ಚಿಕ್ಕಮಗಳೂರು:ಬಸ್ ಚಾಲಕರೊಬ್ಬರಿಂದಲಂಚ ಸ್ವೀಕರಿಸುತ್ತಿದ್ದ ಕೆಎಸ್ಆರ್ಟಿಸಿ ವಿಭಾಗ ನಿಯಂತ್ರಕ (ಡಿಸಿ) ಬಸವರಾಜ್ ಎಂಬವರನ್ನು ಮಂಗಳವಾರ ಲೋಕಾಯುಕ್ತರು ಬಂಧಿಸಿದ್ದಾರೆ. ಚಿಕ್ಕಮಗಳೂರಿನ ನಿಗಮದ ಕಚೇರಿಯಲ್ಲಿ ಬಸವರಾಜ್ ಅವರು ಬಸ್ ಚಾಲಕನಿಂದ 10 ಸಾವಿರ ರೂ ಲಂಚ ಪಡೆಯುತ್ತಿದ್ದರು. ಈ ವೇಳೆ ಲೋಕಾಯುಕ್ತರು ದಾಳಿ ಮಾಡಿದ್ದಾರೆ.
ವರ್ಗಾವಣೆಗೆ ಬಸ್ ಚಾಲಕನಿಂದ ಲಂಚ: ಲೋಕಾಯುಕ್ತ ಬಲೆಗೆ ಬಿದ್ದ ಕೆಎಸ್ಆರ್ಟಿಸಿ ಡಿಸಿ - ಕೆಎಸ್ಆರ್ಟಿಸಿ
ಬಸ್ ಚಾಲಕನಿಂದ ಲಂಚ ಸ್ವೀಕರಿಸುತ್ತಿದ್ದ ಚಿಕ್ಕಮಗಳೂರು ಜಿಲ್ಲೆಯ ಕೆಎಸ್ಆರ್ಟಿಸಿ ಡಿಸಿ ರೆಡ್ಹ್ಯಾಂಡ್ ಆಗಿ ಲೋಕಾಯುಕ್ತರ ಬಲೆಗೆ ಬಿದ್ದಿದ್ದಾರೆ.
![ವರ್ಗಾವಣೆಗೆ ಬಸ್ ಚಾಲಕನಿಂದ ಲಂಚ: ಲೋಕಾಯುಕ್ತ ಬಲೆಗೆ ಬಿದ್ದ ಕೆಎಸ್ಆರ್ಟಿಸಿ ಡಿಸಿ KSRTC DC Basavaraj](https://etvbharatimages.akamaized.net/etvbharat/prod-images/07-02-2024/1200-675-20692693-thumbnail-16x9-bgk.jpg)
ಕೆಎಸ್ಆರ್ಟಿಸಿ ಡಿಸಿ ಬಸವರಾಜ್
Published : Feb 7, 2024, 8:13 PM IST
ವರ್ಗಾವಣೆಗೆ ಲಂಚದ ಬೇಡಿಕೆ: ಕಡೂರು ಡಿಪೋಗೆ ವರ್ಗಾವಣೆ ಮಾಡಲು 10 ಸಾವಿರ ರೂ ಲಂಚಕ್ಕೆ ಬೇಡಿಕೆ ಇಟ್ಟಿರುವ ಕುರಿತು ಬಸ್ ಚಾಲಕ, ಬಸವರಾಜ್ ವಿರುದ್ಧ ಲೋಕಾಯುಕ್ತರಿಗೆ ದೂರು ನೀಡಿದ್ದರು. ಅದರಂತೆ ಹಣ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ತನಿಖಾಧಿಕಾರಿಗಳು ಟ್ರ್ಯಾಪ್ ಮಾಡಿದ್ದಾರೆ.
ಇದನ್ನೂಓದಿ:ಮಾಂಗಲ್ಯ ಸರ ದರೋಡೆಗೆ ಯತ್ನ: ಕೈಯಲ್ಲಿದ್ದ ಸ್ಕ್ರೂಡ್ರೈವರ್ನಿಂದ ಸರಗಳ್ಳನ ಹಿಮ್ಮೆಟ್ಟಿಸಿದ ಗಟ್ಟಿಗಿತ್ತಿ