ಕರ್ನಾಟಕ

karnataka

ETV Bharat / state

ಉಡುಪಿ: ಹೆಗ್ಗುಂಜೆ ರಾಜೀವ ಶೆಟ್ಟಿ ಚಾರಿಟಬಲ್​​ ಟ್ರಸ್ಟ್ ವತಿಯಿಂದ 14 ಉಚಿತ ಮನೆಗಳ ಹಸ್ತಾಂತರ - RS CHARITABLE TRUST

ಹೆಗ್ಗುಂಜೆ ರಾಜೀವ ಶೆಟ್ಟಿ ಚಾರಿಟಬಲ್​​ ಟ್ರಸ್ಟ್ ವತಿಯಿಂದ ಜನ್ನಾಡಿ ಮತ್ತು ಮಣಿಗೇರೆ ಕೊರಗರ ಕಾಲೋನಿಯಲ್ಲಿ ನಿರ್ಮಿಸಿದ 14 ಉಚಿತ ಮನೆಗಳನ್ನು ಬಡವರಿಗೆ ಹಸ್ತಾಂತರಿಸಲಾಯಿತು.

Eಹೆಗ್ಗುಂಜೆ ರಾಜೀವ ಶೆಟ್ಟಿ ಚಾರಿಟೇಬಲ್ ಟ್ರಸ್ಟ್ ವತಿಯಿಂದ 14 ಉಚಿತ ಮನೆಗಳ ಹಂಚಿಕೆ
ಹೆಗ್ಗುಂಜೆ ರಾಜೀವ ಶೆಟ್ಟಿ ಚಾರಿಟೇಬಲ್ ಟ್ರಸ್ಟ್ ವತಿಯಿಂದ 14 ಉಚಿತ ಮನೆಗಳ ಹಂಚಿಕೆ (ETV Bharat)

By ETV Bharat Karnataka Team

Published : Nov 19, 2024, 8:47 PM IST

ಉಡುಪಿ:ಹೆಗ್ಗುಂಜೆ ರಾಜೀವ ಶೆಟ್ಟಿ ಚಾರಿಟಬಲ್​ ಟ್ರಸ್ಟ್ ವತಿಯಿಂದ ಜನ್ನಾಡಿ ಮತ್ತು ಮಣಿಗೇರೆ ಕೊರಗರ ಕಾಲೋನಿಯಲ್ಲಿ ಸುಮಾರು 2 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿಸಿದ 14 ಉಚಿತ ಮನೆಗಳನ್ನು ಬಡವರಿಗೆ ಹಸ್ತಾಂತರಿಸಲಾಯಿತು. ಉಡುಪಿಯ ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಗೃಹ ಪೂಜೆ ನೆರವೇರಿಸಿದರು.

ಹೊಸ ಮನೆ ಪಡೆದ ಚಂದು ಕೊರಗ ಈಟಿವಿ ಭಾರತ ಜೊತೆಗೆ ಮಾತನಾಡಿ, "ಹೊಸ ಮನೆ ಕಟ್ಟಲು 50 ವರ್ಷಗಳಿಂದ ಕನಸು ಕಂಡಿದ್ದೆ. ಬಡತನದಿಂದ ಅದು ಅಸಾಧ್ಯವಾಗಲಿಲ್ಲ. ಹೆಗ್ಗುಂಜೆ ರಾಜೀವ ಶೆಟ್ಟಿ ಚಾರಿಟಬಲ್ ಟ್ರಸ್ಟ್ ಅಧ್ಯಕ್ಷರಾದ ಡಾ. ಹೆಚ್ ಎಸ್. ಶೆಟ್ಟಿಯವರು ನೂತನ ಮನೆ ನಿರ್ಮಿಸಿ ಕೊಟ್ಟಿರುವುದು ನಮ್ಮೆಲ್ಲರಿಗೂ ಬಹಳ ಸಂತೋಷವಾಗುತ್ತಿದೆ" ಎಂದರು.

14 ಉಚಿತ ಮನೆಗಳ ಹಸ್ತಾಂತರ (ETV Bharat)

ಇದನ್ನೂ ಓದಿ:ಮೋಸ್ಟ್ ವಾಂಟೆಡ್ ನಕ್ಸಲ್ ವಿಕ್ರಂ ಗೌಡ ಎನ್‌ಕೌಂಟರ್‌ನಲ್ಲಿ ಮೃತ: ಡಿಜಿಪಿ ರೂಪಾ

ABOUT THE AUTHOR

...view details