ಮಂಗಳೂರು: ನಗರದ ಕೊಣಾಜೆಯ ಕೆಎಸ್ಆರ್ಪಿ 7ನೇ ಬೆಟಾಲಿಯನ್ ಇನ್ಸ್ಪೆಕ್ಟರ್ ಮಹಮ್ಮದ್ ಹ್ಯಾರೀಸ್ ಎಂಬಾತ ಕಾನ್ಸ್ಟೇಬಲ್ವೊಬ್ಬರಿಂದ 18ಸಾವಿರ ರೂ. ಲಂಚ ಪಡೆಯುತ್ತಿದ್ದಾಗಲೇ ಲೋಕಾಯುಕ್ತ ಪೊಲೀಸ್ ಬಲೆಗೆ ಬಿದ್ದಿದ್ದಾರೆ.
ಕೆಎಸ್ಆರ್ಪಿ 7ನೇ ಬೆಟಾಲಿಯನ್ನ ಪೊಲೀಸ್ ಅತಿಥಿಗೃಹದಲ್ಲಿ ನಿರ್ವಾಹಕರಾಗಿ ಕರ್ತವ್ಯ ನಿರ್ವಹಿಸಲು ಮೀಸಲು ಪೊಲೀಸ್ ಕಾನ್ಸ್ಟೇಬಲ್ನಿಂದ ಮಹಮ್ಮದ್ ಹ್ಯಾರೀಸ್ 20,000 ಲಂಚಕ್ಕೆ ಬೇಡಿಕೆಯಿಟ್ಟಿದ್ದ. ಜೊತೆಗೆ ಪ್ರತೀ ತಿಂಗಳು 6 ಸಾವಿರ ರೂ.ನಂತೆ ಹಣ ನೀಡಬೇಕೆಂದು ಲಂಚ ಕೇಳಿದ್ದ. ಅದರಂತೆ ಮೊದಲಿಗೆ 20 ಸಾವಿರ ಹಣನೀಡಿ, ಬಳಿಕ ಪ್ರತಿ ತಿಂಗಳು 6 ಸಾವಿರ ದಂತೆ ಲಂಚ ನೀಡುತ್ತಾ ಬಂದಿದ್ದಾರೆ. ಈ ಮೂಲಕ ಈವರೆಗೆ ಒಟ್ಟು 50,000 ರೂ. ಲಂಚ ನೀಡಲಾಗಿತ್ತು.