ಕರ್ನಾಟಕ

karnataka

ಎದುರಾಳಿಗಳ ಕುತಂತ್ರಕ್ಕೆ ಬಡ್ಡಿ ಸಮೇತ ತೀರಿಸುತ್ತೇನೆ: ಹೆಚ್.​ಡಿ.ರೇವಣ್ಣ - H D Revanna

By ETV Bharat Karnataka Team

Published : 5 hours ago

Updated : 5 hours ago

ಕೆಲವು ವರ್ಷಗಳಿಂದ ನಮ್ಮ ಜೊತೆಗಿದ್ದ ಕೆಲವರು ಈಗ ಬೇರೆ ಪಕ್ಷಗಳಿಗಾಗಿ ನಮ್ಮ ವಿರುದ್ಧ ಮಾತನಾಡುತ್ತಿದ್ದಾರೆ. ಅಂಥವರಿಗೆಲ್ಲ ಮುಂದಿನ ಚುನಾವಣೆಯಲ್ಲಿ ಸರಿಯಾಗಿ ಉತ್ತರ ನೀಡುತ್ತೇನೆ ಎಂದು ಹೆಚ್​.ಡಿ ರೇವಣ್ಣ ಹೇಳಿದರು.

Former Minister H D Revanna
ಮಾಜಿ ಸಚಿವ ಹೆಚ್​.ಡಿ.ರೇವಣ್ಣ (ETV Bharat)

ಹಾಸನ: ಲೋಕಸಭಾ ಚುನಾವಣೆಯಲ್ಲಿ 2 ಲಕ್ಷ ಅಂತರದಿಂದ ಪ್ರಜ್ವಲ್ ರೇವಣ್ಣ ಗೆಲ್ಲಬೇಕಿತ್ತು. ಆದರೆ ಕೆಲವರ ಕುತಂತ್ರದಿಂದ ಸೋಲು ಅನುಭವಿಸಬೇಕಾಯಿತು. ಮುಂದಿನ ದಿನಗಳಲ್ಲಿ ಬಡ್ಡಿ ಸಮೇತ ತೀರಿಸುವ ಕಾಲ ಹತ್ತಿರದಲ್ಲಿದೆ" ಎಂದು ಹೆಚ್​.ಡಿ. ರೇವಣ್ಣ ಎದುರಾಳಿಗೆ ಟಾಂಗ್ ನೀಡಿದರು.

ಹಾಸನದ ಆಲೂರಿನಲ್ಲಿ ಕಾರ್ಯಕರ್ತರ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, "ದೇವೇಗೌಡರ ಕುಟುಂಬ ಇಂತಹ ನೂರಾರು ತನಿಖೆ ಎದುರಿಸಿ ಗೆದ್ದಿದೆ. ದೇವೇಗೌಡರು ನಂಬಿದ ಕೆಲವು ಮುಖಂಡರು ಬೆನ್ನಿಗೆ ಚಾಕು ಹಾಕಿದ್ದಾರೆ. ಅದರಲ್ಲಿ ಸಣ್ಣ ಒಂದೂ ಚುನಾವಣೆ ಎದುರಿಸದ ಹೆಚ್.ಕೆ. ಜವರೇಗೌಡ ಅವರನ್ನು ರಾಜ್ಯಸಭೆ ಸದಸ್ಯರಾಗಿ ಮಾಡಲಾಗಿತ್ತು. ಅವರು ಏನು ಮಾಡಿದರು? ಈಗ ಎಲ್ಲಿದ್ದಾರೆ? ಇರುವ ಪಕ್ಷದಲ್ಲಿ ಏನು ಮಾಡ್ತಿದ್ದಾರೆ ಎಂದು ನಿಮಗೆ ಗೊತ್ತಿದೆ" ಎಂದರು.

ಮಾಜಿ ಸಚಿವ ಹೆಚ್​.ಡಿ.ರೇವಣ್ಣ (ETV Bharat)

ಇನ್ನು 15-20 ವರ್ಷಗಳಿಂದ ನಮ್ಮ ಜೊತೆ ಇದ್ದು, ಈಗ ಗಿರಾಕಿ ಬೇರೆ ಪಕ್ಷಕ್ಕಾಗಿ ನಮ್ಮ ಬಗ್ಗೆ ಮಾತನಾಡುತ್ತಿದ್ದಾನೆ. ಮುಂದಿನ ಮೂರು ವರ್ಷ ಕಳೆಯಲಿ, ಅವರನ್ನು ಯಾವ ಸ್ಥಿತಿಗೆ ಕಳುಹಿಸುತ್ತೇನೆಂದು ನೀವೇ ನೋಡುತ್ತೀರಿ" ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇದನ್ನೂ ಓದಿ:ಅತ್ಯಾಚಾರ ಆರೋಪ ಸುಳ್ಳು, ನಡೆದಿದೆ ಎಂದು ಊಹಿಸಿಕೊಂಡರೂ ಅದೊಂದು ಒಪ್ಪಿತ ಕ್ರಿಯೆ: ಪ್ರಜ್ವಲ್ ಪರ ವಕೀಲರ ವಾದ - Prajwal Revanna Case

Last Updated : 5 hours ago

ABOUT THE AUTHOR

...view details