ಕರ್ನಾಟಕ

karnataka

ETV Bharat / state

1000 ಕೋಟಿ ರೂ. ಆರೋಪ: ಯತ್ನಾಳ್​ ವಿರುದ್ಧದ ಪ್ರಕರಣ ರದ್ದುಪಡಿಸಿದ ಹೈಕೋರ್ಟ್​ - 1000 CRORE ALLEGATION

ಶಾಸಕ ಬಸನಗೌಡ ಪಾಟೀಲ್​ ಯತ್ನಾಳ್​ ಅವರ ವಿರುದ್ಧ ದಾಖಲಾಗಿದ್ದ ಪ್ರಕರಣವನ್ನು ಹೈಕೋರ್ಟ್ ರದ್ದುಪಡಿಸಿದೆ.

ಯತ್ನಾಳ್​ ವಿರುದ್ಧದ ಪ್ರಕರಣ ರದ್ದು,ಹೈಕೋರ್ಟ್, highcourt,Yatnal
ಯತ್ನಾಳ್​ ವಿರುದ್ಧದ ಪ್ರಕರಣ ರದ್ದುಪಡಿಸಿದ ಹೈಕೋರ್ಟ್t (ETV Bharat)

By ETV Bharat Karnataka Team

Published : Feb 8, 2025, 8:32 PM IST

ಬೆಂಗಳೂರು: ರಾಜ್ಯದಲ್ಲಿ ಸರ್ಕಾರ ಕೆಡವಲು 1,000 ಕೋಟಿ ರೂ.ಗಳ ವೆಚ್ಚದಲ್ಲಿ ಯೋಜನೆ ಸಿದ್ಧವಾಗುತ್ತಿದೆ ಎಂಬುದಾಗಿ ಹೇಳಿಕೆ ನೀಡುವ ಮೂಲಕ ಗಲಭೆಗೆ ಪ್ರಚೋದನೆ ನೀಡಿದ್ದಾರೆ ಎಂಬ ಆರೋಪದಲ್ಲಿ ಶಾಸಕ ಬಸನಗೌಡ ಪಾಟೀಲ್​ ಯತ್ನಾಳ್​ ಅವರ ವಿರುದ್ಧ ದಾಖಲಾಗಿದ್ದ ಪ್ರಕರಣವನ್ನು ಹೈಕೋರ್ಟ್ ರದ್ದುಪಡಿಸಿ ಆದೇಶ ಹೊರಡಿಸಿದೆ.

ತಮ್ಮ ವಿರುದ್ಧ ದಾಖಲಾಗಿರುವ ಪ್ರಕರಣ ರದ್ದುಕೋರಿ ಬಸನಗೌಡ ಪಾಟೀಲ್​ ಯತ್ನಾಳ್​ ಅವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ನ್ಯಾಯಪೀಠ ಈ ಆದೇಶ ನೀಡಿದೆ.

ಅಲ್ಲದೆ, ಅರ್ಜಿದಾರರ ಈ ಹೇಳಿಕೆ ಗಲಭೆಗೆ ಕಾರಣವಾಗುವ ದುರುದ್ದೇಶಪೂರಿತ ಪ್ರಚೋದನೆಯ ಅಂಶಗಳನ್ನು ಹೊಂದಿದೆ ಎಂಬುದನ್ನು ಅರ್ಥ ಮಾಡಿಕೊಳ್ಳಲು ನ್ಯಾಯಪೀಠ ವಿಫಲವಾಗಿದೆ. ಪ್ರಕರಣವನ್ನು ದಾಖಲಿಸಬೇಕು ಎಂಬ ಕಾರಣದಿಂದ ದಾಖಲಾಗಿದೆ ಎಂದು ಪೀಠ ಅಭಿಪ್ರಾಯಪಟ್ಟಿದೆ.

ಆರೋಪವನ್ನು ಪುಷ್ಠೀಕರಿಸುವ ಯಾವುದೇ ಅಂಶಗಳನ್ನು ಹೊಂದಿರದ ಅಪರಾಧಗಳ ಬಗ್ಗೆ ಹೆಚ್ಚಿನ ತನಿಖೆಗೆ ಅನುಮತಿ ನೀಡುವುದು ಅಜಾಗರೂಕ ಪ್ರಕರಣ ದಾಖಲಿಸಲು ಅನುಮತಿ ನೀಡಿದಂತಾಗುತ್ತದೆ ಎಂದು ನ್ಯಾಯಾಲಯ ಹೇಳಿದೆ. ಅಲ್ಲದೆ, ಮುಂದಿನ ಪ್ರಕ್ರಿಯೆಗೆ ಅನುಮತಿ ನೀಡುವುದು ಕಾನೂನಿನ ಪ್ರಕ್ರಿಯೆಯ ದುರುಪಯೋಗ ಎಂದು ಮತ್ತು ನ್ಯಾಯದಾನ ತಪ್ಪಿದಂತಾಗಲಿದೆ ಎಂದು ಪೀಠ ತಿಳಿಸಿದೆ.

ಪ್ರಕರಣದ ಹಿನ್ನೆಲೆ :ದಾವಣಗೆರೆಯಲ್ಲಿ ಮಾತನಾಡಿದ್ದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್​ ಯತ್ನಾಳ್​ ಅವರು, ಮಹಾನ್​ ನಾಯಕರೊಬ್ಬರು ರಾಜ್ಯದಲ್ಲಿ ಸರ್ಕಾರ ಕೆಡವಲು 1000 ಕೋಟಿ ರೂ. ಯೋಜನೆ ರೂಪಿಸಿದ್ದಾರೆ. ಆ ಮಹಾನ್​ ನಾಯಕ ಯಾರು ಎಂಬುದು ನಿಮಗೆ ಗೊತ್ತಿದೆ. ಅವರ ಹೆಸರನ್ನು ಬಹಿರಂಗಪಡಿಸುವುದಿಲ್ಲ ಎಂಬುದಾಗಿ ತಿಳಿಸಿದ್ದರು.

ಈ ಸಂಬಂಧ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿ ಎಸ್. ಮನೋಹರ್ ಅವರು 2024 ರ ಸೆಪ್ಟೆಂಬರ್ 1 ರಂದು ದಾವಣಗೆರೆಯ ಗಾಂಧಿನಗರ ಪೊಲೀಸ್​ ಠಾಣೆಯಲ್ಲಿ ನೀಡಿದ್ದ ದೂರು ನೀಡಿದ್ದರು. ಈ ಸಂಬಂಧ ಪೊಲೀಸರು ಎಫ್ಐಆರ್ ದಾಖಲಿಸಲಾಗಿದೆ. ಇದನ್ನು ಪ್ರಶ್ನಿಸಿ ಯತ್ನಾಳ್​ ಹೈಕೋರ್ಟ್ ಮೆಟ್ಟಿಲೇರಿದ್ದರು.

ಇದನ್ನೂ ಓದಿ: ಹೈಕಮಾಂಡ್ ಭೇಟಿಗೆ ಸಿಗದ ಅವಕಾಶ: ದೆಹಲಿಯಿಂದ ಯತ್ನಾಳ್ ಟೀಂ ವಾಪಸ್, ಮುಂದಿನ ನಡೆ ಏನು?

ಇದನ್ನೂ ಓದಿ:ಡಿಕೆಶಿ ವಿರುದ್ಧದ ಸಿಬಿಐ ಕೇಸ್​: ಯತ್ನಾಳ್​​ ಸಲ್ಲಿಸಿದ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್​

ABOUT THE AUTHOR

...view details