ದೀಪಾವಳಿ ಹಬ್ಬದ ಪ್ರಯುಕ್ತ ಕೇಂದ್ರ ಸರ್ಕಾರ ಭತ್ತದ ಬೆಳೆಗಾರರಿಗೆ ಬೆಂಬಲ ಬೆಲೆಯ ಗಿಫ್ಟ್ ನೀಡಿದೆ. | Read More
Karnataka News Today - Live Updates: ಕರ್ನಾಟಕ Sun Oct 27 2024 ಇತ್ತೀಚಿನ ಸುದ್ದಿ
Published : Oct 27, 2024, 7:15 AM IST
|Updated : 18 hours ago
ಅನ್ನದಾತರಿಗೆ ದೀಪಾವಳಿ ಗಿಫ್ಟ್ ನೀಡಿದ ಕೇಂದ್ರ ಸರ್ಕಾರ ; ಭತ್ತಕ್ಕೆ 2300 ರೂ. ಬೆಂಬಲ ಬೆಲೆ - ಸಚಿವ ಜೋಶಿ
ಚಾಮರಾಜನಗರ: ಸಾವಯವ ಸಂತೆ ತೆರೆದು ಮದುವೆಯಾದ ಪ್ರಗತಿಪರ ರೈತ
ವಸಂತ ಕುಮಾರ್ ಎನ್ನುವ ರೈತ ಯಾವುದೇ ಶಾಸ್ತ್ರ- ಸಂಪ್ರದಾಯಗಳಿಲ್ಲದೇ, ಸಾವಯವ ಸಂತೆ ಏರ್ಪಡಿಸಿ, ವಿಶೇಷ ವಚನ ಕಲ್ಯಾಣ ಮಹೋತ್ಸವದ ಮೂಲಕ ರಾಧಿಕಾ ಎನ್ನುವವರನ್ನು ಕೈಹಿಡಿದಿದ್ದಾರೆ. | Read More
ಭರತ್ ಬೊಮ್ಮಾಯಿ ಸಿಎಂ ಆಗುವುದೇ ಬೊಮ್ಮಾಯಿ ಕುಟುಂಬದ ಶಾಶ್ವತ ಗ್ಯಾರಂಟಿ : ಯಾಸೀರ್ ಖಾನ್ ಪಠಾಣ್
ಶಿಗ್ಗಾವಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಯಾಸೀರ್ ಖಾನ್ ಪಠಾಣ್ ಅವರು ಸಂಸದ ಬಸವರಾಜ ಬೊಮ್ಮಾಯಿ ಅವರ ಶಾಶ್ವತ ಗ್ಯಾರಂಟಿ ಹೇಳಿಕೆಗೆ ತಿರುಗೇಟು ನೀಡಿದ್ದಾರೆ. | Read More
ಯುವಕರಿಗೂ ಶಕ್ತಿ ಯೋಜನೆ ಟಿಕೆಟ್ ಕೊಟ್ಟ ಆರೋಪ: ನಿರ್ವಾಹಕನ ವಿರುದ್ಧ ಕ್ರಮಕ್ಕೆ ಆಗ್ರಹ
ಯುವಕರಿಂದ ಹಣ ಪಡೆದು ಅವರಿಗೆ ಶಕ್ತಿ ಯೋಜನೆಯ ಟಿಕೆಟ್ ನೀಡುತ್ತಿರುವ ಬಗ್ಗೆ ಆರೋಪ ಕೇಳಿ ಬಂದಿದ್ದು, ಆ ಕಂಡಕ್ಟರ್ ವಿರುದ್ಧ ಕ್ರಮ ಕೈಗೊಳ್ಳುವಂತೆ ವಿದ್ಯಾರ್ಥಿಗಳು ಆಗ್ರಹಿಸಿದ್ದಾರೆ. | Read More
ಆದಷ್ಟು ಬೇಗ ದರ್ಶನ್ ಬಿಡುಗಡೆಯಾಗಲಿ ; ಹಾಸನಾಂಬೆ ದೇವಿ ಬಳಿ ತರುಣ್ ಸುಧೀರ್ ಪ್ರಾರ್ಥನೆ
ನಟ, ನಿರ್ದೇಶಕ ತರುಣ್ ಸುಧೀರ್ ಪತ್ನಿಯೊಂದಿಗೆ ಹಾಸನಾಂಬೆ ದೇವಸ್ಥಾನಕ್ಕೆ ಆಗಮಿಸಿ, ಆದಷ್ಟು ಬೇಗ ದರ್ಶನ್ ಬಿಡುಗಡೆಯಾಗಲಿ ಎಂದು ಪ್ರಾರ್ಥನೆ ಸಲ್ಲಿಸಿದ್ದಾರೆ. | Read More
ಕೊಪ್ಪಳ : ಗ್ರಾಮ ಆಡಳಿತಾಧಿಕಾರಿ ಪರೀಕ್ಷೆಗೆ ಬಂದ ಅಭ್ಯರ್ಥಿಗಳ ತುಂಬು ತೋಳಿಗೆ ಕತ್ತರಿ
ಕೊಪ್ಪಳ ಜಿಲ್ಲೆಯಲ್ಲಿ ಗ್ರಾಮ ಆಡಳಿತಾಧಿಕಾರಿ ಪರೀಕ್ಷೆಗೆ ಬಂದ ಅಭ್ಯರ್ಥಿಗಳು ತಮ್ಮ ಶರ್ಟ್ನ ತುಂಬು ತೋಳನ್ನ ಕತ್ತರಿಸಿದ ನಂತರ ಪರೀಕ್ಷಾ ಕೇಂದ್ರಕ್ಕೆ ಪ್ರವೇಶ ಪಡೆದಿದ್ದಾರೆ. | Read More
ಭಾರತ ಸರ್ಕಾರದ ಪ್ರತಿಷ್ಠಿತ ಪ್ರಶಸ್ತಿ ಮುಡಿಗೇರಿಸಿಕೊಂಡ ಬಿಎಂಟಿಸಿ
ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯು ಭಾರತ ಸರ್ಕಾರದ ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯ ನೀಡುವ 'ಅವಾರ್ಡ್ ಆಫ್ ಎಕ್ಸೆಲೆನ್ಸ್ ಇನ್ ಅರ್ಬನ್ ಟ್ರಾನ್ಸ್ಪೋರ್ಟ್' ಪ್ರಶಸ್ತಿ ಪಡೆದಿದೆ. | Read More
ಗ್ರಾಮ ಆಡಳಿತ ಅಧಿಕಾರಿ ಪರೀಕ್ಷೆ ಸುಗಮ ; ಶೇ. 80 ರಷ್ಟು ಮಂದಿ ಹಾಜರು
ಗ್ರಾಮ ಆಡಳಿತ ಅಧಿಕಾರಿಯ ಲಿಖಿತ ಪರೀಕ್ಷೆ ಸುಗಮವಾಗಿ ನಡೆದಿದ್ದು, ಪರೀಕ್ಷೆಗೆ ಶೇ. 80 ರಷ್ಟು ಮಂದಿ ಹಾಜರಾಗಿದ್ದರು ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್. ಪ್ರಸನ್ನ ತಿಳಿಸಿದ್ದಾರೆ. | Read More
ದೀಪಾವಳಿ: ಬೆಂಗಳೂರಲ್ಲಿ ಖಾಸಗಿ ಬಸ್ ದರ ಏರಿಕೆ ದೂರು, ಸಾರಿಗೆ ಅಧಿಕಾರಿಗಳಿಂದ ಕ್ರಮ
ದೀಪಾವಳಿ ಹಬ್ಬದ ಪ್ರಯುಕ್ತ ಜನರು ನಗರಗಳಿಂದ ತಮ್ಮ ಊರುಗಳತ್ತ ಮುಖ ಮಾಡಿದ್ದು, ಖಾಸಗಿ ಬಸ್ಗಳ ಟಿಕೆಟ್ ದರ ಏರಿಕೆ ಸಂಬಂಧ ದೂರುಗಳ ಹಿನ್ನೆಲೆಯಲ್ಲಿ ಸಾರಿಗೆ ಅಧಿಕಾರಿಗಳು ಪರಿಶೀಲನೆ ಕೈಗೊಂಡಿದ್ದಾರೆ. | Read More
ಏನೇ ಕುತಂತ್ರ ಮಾಡಿದರೂ ಜನರು ನಿಖಿಲ್ನನ್ನು ಗೆಲ್ಲಿಸುತ್ತಾರೆ: ಹೆಚ್.ಡಿ. ಕುಮಾರಸ್ವಾಮಿ
ಚನ್ನಪಟ್ಟಣ ಜನರು ನಿಖಿಲ್ಗೆ ಅಭಿಮನ್ಯು ಅಲ್ಲ, ಅರ್ಜುನನ ಪಾತ್ರ ಕೊಡ್ತಾರೆ ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಹೇಳಿದರು. | Read More
ಗೆಜೆಟ್ ದೋಷದಿಂದಾಗಿ ಹೊನವಾಡ ಗ್ರಾಮದ ರೈತರ ಜಮೀನು ವಿಷಯದಲ್ಲಿ ಗೊಂದಲ: ಸಚಿವ ಎಂ.ಬಿ. ಪಾಟೀಲ್
ರೈತರ ಭೂಮಿಗಳ ಬಗೆಗಿನ ಈ ಗೊಂದಲಗಳ ಬಗ್ಗೆ ಕಂದಾಯ ಇಲಾಖೆ ಹಾಗೂ ವಕ್ಫ್ ಮಂಡಳಿ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಬಗೆಹರಿಸಲಾಗುವುದು ಎಂದು ಸಚಿವ ಎಂ.ಬಿ. ಪಾಟೀಲ್ ತಿಳಿಸಿದರು. | Read More
ಚನ್ನಪಟ್ಟಣ ಉಪಚುನಾವಣೆ ರದ್ದುಗೊಳಿಸಿ: ವಾಟಾಳ್ ನಾಗರಾಜ್ ಆಗ್ರಹ
ಉಪಚುನಾವಣೆಯಲ್ಲಿ ರದ್ದುಗೊಳಿಸುವ ಮೂಲಕ ಚುನಾವಣಾ ಆಯುಕ್ತರು ಚನ್ನಪಟ್ಟಣದಲ್ಲಿ ಒಂದು ವೋಟ್ಗೆ 2,500 ರಿಂದ ಲಕ್ಷ ರೂ. ವರೆಗೆ ಹಂಚುತ್ತಿರುವ ಅವ್ಯವಹಾರವನ್ನು ತಡೆಗಟ್ಟಬೇಕು ಎಂದು ವಾಟಾಳ್ ನಾಗರಾಜ್ ಒತ್ತಾಯಿಸಿದರು. | Read More
ಮಳೆ ಬಳಿಕ ಬೆಂಗಳೂರಲ್ಲಿ ಹೆಚ್ಚಿದ ಸಾಂಕ್ರಾಮಿಕ ರೋಗಗಳ ಭೀತಿ: ಮಾರ್ಗಸೂಚಿ ಪ್ರಕಟಿಸಿದ ಬಿಬಿಎಂಪಿ
ಬೆಂಗಳೂರಿನಲ್ಲಿ ಮಳೆ ನಿಂತಿದ್ದರೂ ಒಂದೆಡೆ ಶೇಖರಣೆಯಾದ ನೀರಿನಲ್ಲಿ ಸೊಳ್ಳೆಗಳ ಉತ್ಪತ್ತಿ ಹೆಚ್ಚಾಗಿ ಸಾಂಕ್ರಾಮಿಕ ರೋಗ ಹರಡುವ ಭೀತಿ ಶುರುವಾಗಿದೆ. | Read More
ವಕ್ಫ್ ಬೋರ್ಡ್ ನೋಟಿಸ್ ವಿವಾದ ; ಸರ್ಕಾರಕ್ಕೆ 15 ದಿನದ ಗಡುವು ನೀಡಿದ ಬಿಜೆಪಿ
ವಿಜಯಪುರ ಜಿಲ್ಲೆಯ ರೈತರಿಗೆ ವಕ್ಫ್ ಆಸ್ತಿ ಎಂದು ನೀಡಿರುವ ನೋಟಿಸ್ ವಾಪಸ್ ಪಡೆದು ಪಹಣಿ ತಿದ್ದುಪಡಿ ಮಾಡಲು ರಾಜ್ಯ ಸರ್ಕಾರಕ್ಕೆ ಬಿಜೆಪಿ 15 ದಿನಗಳ ಗಡುವು ನೀಡಿದೆ. | Read More
ಶಿಗ್ಗಾವಿ ಉಪಚುನಾವಣೆ ; ಭರತ್ ಬೊಮ್ಮಾಯಿ ಪರ ತಾಯಿ ಚೆನ್ನಮ್ಮ ಮತಯಾಚನೆ
ಬಿಜೆಪಿ ಅಭ್ಯರ್ಥಿ ಭರತ್ ಬೊಮ್ಮಾಯಿ ಪರ ತಾಯಿ ಚೆನ್ನಮ್ಮ ಬೊಮ್ಮಾಯಿ ಮತಯಾಚನೆ ಪ್ರಾರಂಭಿಸಿದ್ದಾರೆ. | Read More
ನಿಖಿಲ್ ಎರಡು ಬಾರಿ ಸೋತಿದ್ರು, ಆಗ ಅಭಿಮನ್ಯು ಆಗಿರಲಿಲ್ವಾ: ಹೆಚ್ಡಿಕೆಗೆ ಸಿಎಂ ತಿರುಗೇಟು
ನಿಖಿಲ್ ಕುಮಾರಸ್ವಾಮಿ ಮಂಡ್ಯ, ರಾಮನಗರದಲ್ಲಿ ಸೋತಿದ್ದಾರೆ. ಈಗ ಇದ್ದಕ್ಕಿದ್ದಂತೆ ಅರ್ಜುನ ಆಗುತ್ತಾರಾ? ಎಂದು ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ. | Read More
ಮಳೆಯಿಂದಾಗಿ ಜೀವಕಳೆ ಪಡೆದ ಮುತ್ಯಾಲಮಡುವು ಜಲಪಾತ; ಜಲಸಿರಿಗೆ ಮನಸೋತ ಪ್ರವಾಸಿಗರು
ಮಳೆಯಿಂದಾಗಿ ಮುತ್ಯಾಲಮಡುವು ಫಾಲ್ಸ್ ಇದೀಗ ಭೋರ್ಗರೆಯುತ್ತಿದೆ. ಹೀಗಾಗಿ ವಿವಿಧೆಡೆಯಿಂದ ಪ್ರವಾಸಿಗರು ಇಲ್ಲಿಗೆ ಆಗಮಿಸಿ, ಎಂಜಾಯ್ ಮಾಡುತ್ತಿದ್ದಾರೆ. | Read More
ಹುಬ್ಬಳ್ಳಿ ಪೊಲೀಸರ ಭರ್ಜರಿ ಕಾರ್ಯಾಚರಣೆ: ಸೂಕ್ತ ದಾಖಲೆಗಳಿಲ್ಲದ 264 ವಾಹನಗಳು ವಶಕ್ಕೆ
ಸೂಕ್ತ ದಾಖಲೆಗಳಿಲ್ಲದ 264 ವಾಹನಗಳನ್ನು ವಶಕ್ಕೆ ಪಡೆಯಾಗಿದೆ ಎಂದು ಹು - ಧಾ ಪೊಲೀಸ್ ಕಮಿಷನರ್ ಎನ್. ಶಶಿಕುಮಾರ್ ತಿಳಿಸಿದ್ದಾರೆ. | Read More
ಮಾಜಿ ಸಿಎಂ ಎಸ್.ಬಂಗಾರಪ್ಪ ಜನ್ಮದಿನ: ಮೂವರು ಸಾಧಕರಿಗೆ ಪ್ರಶಸ್ತಿ ಪ್ರದಾನ
ತಂದೆಯ ಜನ್ಮದಿನದ ಪ್ರಯುಕ್ತ ಸಚಿವ ಮಧು ಬಂಗಾರಪ್ಪ ಅವರು ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಗೃಹ ಸಚಿವ ಡಾ. ಜಿ.ಪರಮೇಶ್ವರ್ ಮತ್ತು ನಟ ಹಾಗೂ ಅಳಿಯ ಶಿವರಾಜ್ಕುಮಾರ್ ಪತ್ನಿ ಸಮೇತ ಭಾಗವಹಿಸಿದರು. | Read More
ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳು ತಾತ್ಕಾಲಿಕ: ಭರತ್ ಬೊಮ್ಮಾಯಿ
ಶಿಗ್ಗಾಂವಿಯಲ್ಲಿ ಬಸವರಾಜ ಬೊಮ್ಮಾಯಿ ನೀಡಿರುವುದು ಶಾಶ್ವತ ಗ್ಯಾರಂಟಿ. ನಾವು ಪರ್ಮನೆಂಟ್ ಕೆಲಸಗಳನ್ನೇ ಮಾಡೋದು ಎಂದು ಶಿಗ್ಗಾಂವಿ ಬಿಜೆಪಿ ಅಭ್ಯರ್ಥಿ ಭರತ್ ಬೊಮ್ಮಾಯಿ ಹೇಳಿದರು. | Read More
ಹಳ್ಳಿಕಾರ ಸಮುದಾಯವನ್ನು ಪ್ರವರ್ಗ 1ಕ್ಕೆ ಸೇರಿಸುವ ಬೇಡಿಕೆ ಬಗ್ಗೆ ವರದಿ ತರಿಸಿ ನಂತರ ತೀರ್ಮಾನ : ಸಿಎಂ ಸಿದ್ದರಾಮಯ್ಯ
ಸಿಎಂ ಸಿದ್ದರಾಮಯ್ಯ ಅವರು ಹಳ್ಳಿಕಾರ ಸಮುದಾಯದ ಕುರಿತು ಮಾತನಾಡಿದ್ದಾರೆ. ಸಮುದಾಯವನ್ನ ಪ್ರವರ್ಗ 1ಕ್ಕೆ ಸೇರಿಸಬೇಕು ಎನ್ನುವ ಬೇಡಿಕೆ ಬಗ್ಗೆ ವರದಿ ತರಿಸಿಕೊಂಡು ತೀರ್ಮಾನ ಮಾಡಲಾಗುವುದು ಎಂದು ಹೇಳಿದ್ದಾರೆ. | Read More
ಚಿಕ್ಕೋಡಿ: ಸಿನಿಮೀಯ ಶೈಲಿಯಲ್ಲಿ ನಸುಕಿನ ಜಾವ ಕಳ್ಳರನ್ನು ಹಿಡಿದ ಗ್ರಾಮಸ್ಥರು
ಐವರು ಕಳ್ಳರ ಪೈಕಿ ಇಬ್ಬರನ್ನು ಬಡಚಿ ಗ್ರಾಮಸ್ಥರು ಬಂಧಿಸಿ ಪೊಲೀಸರಿಗೆ ಹಸ್ತಾಂತರಿಸಿದ್ದು, ಇನ್ನುಳಿದ ಮೂವರು ಪರಾರಿಯಾಗಿದ್ದಾರೆ. | Read More
ಶಾಸಕರು, ಮಂತ್ರಿಗಳೊಂದಿಗೆ ವಿಡಿಯೋ ಸಂವಾದ: ಒಗ್ಗಟ್ಟಿನಿಂದ ಕೆಲಸ ಮಾಡಿ, ಮೂರೂ ಕ್ಷೇತ್ರ ಗೆಲ್ಲುವಂತೆ ಸಿಎಂ-ಡಿಸಿಎಂ ಸೂಚನೆ
ಉಪ ಚುನಾವಣೆ ಹಿನ್ನೆಲೆಯಲ್ಲಿ ಮತ ಪ್ರಚಾರ, ಇನ್ನಿತರ ಕಾರ್ಯಗಳ ಕುರಿತಂತೆ ಶಾಸಕರು, ಮಂತ್ರಿಗಳ ಜೊತೆ ಸಿಎಂ ಹಾಗೂ ಡಿಸಿಎಂ ವಿಡಿಯೋ ಸಂವಾದ ನಡೆಸಿ ಸಲಹೆ, ಸೂಚನೆ ನೀಡಿದರು. | Read More
ಕ್ಷೇತ್ರದ ಕಾರ್ಯಕರ್ತರ ಒತ್ತಡಕ್ಕೆ ಮಣಿದು ಸ್ಪರ್ಧೆ ಮಾಡಿದ್ದೇನೆ: ನಿಖಿಲ್ ಕುಮಾರಸ್ವಾಮಿ
ಚನ್ನಪಟ್ಟಣ ಉಪಚುನಾವಣೆ ರಂಗೇರಿದೆ. ಇಂದು ಮೊದಲ ಬಾರಿಗೆ ಮಾಕಳಿ ಗ್ರಾಮದಲ್ಲಿ ಮೈತ್ರಿ ಪಕ್ಷದ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಪ್ರಚಾರ ನಡೆಸಿದರು. | Read More
ಹಣತೆಗೆ ರಂಗು ತುಂಬುವ ವಿಶೇಷ ಚೇತನರು; ದೀಪಾವಳಿ ಹಬ್ಬಕ್ಕೆ ತಯಾರಿ
ಮಂಗಳೂರು ನಗರದಲ್ಲಿನ ಸಾನಿಧ್ಯ ವಿಶೇಷ ಮಕ್ಕಳ ಶಾಲೆಯಲ್ಲಿ 25 ವರ್ಷ ಮೇಲ್ಪಟ್ಟ ವಿಶೇಷ ಚೇತನರರು ಮಣ್ಣಿನ ಹಣತೆಗಳಿಗೆ ಹೊಸ ರಂಗು ನೀಡಿ ಶೃಂಗರಿಸುತ್ತಿದ್ದಾರೆ. ಈ ಹಣತೆಗಳಿಗೆ ಸ್ಥಳೀಯವಾಗಿ ಒಳ್ಳೆಯ ಬೇಡಿಕೆ ಇದೆ. | Read More
ಬಿಎಂಟಿಸಿ ಬಸ್ ಚಾಲಕ, ನಿರ್ವಾಹಕನ ಮೇಲೆ ಇಬ್ಬರಿಂದ ಹಲ್ಲೆ; ಪ್ರಕರಣ ದಾಖಲು
ಬಿಎಂಟಿಸಿ ಬಸ್ ಚಾಲಕ ಹಾಗೂ ನಿರ್ವಾಹಕನ ಮೇಲೆ ಹಲ್ಲೆ ಮಾಡಿದ ಆರೋಪಿಗಳ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. | Read More
ಪತ್ನಿ-ಪ್ರಿಯಕರನ ಖಾಸಗಿ ವಿಡಿಯೋ ಪ್ರಕಟಿಸುವುದಾಗಿ ಬೆದರಿಕೆ: ಪತಿ ವಿರುದ್ಧ ಎಫ್ಐಆರ್
ಪತಿಯೇ ತನ್ನ ಪತ್ನಿಯ ಖಾಸಗಿ ವಿಡಿಯೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಅಪ್ಲೋಡ್ ಮಾಡುವುದಾಗಿ ಬೆದರಿಕೆ ಹಾಕಿರುವ ಪ್ರಕರಣ ರಾಜಧಾನಿಯಲ್ಲಿ ಬೆಳಕಿಗೆ ಬಂದಿದೆ. | Read More
ಸ್ಕೂಟರ್ನಲ್ಲಿ ರಾತ್ರಿ ಸಿಟಿ ರೌಂಡ್ಸ್ ಹೊಡೆದ ಹುಬ್ಬಳ್ಳಿ-ಧಾರವಾಡ ಪೊಲೀಸ್ ಕಮಿಷನರ್
ಹುಬ್ಬಳ್ಳಿ-ಧಾರವಾಡದ ನಗರಗಳಲ್ಲಿ ಅಪರಾಧ ಪ್ರಕರಣಗಳು ಏರುತ್ತಿವೆ. ಇದಕ್ಕೆ ಕಡಿವಾಣ ಹಾಕಲೆಂದು ನಿನ್ನೆ(ಶನಿವಾರ) ರಾತ್ರಿ ಪೊಲೀಸ್ ಕಮಿಷನರ್ ಎನ್. ಶಶಿಕುಮಾರ್ ಅವರು ತಮ್ಮ ಇಲಾಖೆಯ ಸಿಬ್ಬಂದಿಯೊಂದಿಗೆ ಬೈಕ್ ಮೂಲಕ ಸಿಟಿ ರೌಂಡ್ಸ್ ಮಾಡಿದರು. | Read More
ಉಡುಪಿ: ಬೀಜಾಡಿ ಸಮುದ್ರದಲ್ಲಿ ಮುಳುಗಿ ಇಬ್ಬರು ಯುವಕರು ಸಾವು, ಇಬ್ಬರ ರಕ್ಷಣೆ
ಉಡುಪಿಯ ಬೀಜಾಡಿ ಸಮುದ್ರದಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ಅಲೆಗಳ ಅಬ್ಬರಕ್ಕೆ ಸಿಲುಕಿ ಪ್ರಾಣ ಕಳೆದುಕೊಂಡಿದ್ದಾರೆ. | Read More
ಸುಪ್ರೀಂ ಕೋರ್ಟ್ ತೀರ್ಪನ್ನು ಕಾಗದದ ಹುಲಿ ಎನ್ನುವ ಜೋಶಿಗೆ ಸಚಿವರಾಗಿರಲು ಅರ್ಹತೆ ಇಲ್ಲ: ಈಶ್ವರ ಖಂಡ್ರೆ
ಪಟಾಕಿಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ನೀಡಿರುವ ಆದೇಶಕ್ಕೆ ಸಚಿವ ಪ್ರಹ್ಲಾದ್ ಜೋಶಿ ಅಸಮಾಧಾನ ವ್ಯಕ್ತಪಡಿಸಿದ್ದರು. ಇದಕ್ಕೆ ಪ್ರತಿಕ್ರಿಯಿಸಿರುವ ಸಚಿವ ಈಶ್ವರ ಖಂಡ್ರೆ, "ಕೋರ್ಟ್ ತೀರ್ಪಿನ ಅನುಷ್ಠಾನ ಬೇಡವೆಂದಾದರೆ ಕೇಂದ್ರ ಸರ್ಕಾರದಿಂದ ಆದೇಶ ಹೊರಡಿಸಲಿ" ಎಂದಿದ್ದಾರೆ. | Read More
'ನನ್ನ ಸಿಡಿ ಇದ್ದರೆ ಧೈರ್ಯವಾಗಿ ಬಿಡುಗಡೆ ಮಾಡಿ' ಎಂದ ನಿಶಾ ಯೋಗೇಶ್ವರ್: ಡಿಕೆಶಿ ಸ್ಪಷ್ಟನೆ ಹೀಗಿದೆ
ನನ್ನ ಸಿಡಿ ಇಟ್ಟುಕೊಂಡು ನನ್ನ ತಂದೆಯನ್ನು ಕಾಂಗ್ರೆಸ್ಗೆ ಕರೆದುಕೊಂಡು ಹೋಗಿದ್ದೀರಿ ಎಂದು ಸುದ್ದಿ ಪ್ರಸಾರವಾಗಿದೆ. ಇದಕ್ಕೆ ಡಿ.ಕೆ.ಶಿವಕುಮಾರ್ ಅವರು ಸ್ಪಷ್ಟನೆ ನೀಡಬೇಕು ಎಂದು ನಿಶಾ ಯೋಗೇಶ್ವರ್ ವಿಡಿಯೋ ಮೂಲಕ ಒತ್ತಾಯಿಸಿದ್ದರು. | Read More
ಬೇಕರಿ, ಬಟ್ಟೆ ಅಂಗಡಿ, ಪೊಲೀಸ್ ಕಮಿಷನರ್ ಎಲ್ಲರಿಗೂ ಸೈಬರ್ ವಂಚಕರ ಉಪಟಳ!
ದಕ್ಷಿಣ ಕನ್ನಡ ಜಿಲ್ಲೆಯ ಕೆಲವೆಡೆ ಸೈಬರ್ ವಂಚಕರ ಹಾವಳಿ ಹೆಚ್ಚಾಗುತ್ತಿದೆ. ಸಣ್ಣಪುಟ್ಟ ಅಂಗಡಿ ಮಾಲೀಕರಿಂದ ಹಿಡಿದು ನಗರ ಪೊಲೀಸ್ ಕಮಿಷನರ್ ಅವರನ್ನೂ ಅವರು ಬಿಟ್ಟಿಲ್ಲ. | Read More