ಕೋಲಾರ:ಇಸ್ಪೀಟ್ ಅಡ್ಡೆ ಮೇಲೆ ಪೊಲೀಸರು ದಾಳಿ ನಡೆಸಿದ ವೇಳೆ ವ್ಯಕ್ತಿಯೋರ್ವ ತಪ್ಪಿಸಿಕೊಳ್ಳುವ ಆತುರದಲ್ಲಿ ಕೆರೆಗೆ ಬಿದ್ದು ಸಾವನ್ನಪ್ಪಿದ ಘಟನೆ ಶ್ರೀನಿವಾಪುರ ತಾಲೂಕಿನ ಗುಡಸವಾರಪಲ್ಲಿ ಗ್ರಾಮದಲ್ಲಿ ನಡೆದಿದೆ. ಇದೇ ಗ್ರಾಮದ ನಿವಾಸಿ ನರಸಿಂಹ (45) ಸಾವನ್ನಪ್ಪಿದ ವ್ಯಕ್ತಿ ಎಂದು ಗುರುತಿಸಲಾಗಿದೆ.
ಈ ಕುರಿತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಾರಾಯಣ ಮಾತನಾಡಿ, "ಕೊಂಡರೆಡ್ಡಿ ಚೆರುವು ಬಳಿ ಇಸ್ಪೀಟ್ ಆಡುತ್ತಿದ್ದಾರೆ ಎಂಬ ಮಾಹಿತಿ ಪೊಲೀಸರಿಗೆ ಸಿಕ್ಕಿತ್ತು. ಪೊಲೀಸ್ ಸಿಬ್ಬಂದಿ ಪರಿಶೀಲನೆಗೆ ತೆರಳಿದ್ದಾಗ ಸುಮಾರು 12 ಮಂದಿ ಇಸ್ಪೀಟ್ ಆಡುತ್ತಿದ್ದರು. ಪೊಲೀಸರನ್ನು ಕಂಡ ತಕ್ಷಣ ಎಲ್ಲರೂ ಕಾಲ್ಕಿತ್ತಿದ್ದಾರೆ. ತಪ್ಪಿಸಿಕೊಳ್ಳುವ ಭರದಲ್ಲಿ 3 ಮೂವರು ಕೆರೆ ಹಾರಿದ್ದಾರೆ, ಉಳಿದವರು ತಪ್ಪಿಸಿಕೊಂಡಿದ್ದಾರೆ ಎಂದು ಪೊಲೀಸರು ವಾಪಸ್ ಬಂದಿದ್ದಾರೆ."