ಮನ್, ಮಹಮ್ಮದ್ ಅರ್ಷದ್, ತಿರುಪಾಲಿ, ಸೋಲೊ ಪಾಶ್ವಾನ್, ಆಂಧ್ರದ ಚಿತ್ತೂರು ಮೂಲದ ತುಳಸಿ ರೆಡ್ಡಿ, ಗಜೇಂದ್ರ ಮತ್ತು ತಮಿಳುನಾಡು ಮೂಲದ ಏಳುಮಲೆ ನಾಪತ್ತೆಯಾಗಿದ್ದು, ಶೋಧಕಾರ್ಯ ನಡೆಯುತ್ತಿದೆ.

ನಿರ್ಮಾಣ ಹಂತದ ಕಟ್ಟಡ ಕುಸಿತ (ETV Bharat)

ಕಟ್ಟಡದಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕನೋರ್ವ ಹೊರಬಂದು ಘಟನೆಯ ಭೀಕರತೆ ಬಿಚ್ಚಿಟ್ಟಿದ್ದಾನೆ. ತಲೆಯಲ್ಲಿ ರಕ್ತಸಿಕ್ತಗಾಯದಿಂದ ಹೊರಬಂದು ಕಟ್ಟಡದಲ್ಲಿ ನಮ್ಮವರು ಒಳಗೆ ಸಿಲುಕಿದ್ದಾರೆಂದು ಕಣ್ಣೀರು ಹಾಕಿದ್ದಾನೆ. ಸ್ಥಳಕ್ಕೆ ಆಂಬ್ಯುಲೆನ್ಸ್​ ದೌಡಾಯಿಸಿವೆ. ಹೆಣ್ಣೂರು ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲಿಸುತ್ತಿದ್ದಾರೆ. ಮಲ್ಲೇಶ್ವರಂ ನಿವಾಸಿಗಳಾದ ಮಿನಿರಾಜು ರೆಡ್ಡಿ ಕಟ್ಟಡದ ಮಾಲೀಕರು ಎಂದು ತಿಳಿದುಬಂದಿದೆ.

ಇದನ್ನೂ ಓದಿ:ತಗ್ಗದ ಮಳೆಯ ಅಬ್ಬರ - ಹಳ್ಳದಲ್ಲಿ ಕೊಚ್ಚಿಹೋದ ಕಾರು; ಬೆಂಗಳೂರು ಸೇರಿ ಹಲವು ಜಿಲ್ಲೆಗಳಲ್ಲಿ ಮತ್ತೆ ಯೆಲ್ಲೋ ಅಲರ್ಟ್

ABOUT THE AUTHOR

...view details