ಕರ್ನಾಟಕ

karnataka

By ETV Bharat Karnataka Team

Published : 4 hours ago

ETV Bharat / state

ಮಂಗಳೂರು KSRTC ದಸರಾ ಪ್ಯಾಕೇಜ್: ನವದುರ್ಗೆಯರ ದರ್ಶನ, ಇತರ ದೇಗುಲಗಳಿಗೂ ವಿಶೇಷ ಬಸ್​ - KSRTC Dasara Package Tour

ದಸರಾ ಹಿನ್ನೆಲೆಯಲ್ಲಿ ಈ ವರ್ಷವೂ ಕೂಡ ಕೆಎಸ್‍ಆರ್​ಟಿಸಿಯು ವಿಶೇಷ ಪ್ಯಾಕೇಜ್ ಬಸ್​ ಸೌಲಭ್ಯ ಕಲ್ಪಿಸುತ್ತಿದೆ. ಮಂಗಳೂರಿನ ಸುತ್ತಮುತ್ತಲಿನ ದೇವಸ್ಥಾನಗಳ ಪ್ರವಾಸದ ಮಾರ್ಗ, ವೇಳೆ, ಪ್ರಯಾಣ ದರ ಹಾಗೂ ದಿನಾಂಕ ಎಂಬಿತ್ಯಾದಿ ವಿವರ ಹೀಗಿದೆ.

dasara package tour
ಕೆಎಸ್​ಆರ್​ಟಿಸಿ ದಸರಾ ಪ್ಯಾಕೇಜ್ ಟೂರ್​ (ETV Bharat)

ಮಂಗಳೂರು:ಕೆಎಸ್‍ಆರ್​ಟಿಸಿ ಮಂಗಳೂರು ವಿಭಾಗದ ವತಿಯಿಂದ ಕಳೆದ ಎರಡು ವರ್ಷಗಳಿಂದ ಯಶಸ್ವಿಯಾಗಿ ನಡೆದಿದ್ದ 'ನವರಾತ್ರಿ ನವದುರ್ಗೆಯರ ದರ್ಶನ' ಸೇರಿದಂತೆ ಟೂರ್ ಪ್ಯಾಕೇಜ್​ಗಳು ಮತ್ತೆ ಬಂದಿವೆ. ದಸರಾ ಪ್ರಯುಕ್ತ ಮಂಗಳೂರಿನ ಸುತ್ತಮುತ್ತಲಿನ ದೇವಸ್ಥಾನಗಳ ದರ್ಶನಕ್ಕಾಗಿ ಅಕ್ಟೋಬರ್ 3ರಿಂದ 12ರ ವರೆಗೆ ಮಂಗಳೂರು-ಮಡಿಕೇರಿ, ಮಂಗಳೂರು-ಕೊಲ್ಲೂರು, ಮಂಗಳೂರು-ಮುರುಡೇಶ್ವರ ನಡುವೆ ವಿಶೇಷ ಪ್ಯಾಕೇಜ್ ಕಲ್ಪಿಸಲಾಗುತ್ತಿದೆ.

ಮಂಗಳೂರು ದಸರಾ ನವದುರ್ಗಾ ದರ್ಶನ ಪ್ಯಾಕೇಜ್:ಮಂಗಳೂರು ಬಸ್​​ ನಿಲ್ದಾಣದಿಂದ ಬೆಳಗ್ಗೆ 8 ಗಂಟೆಗೆ ಹೊರಟು ಮಂಗಳಾದೇವಿ ದೇವಸ್ಥಾನ-ಸುಂಕದಕಟ್ಟೆ ಅಂಬಿಕಾ ಅನ್ನಪೂರ್ಣೇಶ್ವರಿ ದೇವಸ್ಥಾನ-ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನ-ಬಪ್ಪನಾಡು ದುರ್ಗಾಪರಮೇಶ್ವರಿ ದೇವಸ್ಥಾನ-(ಮಧ್ಯಾಹ್ನದ ಊಟ)-ಸಸಿಹಿತ್ಲು ಭಗವತಿ ದೇವಸ್ಥಾನ ಹಾಗೂ ಬೀಚ್-ಚಿತ್ರಾಪುರ ದುರ್ಗಾಪರಮೇಶ್ವರಿ ದೇವಸ್ಥಾನ-ಉರ್ವ ಮಾರಿಯಮ್ಮ ದೇವಸ್ಥಾನ (ಸಂಜೆ ಉಪಹಾರ)-ಕುದ್ರೋಳಿ ಗೋಕರ್ಣನಾಥ ದೇವಸ್ಥಾನದ ಮೂಲಕ ನವದುರ್ಗಾ ದರ್ಶನದ ಬಸ್​ ರಾತ್ರಿ 8ಗಂಟೆಗೆ ಮಂಗಳೂರು ನಿಲ್ದಾಣಕ್ಕೆ ಹಿಂದಿರುಗಲಿದೆ. ಪ್ರಯಾಣ ದರವು (ಊಟ, ಉಪಹಾರ ಹೊರತುಪಡಿಸಿ) ವಯಸ್ಕರಿಗೆ 400 ರೂ. ಹಾಗೂ ಮಕ್ಕಳಿಗೆ (6 ವರ್ಷದಿಂದ 12 ವರ್ಷದವರಿಗೆ) 300 ರೂ. ಇರಲಿದೆ.

ಮಡಿಕೇರಿ ಟೂರ್ ಪ್ಯಾಕೇಜ್:ಈ ಬಸ್ಮಂಗಳೂರಿನಿಂದ ಬೆಳಗ್ಗೆ 7 ಗಂಟೆಗೆ ಹೊರಟು ಮಡಿಕೇರಿ-ರಾಜಾಸೀಟ್ -ಅಬ್ಬಿಫಾಲ್ಸ್-ನಿಸರ್ಗಧಾಮ ಹಾಗೂ ಗೋಲ್ಡನ್ ಟೆಂಪಲ್ ಪ್ರವಾಸ ಕೈಗೊಂಡು ರಾತ್ರಿ 9 ಗಂಟೆಗೆ ಮಂಗಳೂರು ನಿಲ್ದಾಣಕ್ಕೆ ಮರಳಲಿದೆ. ಪ್ರಯಾಣದ ದರವನ್ನು ವಯಸ್ಕರಿಗೆ 500 ರೂ. ಹಾಗೂ ಮಕ್ಕಳಿಗೆ 400 ರೂ. ನಿಗದಿಪಡಿಸಲಾಗಿದೆ.

ಮಂಗಳೂರು-ಕೊಲ್ಲೂರು ಟೂರ್ ಪ್ಯಾಕೇಜ್:ಮಂಗಳೂರು ಬಸ್ ನಿಲ್ದಾಣದಿಂದ ಬೆಳಗ್ಗೆ 8 ಗಂಟೆಗೆ ಹೊರಟು ಉಚ್ಚಿಲ ಮಹಾಲಕ್ಷ್ಮೀ ದೇವಸ್ಥಾನ-ಕಮಲಶಿಲೆ ಬ್ರಾಹ್ಮೀ ದುರ್ಗಾಪರಮೇಶ್ವರಿ ದೇವಸ್ಥಾನ (ಮಧ್ಯಾಹ್ನದ ಊಟ)-ಕೊಲ್ಲೂರು ಮೂಕಾಂಬಿಕಾ ದೇವಸ್ಥಾನ ಹಾಗೂ ಮಾರಣಕಟ್ಟೆ ಬ್ರಹ್ಮಲಿಂಗೇಶ್ವರ ದೇವಸ್ಥಾನಗಳ ಪ್ರವಾಸ ಕೈಗೊಂಡು ರಾತ್ರಿ 7 ಗಂಟೆಗೆ ಮಂಗಳೂರು ನಿಲ್ದಾಣಕ್ಕೆ ಹಿಂದಿರುಗಲಿದೆ. ಪ್ರಯಾಣದ ದರವು ವಯಸ್ಕರಿಗೆ 500 ರೂ. ಹಾಗೂ ಮಕ್ಕಳಿಗೆ 400 ರೂ. ನಿಗದಿಯಾಗಿದೆ.

ಮಂಗಳೂರು-ಮುರುಡೇಶ್ವರ ಟೂರ್ ಪ್ಯಾಕೇಜ್:ಈ ಬಸ್ಮಂಗಳೂರಿನಿಂದ ಬೆಳಗ್ಗೆ 7 ಗಂಟೆಗೆ ಹೊರಟು ಮುರುಡೇಶ್ವರ ದೇವಸ್ಥಾನ-ಚಂಡಿಕಾ ದುರ್ಗಾಪರಮೇಶ್ವರಿ ದೇವಸ್ಥಾನ ಕುಂಭಾಶಿ-ಆನೆಗುಡ್ಡೆ ಗಣಪತಿ ದೇವಸ್ಥಾನ ಹಾಗೂ ಉಚ್ಚಿಲ ಮಹಾಲಕ್ಷ್ಮೀ ದೇವಸ್ಥಾನಗಳ ಪ್ರವಾಸ ಕೈಗೊಂಡು ರಾತ್ರಿ 7 ಗಂಟೆಗೆ ಮಂಗಳೂರು ನಿಲ್ದಾಣಕ್ಕೆ ಮರಳಲಿದೆ. ವಯಸ್ಕರಿಗೆ 550 ರೂ. ಹಾಗೂ ಮಕ್ಕಳಿಗೆ 450 ರೂ. ಟಿಕೆಟ್​ ದರ ನಿಗದಿಪಡಿಸಲಾಗಿದೆ.

ಪ್ರಯಾಣಿಕರ ಅನುಕೂಲಕ್ಕಾಗಿ ಈ ಮೇಲಿನ ಸಾರಿಗೆಗಳಿಗೆ https://www.ksrtc.in ನಲ್ಲಿ ಮುಂಗಡ ಆಸನ ಕಾಯ್ದಿರಿಸಲು ಸೂಕ್ತ ವ್ಯವಸ್ಥೆ ಮಾಡಲಾಗಿದೆ.

ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 7760990702, 7760990711, ಮಂಗಳೂರು-1ನೇ ಘಟಕ ವ್ಯವಸ್ಥಾಪಕರು, ದೂರವಾಣಿ ಸಂಖ್ಯೆ: 7760990713, ಮಂಗಳೂರು-3ನೇ ಘಟಕ ವ್ಯವಸ್ಥಾಪಕರು, ದೂರವಾಣಿ ಸಂಖ್ಯೆ: 7760990723, ಮಂಗಳೂರು ಮುಂಗಡ ಬುಕ್ಕಿಂಗ್ ಕೌಂಟರ್, ದೂರವಾಣಿ ಸಂಖ್ಯೆ: 9663211553, ಮಂಗಳೂರು ಬಸ್ ನಿಲ್ದಾಣ, ದೂರವಾಣಿ ಸಂಖ್ಯೆ: 7760990720 ಸಂಪರ್ಕಿಸುವಂತೆ ಕೆಎಸ್‍ಆರ್​ಟಿಸಿ ಹಿರಿಯ ವಿಭಾಗೀಯ ನಿಯಂತ್ರಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ:ಶೀಘ್ರದಲ್ಲೇ 'ಮುಖ್ಯಮಂತ್ರಿ ಬಹುಮಹಡಿ ವಸತಿ ಯೋಜನೆ'ಯಡಿ ವಸತಿ ಸೌಲಭ್ಯ: ಎಲ್ಲೆಲ್ಲಿ ಜಾರಿ? - CM Multistorey Housing Scheme

ABOUT THE AUTHOR

...view details