ಕರ್ನಾಟಕ

karnataka

ಬೆಂಗಳೂರು: ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯ ಬರ್ಬರ ಹತ್ಯೆ - Bengaluru Murder Case

By ETV Bharat Karnataka Team

Published : Jul 3, 2024, 10:23 AM IST

Updated : Jul 3, 2024, 10:52 AM IST

ಕೆಲಸ ಮುಗಿಸಿಕೊಂಡು ಮನೆಗೆ ಬರುತ್ತಿದ್ದ ವ್ಯಕ್ತಿಯೊಬ್ಬನನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ದಾಳಿ ನಡೆಸಿ ಹತ್ಯೆಗೈದ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

BENGALURU MURDER CASE
ಪರಿಶೀಲನೆಯಲ್ಲಿ ತೊಡಗಿರುವ ಪುಲಿಕೇಶಿನಗರ ಠಾಣಾ ಪೊಲೀಸರು (ETV Bharat)

ಬೆಂಗಳೂರು: ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ವ್ಯಕ್ತಿಯೊಬ್ಬನನ್ನು ಭೀಕರವಾಗಿ ಹತ್ಯೆಗೈದಿರುವ ಘಟನೆ ಪುಲಿಕೇಶಿನಗರ ಪೊಲೀಸ್ ಠಾಣಾ ವ್ಯಾಪ್ತಿಯ ದೊಡ್ಡಗುಂಟೆ ಬಳಿ ಇಂದು ಬೆಳಿಗ್ಗೆ ನಡೆದಿದೆ. ಬಾಣಸವಾಡಿ ನಿವಾಸಿ ಅಜಿತ್ (35) ಹತ್ಯೆಯಾದವರು. ಕೆಲಸಕ್ಕೆ ತೆರಳುತ್ತಿದ್ದಾಗ ನಾಲ್ಕೈದು ಜನರಿದ್ದ ದುಷ್ಕರ್ಮಿಗಳ ತಂಡ ಹತ್ಯೆಗೈದು ಪರಾರಿಯಾಗಿದೆ.

ಅಜಿತ್ ಹಲವರ ಬಳಿ ಬಡ್ಡಿಗೆ ಹಣ ಪಡೆದು ವಾಪಸ್ ಕೊಡದೇ ಸತಾಯಿಸುತ್ತಿದ್ದರು ಎಂಬ ಮಾಹಿತಿ ಲಭ್ಯವಾಗಿದೆ. ಇದೇ ಕಾರಣಕ್ಕೆ ಹತ್ಯೆಗೈದಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.

ಘಟನಾ ಸ್ಥಳಕ್ಕೆ ಪುಲಿಕೇಶಿನಗರ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕೊಲೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಗಳಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.

ಇದನ್ನೂ ಓದಿ:ಏರಿಯಾದಲ್ಲಿ ಪ್ರಾಬಲ್ಯ ಸಾಧಿಸಲು ಕಂಡ ಕಂಡವರ ಮೇಲೆ ಹಲ್ಲೆ ಮಾಡುತ್ತಿದ್ದವನ ಕೊಲೆ: ನಾಲ್ವರು ಆರೋಪಿಗಳು ಅಂದರ್​ - MURDER CASE

Last Updated : Jul 3, 2024, 10:52 AM IST

ABOUT THE AUTHOR

...view details