ಕರ್ನಾಟಕ

karnataka

By ETV Bharat Karnataka Team

Published : Apr 14, 2024, 6:50 PM IST

ETV Bharat / state

ಬಸ್​ನಲ್ಲಿ ಪ್ರಯಾಣಿಸುತ್ತಿದ್ದಾಗ ಹೃದಯಾಘಾತ: ಜೆಸ್ಕಾಂ ಬಿಲ್ ಕಲೆಕ್ಟರ್ ವಿಧಿವಶ - HEART ATTACK

ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದಾಗ ಹೃದಯಾಘಾತವಾಗಿ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಕಲಬುರಗಿಯ ಕಮಲಾಪುರ ಬಳಿ ನಡೆದಿದೆ.

ಬಸ್​ನಲ್ಲಿ ಪ್ರಯಾಣಿಸುವ ವೇಳೆ ಹೃದಯಾಘಾತ: ಜೆಸ್ಕಾಂ ಬಿಲ್ ಕಲೆಕ್ಟರ್  ಸಾವು
ಬಸ್​ನಲ್ಲಿ ಪ್ರಯಾಣಿಸುವ ವೇಳೆ ಹೃದಯಾಘಾತ: ಜೆಸ್ಕಾಂ ಬಿಲ್ ಕಲೆಕ್ಟರ್ ಸಾವು

ಕಲಬುರಗಿ: ಸಾರಿಗೆ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದಾಗ ಹೃದಯಾಘಾತವಾಗಿ ಜೆಸ್ಕಾಂ ಗುತ್ತಿಗೆ ಸಿಬ್ಬಂದಿಯೊಬ್ಬರು ಮೃತಪಟ್ಟ ಘಟನೆ ಭಾನುವಾರ ಕಮಲಾಪುರ ಬಳಿ ನಡೆದಿದೆ. ಕಲಬುರಗಿ ನಗರದ ಬಿದ್ದಾಪುರ ಕಾಲೊನಿಯ ನಿವಾಸಿ, ಮೂಲತಃ ನಾಗನಹಳ್ಳಿಯವರಾದ ವಿಜಯಕುಮಾರ ಶಿವಶರಣಪ್ಪ (45) ಮೃತರು.

ವಿಜಯಕುಮಾರ ಶಿವಶರಣಪ್ಪ ಜೆಸ್ಕಾಂನಲ್ಲಿ ಗುತ್ತಿಗೆ ಆಧಾರದಡಿ ಬಿಲ್ ಕಲೆಕ್ಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದರು. ಕರಬುರಗಿಯಿಂದ ಭಾಲ್ಕಿಯಲ್ಲಿನ ತಮ್ಮ ಸಹೋದರಿ ಮನೆಗೆ ತೆರಳುತ್ತಿದ್ದರು. ಮುಗಳಖೋಡ- ಬೀದರ್ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದು, ಕಮಲಾಪುರ ಬಳಿ ಹೃದಯಾಘಾತವಾಗಿದೆ. ಅವರನ್ನು ತಕ್ಷಣ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಚಿಕಿತ್ಸೆಗೆ ಕರೆದೊಯ್ಯಲಾಗುತ್ತಿತ್ತು. ಆದ್ರೆ ಮಾರ್ಗ ಮಧ್ಯೆ ಮೃತಪಟ್ಟಿದ್ದಾರೆ. ಸುಮಾರು 2 ಗಂಟೆವರಗೆ ಬಸ್ ರಸ್ತೆಯಲ್ಲಿ ನಿಂತಿದ್ದರಿಂದ ಪ್ರಯಾಣಿಕರು ಪರದಾಡಿದರು.

ಇದನ್ನೂ ಓದಿ:ಬೆಳಗಾವಿ: ಮಾಜಿ ಎಂಎಲ್​ಸಿ ಸುನಂದಾ ಪಾಟೀಲ ವಿಧಿವಶ - Sunanda Patil passes away

ABOUT THE AUTHOR

...view details