ಕರ್ನಾಟಕ

karnataka

ETV Bharat / state

ಗೌರವ ಇಲ್ಲದ ಕಡೆ ಯಾಕಿರಬೇಕು, ರಾಜೀನಾಮೆ ಕೊಡಲು ಹಿಂದೆಮುಂದೆ ನೋಡಲ್ಲ: ವಿನಯ್ ಕುಲಕರ್ಣಿ ಎಚ್ಚರಿಕೆ - MLA Vinay Kulakarni - MLA VINAY KULAKARNI

ಕರ್ನಾಟಕ ರಾಜ್ಯ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಅಧ್ಯಕ್ಷ ವಿನಯ್ ಕುಲಕರ್ಣಿ ಅವರು ಬಹಿರಂಗವಾಗಿ ಆಕ್ರೋಶ ಹೊರಹಾಕಿದ್ದಾರೆ.

ವಿನಯ್ ಕುಲಕರ್ಣಿ
ವಿನಯ್ ಕುಲಕರ್ಣಿ (ETV Bharat)

By ETV Bharat Karnataka Team

Published : Jul 1, 2024, 5:31 PM IST

ಬೆಂಗಳೂರು: ಗೌರವ ಇಲ್ಲದ ಕಡೆ ನಾವು ಯಾಕೆ ಇರಬೇಕು. ರಾಜೀನಾಮೆ ಕೊಡುವುದಕ್ಕೂ ಹಿಂದೆಮುಂದೆ ನೋಡುವುದಿಲ್ಲ ಎಂದು ಕರ್ನಾಟಕ ರಾಜ್ಯ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಅಧ್ಯಕ್ಷ ವಿನಯ್ ಕುಲಕರ್ಣಿ ಎಚ್ಚರಿಕೆ ನೀಡಿದ್ದಾರೆ.

ಕೆಪಿಸಿಸಿ ಕಚೇರಿಯಲ್ಲಿ ಮಾತನಾಡಿದ ಅವರು, ಮಂಡಳಿಯಲ್ಲಿನ ಟೆಂಡರ್ ಕಾಮಗಾರಿ, ಅನುದಾನ ಸಂಬಂಧ ಸಚಿವ ಬೈರತಿ ಸುರೇಶ್ ಜೊತೆಗೆ ಉಂಟಾಗಿರುವ ಜಟಾಪಟಿ ಬಗ್ಗೆ ಪ್ರತಿಕ್ರಿಯೆ ನೀಡಿದರು. ಅಸಮಾಧಾನ ವ್ಯಕ್ತಪಡಿಸಿಲ್ಲ, ಪ್ರಸಂಗ ಬಂದರೆ ವ್ಯಕ್ತಪಡಿಸುತ್ತೇನೆ. ನಾನು ದುರಾಡಳಿತವನ್ನು ಸಹಿಸೋದಿಲ್ಲ. ನಮ್ಮ ಬೋರ್ಡ್​​ನಲ್ಲಿ ದುರಾಡಳಿತ ನಡೆಯುತ್ತಿದೆ. ಆ ಬೋರ್ಡ್​​ಗೆ ನಾನು ಹೆಡ್. ಆದರೆ ಅಲ್ಲಿ ವ್ಯವಸ್ಥೆ ಸರಿಯಿಲ್ಲ ಎಂದು ವಾಗ್ದಾಳಿ ನಡೆಸಿದರು.

ಕಳೆದ ಬಾರಿ ಸಿಐಡಿಗೆ ಕೊಡಬೇಕೆಂದು ಸಚಿವರು ಹೇಳಿದ್ದಾರೆ. ಅಲ್ಲಿ ಪರಿಶೀಲನೆ ಮಾಡುವ ಹಕ್ಕು ಇಲ್ಲದಂತಹ ದುರಾಡಳಿತ ನಡೆದಿದೆ. ವಾಲ್ಮೀಕಿ ಬೋರ್ಡ್ ವ್ಯವಸ್ಥೆ ನೋಡಿದ್ದೇವೆ. ಅದಕ್ಕಿಂತ ಕೆಟ್ಟ ವ್ಯವಸ್ಥೆ ಆಗುವುದು ಬೇಡ. ಎಲ್ಲದಕ್ಕೂ ಪತ್ರವನ್ನು ನಾನು ಕೊಟ್ಟಿದ್ದೇನೆ. ಪ್ರತಿಯೊಂದಕ್ಕೂ ಪತ್ರ ಕೊಟ್ಟಿದ್ದೇನೆ. ನಾನು ದೆಹಲಿಗೆ ಹೋಗಿದ್ದು ನಿಜ. ಪಕ್ಷದ ಮುಖಂಡರಿಗೆ ಏನು ಹೇಳಬೇಕೋ ಅದನ್ನು ಹೇಳಿದ್ದೇನೆ. ಎಲ್ಲಾ ಕಂಪನಿಗಳ ಬಗ್ಗೆ ತನಿಖೆ ಆಗಬೇಕು. ಪ್ರಸಂಗ ಬಂದರೆ ದಾಖಲೆ ಕೊಡುತ್ತೇನೆ. ನಾನು ಭಯಪಡುವುದಿಲ್ಲ. ಪ್ರಸಂಗ ಬಂದರೆ ಕೊಟ್ಟೆ ಕೊಡುತ್ತೇನೆ. ಬಹಿರಂಗವಾಗಿಯೇ ಹೇಳುತ್ತೇನೆ ಎಂದು ತಿಳಿಸಿದರು.

ಇದನ್ನೂ ಓದಿ:ಮತ್ತೆ ಸಿಎಂ ಆಗುವ ಇಂಗಿತ ಹೊರ ಹಾಕಿದ ಸತೀಶ ಜಾರಕಿಹೊಳಿ - CM Seat Issue

ಯಾವ ಕಂಪನಿಗಳು ಗೋಲ್ ಮಾಲ್ ಮಾಡಿವೆಯೋ ಅಂತಹ ಕಂಪನಿಗಳನ್ನು ಬ್ಲಾಕ್ ಲಿಸ್ಟ್​ಗೆ ಹಾಕಲಿ. ತನಿಖೆಗೆ ಎಂದು ನಾನು ಪತ್ರ ಕೊಟ್ಟು ಎರಡೂವರೆ ತಿಂಗಳು ಆಗಿದೆ. ಇದರಲ್ಲಿ 10-15 ಕಂಪನಿಗಳು ಇವೆ. ಸಚಿವರಿಗೆ ಬೇಡವಾದ ಕಂಪನಿಗಳನ್ನು ಬ್ಲಾಕ್ ಲಿಸ್ಟ್​ಗೆ ಹಾಕುವುದು, ಸಚಿವರ ಆಪ್ತರ ಕಂಪನಿಗಳಿಗೆ ಟೆಂಡರ್ ಆಗುವುದು ಬೇಡ. ಅದು ಸೂಕ್ತವಲ್ಲ, ಸಮಯ ಬಂದಾಗ ಮಾತಾಡುತ್ತೇನೆ. ಇದನ್ನ ಮುಖ್ಯಮಂತ್ರಿಗಳ ಗಮನಕ್ಕೆ ಹಲವಾರು ಬಾರಿ ತಂದಿದ್ದೇನೆ. ಇಂತಹದನ್ನು ನಾವು ಸಹಿಸಿಕೊಳ್ಳುವುದಿಲ್ಲ ಎಂದು ಬಹಿರಂಗವಾಗಿ ಆಕ್ರೋಶ ಹೊರ ಹಾಕಿದರು.

ಸಿಎಂ, ಡಿಸಿಎಂ ಬದಲಾವಣೆ ಮತ್ತು ಶಾಸಕರಿಗೆ ನೋಟಿಸ್ ನೀಡುವ ವಿಚಾರವಾಗಿ ಪ್ರತಿಕ್ರಿಯಿಸಿ, ಪದಾಧಿಕಾರಿಗಳು ಅಥವಾ ಶಾಸಕರೇ ಆಗಲಿ ಪಕ್ಷದ ವಿರುದ್ಧ ಕೆಲಸ ಮಾಡಿದವರಿಗೆ ನೋಟಿಸ್ ಕೊಡಬೇಕು. ಶಿಸ್ತು ಕ್ರಮ ಜರಗಿಸಲು ಇಂದಿನ ಸಭೆಯಲ್ಲಿ ತೀರ್ಮಾನ ಮಾಡಿದ್ದೇವೆ. ನಾವೆಲ್ಲರೂ ಸೇರಿದರೆ ಅವರು ಸಚಿವರು‌. ಅವರೇನು ಮೇಲಿಂದ ಬಂದಿಲ್ಲ ಎಂದು ಕಿಡಿಕಾರಿದರು.

ಇದನ್ನೂ ಓದಿ: ಸಿಎಂ ಸಿದ್ದರಾಮಯ್ಯ ಬಳಿ ಫೋನೇ ಇಲ್ವಂತೆ!: ಕಾರಣವೇನು ಗೊತ್ತಾ? - cm siddaramaiah not having mobile

ABOUT THE AUTHOR

...view details