ಕರ್ನಾಟಕ

karnataka

ETV Bharat / state

ಬೆಂಗಳೂರು: ಮಚ್ಚಿನಿಂದ ಪತ್ನಿಯ ಬರ್ಬರ ಹತ್ಯೆ, ಆರೋಪಿ ಪತಿ ಬಂಧನ

ಪತಿಯೇ ತನ್ನ ಪತ್ನಿಯನ್ನು ಮಚ್ಚಿನಿಂದ ಹೊಡೆದು ಕೊಲೆ ಮಾಡಿರುವ ಘಟನೆ ಬೆಂಗಳೂರಿನಲ್ಲಿ ಬೆಳಕಿಗೆ ಬಂದಿದೆ.

By ETV Bharat Karnataka Team

Published : 5 hours ago

murder
ಸುಧಾ, ಶ್ರೀನಿವಾಸ್ (ETV Bharat)

ಬೆಂಗಳೂರು:ಪತಿಯಿಂದಲೇ ಪತ್ನಿಯು ಬರ್ಬರ ಹತ್ಯೆಗೀಡಾದ ಘಟನೆ ಶುಕ್ರವಾರ ತಡರಾತ್ರಿ ಬಾಗಲೂರು ಠಾಣೆ ವ್ಯಾಪ್ತಿಯ ಸಿಂಗೇನಹಳ್ಳಿಯಲ್ಲಿ ನಡೆದಿದೆ. ಮಚ್ಚಿನಿಂದ ಹೊಡೆದು ಸುಧಾ ಎಂಬಾಕೆಯನ್ನು ಕೊಲೆ ಮಾಡಲಾಗಿದೆ. ಆರೋಪಿ ಪತಿ ಶ್ರೀನಿವಾಸ್‌ನನ್ನು ಪೊಲೀಸರು ಬಂಧಿಸಿದ್ದಾರೆ.

ಕೋಳಿ ಅಂಗಡಿ ನಡೆಸುತ್ತಿದ್ದ ಶ್ರೀನಿವಾಸ್, ನಿತ್ಯ ಪಾನಮತ್ತನಾಗಿ ಪತ್ನಿಯೊಂದಿಗೆ ಗಲಾಟೆ ಮಾಡುತ್ತಿದ್ದ. ಗಂಡನ ಕಾಟಕ್ಕೆ ಬೇಸತ್ತ ಸುಧಾ, ಹೊಸಕೋಟೆಯಲ್ಲಿರುವ ತನ್ನ ತವರುಮನೆ ಸೇರಿದ್ದಳು. ಕಳೆದ ಒಂದು ತಿಂಗಳ ಹಿಂದಷ್ಟೆ ಕುಟುಂಬಸ್ಥರು ರಾಜಿ ಸಂಧಾನ ಮಾಡಿದ ಬಳಿಕ ಗಂಡನ ಮನೆಗೆ ಮರಳಿದ್ದಳು. ಎರಡು ದಿನಗಳಿಂದ ಪುನಃ ಗಲಾಟೆ ಆರಂಭಿಸಿದ್ದ ಶ್ರೀನಿವಾಸ್, ತಡರಾತ್ರಿ ಕೋಳಿ ಕತ್ತರಿಸುವ ಮಚ್ಚಿನಿಂದ ಸುಧಾಳ ತಲೆ, ಕೈಗೆ ಹೊಡೆದು ಹತ್ಯೆಗೈದಿದ್ದಾನೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಈ ಬಗ್ಗೆ ಬಾಗಲೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ:ಬೆಳಗಾವಿ ಉದ್ಯಮಿ ಕೊಲೆ ಕೇಸ್: ಪತ್ನಿ ಸೇರಿ ಮೂವರು ಆರೋಪಿಗಳ ಬಂಧನ

ABOUT THE AUTHOR

...view details