ಚಿಕ್ಕೋಡಿ:ರಾಜ್ಯದಲ್ಲಿ ಏನಾದರೂ ಉಚಿತವಾಗಿ ದೊರೆಯುತ್ತಿದೆ ಎಂದರೆ ಅದು ಭಯೋತ್ಪಾದನೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಹೇಳಿದ್ದಾರೆ. ನಗರದಲ್ಲಿ ಬಿಜೆಪಿ ಕಾರ್ಯಕರ್ತರ ಸಭೆ ಉದ್ದೇಶಿಸಿ ಮಾತನಾಡಿದ ಅವರು, ರಾಜ್ಯದಲ್ಲಿ ಭಯೋತ್ಪಾಧನೆ ಕೃತ್ಯಗಳು ಹೆಚ್ಚಾಗುತ್ತಿವೆ. ವಿಧಾನಸೌಧದಲ್ಲಿ ಪಾಕ್ ಪರ ಘೋಷಣೆ ಕೂಗಿದರೂ ಸಿಎಂ, ಡಿಸಿಎಂ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಅವರು ಮೌನವಾಗಿದ್ದಾರೆ.
ಖರ್ಗೆ ಅವರೇ ನೀವು ಏತಕ್ಕೆ ಸುಮ್ಮನಿದ್ದೀರಿ ದೇಶ ಮತ್ತು ರಾಜ್ಯದ ಜನತೆಗೆ ಇದರ ಬಗ್ಗೆ ಉತ್ತರಿಸಿ. ಒಬ್ಬ ರಾಜ್ಯಸಭಾ ಅಭ್ಯರ್ಥಿ ಗೆಲುವಿನ ಸಂಭ್ರಮಾಚರಣೆ ವೇಳೆ ಅದು ಕೂಡ ವಿಧಾನಸೌಧದಲ್ಲಿ ಈ ರೀತಿಯ ಘೋಷಣೆ ಕೇಳಿ ಬಂದರು ಯಾಕೆ ಈ ಬಗ್ಗೆ ಮೌನವಾಗಿದ್ದೀರಿ. ಪಾಕಿಸ್ತಾನವನ್ನು ಬೆಂಬಲಿಸಲು ಜನ್ಮತಾಳಿದ್ದೀರಾ? ನಿಮ್ಮನ್ನು ಭಾರತ ಮಾತೆ ಸೇರಿದಂತೆ ಕರ್ನಾಟಕದ ಜನರು ಕ್ಷಮಿಸಲ್ಲ ಎಂದು ಕಿಡಿಕಾರಿದರು.
ನಮ್ಮ ಸರ್ಕಾರ ಅಧಿಕಾರದಲ್ಲಿದ್ದಾಗ ರಾಜ್ಯ ಶಾಂತಿಯುತವಾಗಿತ್ತು. ಇಂದು ಮತ್ತೆ ಸ್ಫೋಟಗಳು ಆರಂಭವಾಗಿವೆ. ರಾಹುಲ್ ಗಾಂಧಿ ಅವರು ತುಕ್ಡೆ ಗ್ಯಾಂಗ್ನೊಂದಿಗೆ ಹೋಗಿ ನಿಂತಿದ್ದಾರೆ. ಅವರು ಭಾರತ್ ಜೋಡೋ ಮಾಡಲು ಹೊರಟಿದ್ದೀರಾ ಅಥವಾ ವಿಭಜಿತ ಭಾರತ ಯಾತ್ರೆಗೆ ಹೊರಟಿದ್ದೀರಾ? ಕರ್ನಾಟಕದಲ್ಲಿ ಹಿಂದೂ ದೇವಾಲಯಗಳ ಮೇಲೆ ಶೇ.10ರಷ್ಟು ತೆರಿಗೆ ವಿಧಿಸಿದ್ದಾರೆ. ಕಾಂಗ್ರೆಸ್ ನಾಯಕರು ಹಿಂದೂ ದೇವಾಲಯದ ಹಣವನ್ನು ತೆಗೆದುಕೊಂಡು ಒಂದು ಸಮುದಾಯನ್ನು ಸಮಾಧಾನಪಡಿಸುವ ನೀತಿ ನಡೆಸುತ್ತಾರೆ. ಕರ್ನಾಟಕ ಸರ್ಕಾರ ಕಾಂಗ್ರೆಸ್ಗೆ ಎಟಿಎಂ ಆಗಿದೆ ಇಲ್ಲಿಂದ ಹಣ ಸಂಗ್ರಹಿಸಿ ಅದನ್ನು ದೆಹಲಿಯ ಜೋಳಿಗೆಗೆ ಹಾಕುತ್ತಿದ್ದಾರೆ. ಇದು ಭ್ರಷ್ಟಾಚಾರದಿಂದ ಕೂಡಿದ ತುಷ್ಟೀಕರಣದ ಸರಕಾರವಾಗಿದೆ ಎಂದು ವಾಗ್ದಾಳಿ ನಡೆಸಿದರು.