ಕರ್ನಾಟಕ

karnataka

By ETV Bharat Karnataka Team

Published : Sep 11, 2024, 5:36 PM IST

ETV Bharat / state

ಗಾಂಧಿ ಜಯಂತಿಯಂದೇ ಮಹಾಲಯ ಅಮಾವಾಸ್ಯೆ: ಮಾಂಸ ಮಾರಾಟಕ್ಕೆ ಅವಕಾಶ ನೀಡುವಂತೆ ಸಿಎಂಗೆ ಪತ್ರ - Letter to CM

ಹಿಂದಿನಿಂದಲೂ ರೂಢಿಯಲ್ಲಿರುವ ಮಾಂಸಾಹಾರ ತಯಾರಿಸಿ, ತಮ್ಮ ಹಿರಿಯರಿಗೆ ಎಡೆ ಇಡುವ ಆಚರಣೆಗೆ ಅಡಚಣೆಯಾಗದಂತೆ, ಈ ಬಾರಿ ಗಾಂಧಿ ಜಯಂತಿ ದಿನ ಮಾಂಸ ಮಾರಾಟಕ್ಕೆ ಹೇರಿರುವ ನಿಷೇಧವನ್ನು ಹಿಂಪಡೆಯಬೇಕು ಎಂದು ಕೋರಿ ಸಿಎಂಗೆ ಪತ್ರ ಬರೆಯಲಾಗಿದೆ.

Social activist BM Sivakumar
ಸಾಮಾಜಿಕ‌ ಹೋರಾಟಗಾರ ಬಿ.ಎಂ.ಶಿವಕುಮಾರ್ (ETV Bharat)

ಸಿಎಂ ಸಿದ್ದರಾಮಯ್ಯಗೆ ಪತ್ರ ಬರೆದ ಕುರಿತು ಬಿ ಎಂ ಶಿವಕುಮಾರ್ ಮಾಹಿತಿ ನೀಡಿದರು (ETV Bharat)

ಬೆಂಗಳೂರು: ಗಾಂಧಿ ಜಯಂತಿಯಂದೇ ಮಹಾಲಯ ಅಮಾವಾಸ್ಯೆಯ ಪಿತೃಪಕ್ಷ ಹಬ್ಬ ಬರುತ್ತಿದ್ದು, ಅಂದು ಮಾಂಸ ಮಾರಾಟ ನಿಷೇಧ ಇರುವುದರಿಂದ ಪಿತೃಪಕ್ಷ ಹಬ್ಬ ಆಚರಿಸಲು ಅಡ್ಡಿಯಾಗುತ್ತಿದೆ. ಹೀಗಾಗಿ ವಿಶೇಷ ಸಂದರ್ಭವೆಂದು ಪರಿಗಣಿಸಿ ಮಾಂಸ ಮಾರಾಟ ನಿಷೇಧ ಆದೇಶ ಹಿಂಪಡೆಯುವಂತೆ ಜಯಪ್ರಕಾಶ್ ನಾರಾಯಣ್ ವಿಚಾರ ವೇದಿಕೆ ಅಧ್ಯಕ್ಷ ಹಾಗೂ ಸಾಮಾಜಿಕ‌ ಹೋರಾಟಗಾರ ಬಿ.ಎಂ. ಶಿವಕುಮಾರ್ ಅವರು ಸಿಎಂ ಸಿದ್ದರಾಮಯ್ಯಗೆ ಪತ್ರ ಬರೆದು ಮನವಿ ಮಾಡಿರುವುದಾಗಿ ಹೇಳಿದ್ದಾರೆ.

ಪತ್ರದಲ್ಲಿ, "ಪ್ರತಿ ವರ್ಷ ಮಹಾಲಯ ಅಮಾವಾಸ್ಯೆಯ ಹಬ್ಬದ ದಿನದಂದು ರಾಜ್ಯದ ಕೋಟ್ಯಾಂತರ ಜನರು, ಮಾಂಸಾಹಾರ ಸಿದ್ಧಪಡಿಸಿ ತಮ್ಮ ಹಿರಿಯರಿಗೆ ಎಡೆ ಹಾಕಿ, ಪೂಜೆ ಮಾಡಿ ಬಂಧು ಬಳಗ, ಸ್ನೇಹಿತರೊಂದಿಗೆ ಊಟ ಮಾಡುವ ಮೂಲಕ ಹಬ್ಬವನ್ನು ಆಚರಿಸುವುದು ಹಲವಾರು ಶತಮಾನಗಳಿಂದ ರೂಢಿಯಲ್ಲಿದೆ" ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಕಾಕತಾಳೀಯವೆಂಬಂತೆ ಈ ವರ್ಷದ "ಪಿತೃಪಕ್ಷದ ಮಹಾಲಯ ಅಮಾವಾಸ್ಯೆಯ ಹಬ್ಬ" ಗಾಂಧಿಜಯಂತಿ ದಿನವೇ ಬಂದಿದ್ದು, ಆ ದಿನ ಮಾಂಸ ಮಾರಾಟಕ್ಕೆ ನಿಷೇಧ ಇರುವುದರಿಂದ ರಾಜ್ಯದ ಕೋಟ್ಯಂತರ ಜನರು ಹಿಂದಿನಿಂದಲೂ ರೂಢಿಯಲ್ಲಿರುವ ಹಬ್ಬದ ಆಚರಣೆಗೆ ಅಡಚಣೆಯಾಗಲಿದೆ ಎಂಬ ಆತಂಕದಲ್ಲಿದ್ದಾರೆ" ಎಂದು ತಿಳಿಸಿದ್ದಾರೆ.

ರಾಷ್ಟ್ರಪಿತ ಮಹಾತ್ಮಗಾಂಧಿ ಬಗ್ಗೆ ನಮ್ಮ ರಾಜ್ಯದ ಜನರಿಗೆ ಗೌರವವಿದೆ. ಆದರೆ ಮಹಾಲಯ ಅಮಾವಾಸ್ಯೆ ದಿನ ಹಬ್ಬ ಆಚರಣೆ ಮಾಡಲೇಬೇಕಿದೆ ಎಂಬ ಸಂದಿಗ್ಧತೆಯನ್ನು ಪತ್ರದಲ್ಲಿ ವಿವರಿಸಿದ್ದಾರೆ. ಗಾಂಧಿಜಯಂತಿ ಎಂಬ ಕಾರಣದಿಂದ ಹಬ್ಬ ಆಚರಣೆಗೆ ಅಡಚಣೆಯಾಗಬಾರದು. ರಾಜ್ಯದ ಜನರು ಹಾಗೂ ಭಾವನೆ, ಹಬ್ಬ ಮಾಡುವ ಹಕ್ಕುಗಳಿಗೆ ಯಾವುದೇ ಕಾರಣದಿಂದಲೂ ಧಕ್ಕೆಯಾಗಬಾರದು ಎಂದು ಮನವಿ ಮಾಡಿದ್ದಾರೆ.

ಆದ್ದರಿಂದ ಈ ವರ್ಷ ಇದನ್ನು 'ವಿಶೇಷ ಸಂದರ್ಭ'ವೆಂದು ಪರಿಗಣಿಸಿ ಅ.2ರ ಗಾಂಧಿ ಜಯಂತಿಯಂದು ಮಾಂಸ ಮಾರಾಟ ನಿಷೇಧವನ್ನು ಹಿಂಪಡೆದು, ರಾಜ್ಯಾದ್ಯಂತ ಮಾಂಸ ಮಾರಾಟಕ್ಕೆ ಅವಕಾಶವನ್ನು ಮಾಡಿಕೊಟ್ಟು ರಾಜ್ಯದ ಕೋಟ್ಯಂತರ ಜನರು ಮಹಾಲಯ ಅಮಾವಾಸ್ಯೆಯ ಪಿತೃಪಕ್ಷದ ಹಬ್ಬವನ್ನು ಆಚರಣೆ ಮಾಡಲು ಅನುವು ಮಾಡಿಕೊಡಬೇಕೆಂದು ಎಂದು ಪತ್ರದಲ್ಲಿ ಕೋರಿದ್ದಾರೆ.

ಇದನ್ನೂ ಓದಿ:ಸಮಿತಿ ರಚನೆ ದ್ವೇಷ ರಾಜಕಾರಣ ಎಂದಾದರೆ ನನ್ನ ವಿರುದ್ಧ ನೀವು ಮಾಡುತ್ತಿರುವುದೇನು: ವಿಪಕ್ಷ ನಾಯರಿಗೆ ಸಿಎಂ‌ ಪ್ರಶ್ನೆ - cm Siddaramaiah

ABOUT THE AUTHOR

...view details