ಕರ್ನಾಟಕ

karnataka

ETV Bharat / state

ಕುಡುಕ ಗಂಡನ ಕಾಟಕ್ಕೆ ಬೇಸತ್ತು ತವರು ಮನೆ ಸೇರಿದ ಪತ್ನಿ: ಸಂತೆಗೆ ಹೋಗಿ ಬೆನ್ನಿಗೆ ಚಾಕು ಇರಿದು ಪತಿ - HUSBAND STABS WIFE

ಸಂತೆಗೆ ಹೋಗಿದ್ದ ಪತ್ನಿಗೆ ಚಾಕು ಇರಿದು ಪತಿ ಪರಾರಿಯಾದ ಘಟನೆ ಹುಕ್ಕೇರಿ ತಾಲೂಕಿನ ಪಾಶ್ಚಾಪುರ ಗ್ರಾಮದಲ್ಲಿ ನಡೆದಿದೆ.

ಪತ್ನಿಗೆ ಚಾಕು ಇರಿದ ಪತಿ, Husband stabs wife, Belagavi
ಪತ್ನಿಗೆ ಚಾಕು ಇರಿದ ಪತಿ (ETV Bharat)

By ETV Bharat Karnataka Team

Published : Feb 27, 2025, 6:58 AM IST

ಬೆಳಗಾವಿ:ಕುಡಿತದ ಚಟಕ್ಕೆ ದಾಸನಾಗಿದ್ದ ಪತಿಯಿಂದ ಬೇಸತ್ತು ಹಿರಿಯರ ಸಮ್ಮುಖದಲ್ಲಿ ದೂರವಾಗಿದ್ದ ಪತ್ನಿಗೆ ಚೂರಿ‌ ಇರಿದು ಪತಿ ಪರಾರಿಯಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಪಾಶ್ಚಾಪುರ ಗ್ರಾಮದಲ್ಲಿ ನಡೆದಿದೆ.

ಕುಡುಕ ಗಂಡನ ಕಾಟಕ್ಕೆ ಬೇಸತ್ತು ಪತ್ನಿ ದೂರವಾಗಿ ತವರು ಮನೆಯಲ್ಲಿ ವಾಸವಾಗಿದ್ದರು. ತವರು ಮನೆಯವರ ಜೊತೆಗೆ ಸಂತೆಗೆಂದು ಪಾಶ್ಚಾಪುರಕ್ಕೆ ಬಂದಿದ್ದ ವೇಳೆ ಮತ್ತೊಂದು ವಾಹನದಲ್ಲಿ ಬಂದ ಪತಿ ಹಾಲಪ್ಪ, ಪತ್ನಿ ವಾಹನಕ್ಕೆ ಡಿಕ್ಕಿ ಹೊಡೆದಿದ್ದಾನೆ. ಅಲ್ಲದೇ ಪತ್ನಿಗೆ ಹಿಂದಿನಿಂದ ಬಂದು ಚಾಕು ಇರಿದು ಓಡಿ ಹೋಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಹಾಲಪ್ಪ ನಿತ್ಯ ಮದ್ಯ ಕುಡಿದು ಬಂದು ಪತ್ನಿಗೆ ಹೊಡೆಯುವುದು, ಕಿರಿಕುಳ ನೀಡುತ್ತಿದ್ದನಂತೆ. ಇದರಿಂದ ನೊಂದ ಪತ್ನಿ ತವರು ಮನೆ ಸೇರಿದ್ದರೂ ಅಲ್ಲಿಗೆ ಬಂದು ಜಗಳವಾಡುತ್ತಿದ್ದನಂತೆ. ಇದೀಗ ಪತ್ನಿಗೆ ಚಾಕು ಇರಿದು ಪರಾರಿಯಾಗಿದ್ದಾನೆ. ಚಾಕು ಇರಿತದಿಂದ ಗಾಯಗೊಂಡ ಮಹಿಳೆಯನ್ನು ಬೆಳಗಾವಿ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಯಮಕನಮರಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

ಸಾರಾಯಿ ಕುಡಿದು ಉದ್ದವ್ವನ ಜೊತೆಗೆ ಹಾಲಪ್ಪ ನಿತ್ಯ ಜಗಳವಾಡುತ್ತಿದ್ದ.‌ ಹಾಗಾಗಿ, ಈಗ ನಾಲ್ಕು ದಿನಗಳ ಹಿಂದೆಯಷ್ಟೇ ವಿಚ್ಛೇದನವಾಗಿದೆ. ಇಂದು ಬೆಳಗ್ಗೆ ನಾವು ಬೈಕ್​​ನಲ್ಲಿ ಮೂವರು ಪಾಶ್ಚಾಪುರ ಸಂತೆಗೆ ಹೋಗುತ್ತಿದ್ದೆವು . ಈ ವೇಳೆ ಹಿಂದಿನಿಂದ ಬಂದ ಹಾಲಪ್ಪ, ಉದ್ದವ್ವನ ಬೆನ್ನಿಗೆ ಚಾಕುವಿನಿಂದ ಚುಚ್ಚಿ ಓಡಿ ಹೋದ ಎಂದು ಘಟನೆ ಕುರಿತು ಉದ್ದವ್ವ ಅವರ ಸಂಬಂಧಿ ಕಮಲವ್ವ ಮಾಧ್ಯಮಗಳ ಮುಂದೆ ವಿವರಿಸಿದ್ದಾರೆ.

ಮಹಿಳೆ ಶವವಾಗಿ ಪತ್ತೆ: ಗಂಡನ ಮನೆಯವರ ವಿರುದ್ಧ ದೂರು

ರಾಮನಗರ: ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಶವವಾಗಿ ಪತ್ತೆಯಾದ ಘಟನೆ ಚನ್ನಪಟ್ಟಣ ತಾಲೂಕಿನ ಬೈರನಾಯಕನಹಳ್ಳಿ‌ ಗ್ರಾಮದಲ್ಲಿ ನಡೆದಿದೆ. ಅಶ್ವಿನಿ (32) ಮೃತ ಮಹಿಳೆ. ಕಳೆದ ನಾಲ್ಕೈದು ವರ್ಷಗಳ ಹಿಂದೆ ಬೈರನಾಯಕಹಳ್ಳಿ ಗ್ರಾಮದ ವಿಷಕಂಠ ಎಂಬುವವರ ಜೊತೆ ಮದುವೆಯಾಗಿತ್ತು. ಸದ್ಯ ನಾಲ್ಕು ವರ್ಷದ ಗಂಡು ಮಗುವಿದೆ.

ಅಶ್ವಿನಿ ಸಾವಿಗೆ ಪತಿ ಮನೆಯವರ ಕಿರುಕುಳವೇ ಕಾರಣ ಎಂದು ಪೋಷಕರು ಆರೋಪಿಸಿದ್ದಾರೆ. ಮಹಿಳೆಯ ಪತಿ ವಿಷಕಂಠ ಸೇರಿದಂತೆ ಅವರ ಮನೆಯವರ ವಿರುದ್ಧ ಆರೋಪಿಸಿ ಅಶ್ವಿನಿ ತಾಯಿ ರಾಜಮ್ಮ ಅವರು ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಚನ್ನಪಟ್ಟಣ ತಾಲೂಕಿನ ಎಂಕೆ ದೊಡ್ಡಿ ಪೊಲೀಸ್ ಠಾಣೆಯಲ್ಲಿ‌ ದೂರು ದಾಖಲಿಸಲಾಗಿದೆ.

ಇದನ್ನೂ ಓದಿ: ಬೆಂಗಳೂರು: ಮದ್ಯಪಾನಕ್ಕೆ ಹಣ ಕೊಡಲಿಲ್ಲವೆಂದು ಮಹಿಳೆಗೆ ಚಾಕು ಇರಿದ ವ್ಯಕ್ತಿ

ಇದನ್ನೂ ಓದಿ: ಶಿರಸಿ: ಬಸ್​​ನಲ್ಲೇ ಚಾಕು ಇರಿದು ಯುವಕನ ಹತ್ಯೆಗೈದ ಪಾಗಲ್ ಪ್ರೇಮಿ

ABOUT THE AUTHOR

...view details