ಕರ್ನಾಟಕ

karnataka

ETV Bharat / state

ಯಾರೂ ಇಲ್ಲದ ವೇಳೆ ಕಳ್ಳತನ: ಮನೆಯಲ್ಲಿದ್ದ ಚಿನ್ನಾಭರಣ, ನಗದು ಕದ್ದು ಖದೀಮ ಪರಾರಿ! - THEFT CASE

ಕಳ್ಳನೋರ್ವ ಯಾರೂ ಇಲ್ಲದ ವೇಳೆ ಮನೆಯಲ್ಲಿದ್ದ ಚಿನ್ನಾಭರಣ ಮತ್ತು ನಗದು ಕದ್ದು ಪರಾರಿಯಾಗಿದ್ದಾನೆ.

THEFT CASE
ಸಾಂದರ್ಭಿಕ ಚಿತ್ರ (ETV Bharat)

By ETV Bharat Karnataka Team

Published : Feb 4, 2025, 3:52 PM IST

ಕಾರವಾರ (ಉತ್ತರ ಕನ್ನಡ):ಮನೆಯಲ್ಲಿ ಯಾರೂ ಇಲ್ಲದ ವೇಳೆ ಬೀಗ ಮುರಿದು ಸುಮಾರು 18 ಲಕ್ಷ ರೂ. ಮೌಲ್ಯದ ಚಿನ್ನಾಭರಣ, ನಗದು ಕದ್ದು ಪರಾರಿಯಾಗಿರುವ ಘಟನೆ ನಗರದ ಖುರ್ಸಾವಾಡದ ವಿಜಯನಗರದಲ್ಲಿ ನಡೆದಿದೆ. ನಗರದ ಸ್ಮಿತಾ ಗೋಪಾಲ ಪಾವಸ್ಕರ್ ಎಂಬುವರ ಮನೆಯಲ್ಲಿ ಈ ಕಳ್ಳತನ ನಡೆದಿದೆ.

ಕಳೆದ ಶನಿವಾರ ಬೆಳಗ್ಗೆ 7:30 ರಿಂದ ಭಾನುವಾರ ಸಂಜೆ 7:20ರ ಅವಧಿಯಲ್ಲಿ ಮನೆಯಲ್ಲಿ ಯಾರೂ ಇಲ್ಲದ ವೇಳೆ ಮನೆಯ ಲಾಕ್ ಮುರಿದು ಕಳ್ಳ ಒಳ ನುಗ್ಗಿದ್ದಾನೆ. ಈ ವೇಳೆ ಮನೆಯ ಬೆಡ್‌ರೂಂ ಲಾಕರ್‌ನಲ್ಲಿದ್ದ 18.85 ಲಕ್ಷ ಮೌಲ್ಯದ 357 ಗ್ರಾಂ ಬಂಗಾರದ ಆಭರಣ, 72 ಗ್ರಾಂ ತೂಕದ ಬೆಳ್ಳಿ ಸಾಮಗ್ರಿ ಹಾಗೂ 10 ಸಾವಿರ ರೂಪಾಯಿ ನಗದು ಕದ್ದೊಯ್ದಿದ್ದಾನೆ ಎಂದು ಸ್ಮಿತಾ ಅವರು ಕಾರವಾರ ನಗರ ಠಾಣೆಯಲ್ಲಿ ದೂರು ನೀಡಿದ್ದಾರೆ.

ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾದ ದೃಶ್ಯ (ETV Bharat)

ಸೆಕ್ಷನ್ 331(3), 331(4), 305 ಬಿಎನ್ಎಸ್ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡ ಪೊಲೀಸರು, ತನಿಖೆ ನಡೆಸಿದ್ದಾರೆ. ಕಳ್ಳತನ ನಡೆದ ಮನೆಯ ವ್ಯಾಪ್ತಿಯಲ್ಲಿ ವ್ಯಕ್ತಿಯೋರ್ವ ಅನುಮಾನಾಸ್ಪದವಾಗಿ ಓಡಾಡುತ್ತಿರುವುದು ಸಿಸಿಟಿವಿ ಕ್ಯಾಮರಾದಲ್ಲಿ ದಾಖಲಾಗಿದೆ.

ಈ ಸಂಬಂಧ ಪ್ರಕಟಣೆ ನೀಡಿರುವ ಪೊಲೀಸರು, ಈ ಭಾವಚಿತ್ರದಲ್ಲಿರುವ ಸಂಶಯಾಸ್ಪದ ವ್ಯಕ್ತಿಯ ಬಗ್ಗೆ ಮಾಹಿತಿ ದೊರೆತಲ್ಲಿ, ಸಾರ್ವಜನಿಕರು ಈ ಕೆಳಗಿನ ದೂರವಾಣಿ ಸಂಖ್ಯೆಗಳಿಗೆ ಮಾಹಿತಿಯನ್ನು ನೀಡುವಂತೆ ಮನವಿ ಮಾಡಿದ್ದಾರೆ.

ಪೊಲೀಸ್ ಅಧೀಕ್ಷಕರು, ಉತ್ತರ ಕನ್ನಡ ಜಿಲ್ಲೆ ಮೊಬೈಲ್ ಸಂಖ್ಯೆ: 9480805201, ಡಿವೈಎಸ್ಪಿ, ಕಾರವಾರ ಉಪವಿಭಾಗ ಮೊಬೈಲ್ ಸಂಖ್ಯೆ: 9480805220, ಪಿಐ, ಕಾರವಾರ ಶಹರ ಪೊಲೀಸ್ ಠಾಣೆ ಮೊಬೈಲ್ ಸಂಖ್ಯೆ: 9480805230, ಕಾರವಾರ ನಗರ ಪೊಲೀಸ್ ಠಾಣೆ 08382-226333, ಮೊಬೈಲ್ ಸಂಖ್ಯೆ: 9480805290, ಮತ್ತು ಉತ್ತರ ಕನ್ನಡ ಜಿಲ್ಲಾ ಕಂಟ್ರೋಲ್ ರೂಂ 08382-226550/22309 ಸಂಪರ್ಕಿಸಬಹುದು.

ಇದನ್ನೂ ಓದಿ: ಬ್ಯಾಂಕ್ ಗ್ರಾಹಕರ ಸೋಗಿನಲ್ಲಿ ಹಣ ದೋಚುತ್ತಿದ್ದ ಇಬ್ಬರು ಆರೋಪಿಗಳ ಬಂಧನ - ROBBERY CASE

ABOUT THE AUTHOR

...view details