ಕರ್ನಾಟಕ

karnataka

ETV Bharat / state

ಆಕ್ಷೇಪಣೆ ಸಲ್ಲಿಸದ ಕೇಂದ್ರಕ್ಕೆ ದಂಡದ ಎಚ್ಚರಿಕೆ ನೀಡಿದ ಹೈಕೋರ್ಟ್ - HIGH COURT

ಆಕ್ಷೇಪಣೆ ಸಲ್ಲಿಸಲು ಮತ್ತೊಮ್ಮೆ ಕಾಲಾವಕಾಶ ಕೇಳಿದ ಕೇಂದ್ರ ಸರ್ಕಾರದ ನಡೆಗೆ ಅಸಮಾಧಾನ ವ್ಯಕ್ತಪಡಿಸಿದ ಹೈಕೋರ್ಟ್ ದಂಡದ ಎಚ್ಚರಿಕೆ ನೀಡಿದೆ.

ಹೈಕೋರ್ಟ್
ಹೈಕೋರ್ಟ್ (ETV Bharat)

By ETV Bharat Karnataka Team

Published : Dec 9, 2024, 9:12 PM IST

ಬೆಂಗಳೂರು:ಭಾರತೀಯ ವೈದ್ಯಕೀಯ ಪದ್ಧತಿಯ ರಾಷ್ಟ್ರೀಯ ಆಯೋಗ ಕಾಯಿದೆಯ ಸಾಂವಿಧಾನಿಕ ಸಿಂಧುತ್ವ ಪ್ರಶ್ನಿಸಿ ರಾಜ್ಯ ಖಾಸಗಿ ಆಯುರ್ವೇದ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗಳ ಸಂಸ್ಥೆಯ ಒಕ್ಕೂಟ 2022ರಲ್ಲಿ ಸಲ್ಲಿಸಿರುವ ಅರ್ಜಿಗೆ ಆಕ್ಷೇಪಣೆ ಸಲ್ಲಿಸಲು ವಿಳಂಬ ಧೋರಣೆ ಅನುಸರಿಸುತ್ತಿರುವ ಕೇಂದ್ರ ಸರ್ಕಾರಕ್ಕೆ ದಂಡ ವಿಧಿಸುವುದಾಗಿ ಹೈಕೋರ್ಟ್ ಎಚ್ಚರಿಸಿತು.

ರಾಜ್ಯ ಖಾಸಗಿ ಆಯುರ್ವೇದ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗಳ ಸಂಸ್ಥೆಯ ಒಕ್ಕೂಟವು ಕಾಯಿದೆಯ ಸೆಕ್ಷನ್‌ಗಳನ್ನು ಅಸಾಂವಿಧಾನಿಕ ಎಂದು ಘೋಷಿಸಬೇಕು ಎಂದು ಕೋರಿ ಅರ್ಜಿ ಸಲ್ಲಿಸಿತ್ತು. ಈ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್ ಅವರಿದ್ದ ಏಕಸದಸ್ಯ ಪೀಠ, ಈ ಸೂಚನೆ ನೀಡಿದೆ.

ವಿಚಾರಣೆ ವೇಳೆ ಕೇಂದ್ರ ಸರ್ಕಾರದ ಪರ ವಕೀಲರು, ಆಕ್ಷೇಪಣೆ ಸಲ್ಲಿಸಲು ಕಾಲಾವಕಾಶ ನೀಡಬೇಕು ಎಂದು ಕೋರಿದರು. ಇದಕ್ಕೆ ಪೀಠ ಕಳೆದ ಬಾರಿಯೂ ಆಕ್ಷೇಪಣೆ ಸಲ್ಲಿಸಲು ಕಾಲಾವಕಾಶ ಕೇಳಿದ್ದೀರಿ. ಈಗ ಮತ್ತೆ ಕಾಲಾವಕಾಶ ಕೇಳುತ್ತಿದ್ದೀರಿ. ಹೀಗಾದರೆ ಹೇಗೆ ಎಂದು ಪ್ರಶ್ನಿಸಿತು. ಜೊತೆಗೆ ಕೇಂದ್ರ ಸರ್ಕಾರ ಎಲ್ಲಾ ಪ್ರಕರಣಗಳಲ್ಲಿ ಕಾಲಾವಕಾಶ ಕೇಳುತ್ತಲೇ ಇರುತ್ತದೆ ಎಂದು ಅಸಮಾಧಾನ ವ್ಯಕ್ತಪಡಿಸಿತು.

ಅಲ್ಲದೆ, ಕೇಂದ್ರ ಸರ್ಕಾರ ಹಾಗೂ ಭಾರತೀಯ ವೈದ್ಯಕೀಯ ಪದ್ಧತಿಯ ರಾಷ್ಟ್ರೀಯ ಆಯೋಗದ ಮನವಿ ತಿರಸ್ಕರಿಸಿದ ಪೀಠವು ಮುಂದಿನ ವಿಚಾರಣೆ ವೇಳೆಗೆ ಆಕ್ಷೇಪಣೆ ಸಲ್ಲಿಸದಿದ್ದರೆ ದಂಡ ವಿಧಿಸಲಾಗುವುದು ಎಂದು ಹೇಳಿ ವಿಚಾರಣೆಯನ್ನು ಡಿಸೆಂಬರ್ 16ಕ್ಕೆ ಮುಂದೂಡಿತು.

ನವೆಂಬರ್ 25ರಂದು ವಿಚಾರಣೆ ನಡೆಸಿದ್ದ ಇದೇ ಪೀಠ, ಡಿಸೆಂಬರ್ 4ರೊಳಗೆ ಆಕ್ಷೇಪಣೆ ಸಲ್ಲಿಸಿದರೆ ಅದನ್ನು ಪರಿಗಣಿಸಿ, ಅರ್ಜಿ ವಿಚಾರಣೆ ಮುಂದುವರಿಸುವುದಾಗಿ ತಿಳಿಸಿತ್ತು.

ಇದನ್ನೂ ಓದಿ: ರೇಣುಕಾಸ್ವಾಮಿ ಕೊಲೆ ಕೇಸ್: ದರ್ಶನ್ ಮಧ್ಯಂತರ ಜಾಮೀನು ವಿಸ್ತರಣೆ

ABOUT THE AUTHOR

...view details