ಕರ್ನಾಟಕ

karnataka

ETV Bharat / state

ದಕ್ಷಿಣ ಕೊರಿಯಾದಲ್ಲಿ ಕೈಗಾರಿಕಾ ಸಚಿವರ ತಂಡ : ವೈಜಿ-1 ಕಂಪನಿಯಿಂದ ರಾಜ್ಯದಲ್ಲಿ 1245 ಕೋಟಿ ರೂ. ಹೂಡಿಕೆ - Minister MB Patil

ಕೈಗಾರಿಕಾ ಸಚಿವ ಎಂ ಬಿ ಪಾಟೀಲ್ ನೇತೃತ್ವದ ನಿಯೋಗ ದಕ್ಷಿಣ ಕೊರಿಯಾಕ್ಕೆ ಭೇಟಿ ನೀಡಿದೆ. ಅಲ್ಲಿನ ವೈಜಿ-1 ಕಂಪನಿ ಕರ್ನಾಟಕದಲ್ಲಿ 1,245 ಕೋಟಿ ರೂ. ಬಂಡವಾಳ ಹೂಡಿಕೆ ಮಾಡುವುದಾಗಿ ಪ್ರಕಟಿಸಿದೆ.

By ETV Bharat Karnataka Team

Published : Jul 3, 2024, 9:46 PM IST

minister-mb-patil-delegation-visits-to-south-korea
ಕೈಗಾರಿಕಾ ಸಚಿವ ಎಂ ಬಿ ಪಾಟೀಲ್ ನೇತೃತ್ವದ ನಿಯೋಗ ದಕ್ಷಿಣ ಕೊರಿಯಾಕ್ಕೆ ಭೇಟಿ (ETV Bharat)

ಬೆಂಗಳೂರು/ ದಕ್ಷಿಣ ಕೊರಿಯಾ : ಅತ್ಯಾಧುನಿಕ ಕಟಿಂಗ್‌ ಟೂಲ್ಸ್‌ ತಯಾರಿಸುವ ದಕ್ಷಿಣ ಕೊರಿಯಾದ ಜಾಗತಿಕ ಕಂಪನಿಯಾಗಿರುವ ವೈಜಿ-1, ಕರ್ನಾಟಕದಲ್ಲಿ 1,245 ಕೋಟಿ ರೂ. ಬಂಡವಾಳ ಹೂಡಿಕೆ ಮಾಡುವುದಾಗಿ ಪ್ರಕಟಿಸಿದೆ.

ಕೈಗಾರಿಕಾ ಸಚಿವ ಎಂ ಬಿ ಪಾಟೀಲ್ ನೇತೃತ್ವದ ನಿಯೋಗ ದಕ್ಷಿಣ ಕೊರಿಯಾಕ್ಕೆ ಭೇಟಿ (ETV Bharat)

ಬಂಡವಾಳ ಹೂಡಿಕೆ ಆಕರ್ಷಿಸಲು ದಕ್ಷಿಣ ಕೊರಿಯಾಕ್ಕೆ 5 ದಿನಗಳ ಭೇಟಿ ನೀಡಿರುವ ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ. ಬಿ ಪಾಟೀಲ್ ನೇತೃತ್ವದ ರಾಜ್ಯದ ಉನ್ನತ ಮಟ್ಟದ ನಿಯೋಗದ ಜೊತೆಗೆ ಇಂದು ನಡೆದ ಸಮಾಲೋಚನೆ ಸಂದರ್ಭದಲ್ಲಿ ಕಂಪನಿಯು ಈ ಘೋಷಣೆ ಮಾಡಿದೆ.

ಕರ್ನಾಟಕದಲ್ಲಿ ಕೊರಿಯಾ ಭಾಷೆ ಕಲಿಸುವ ಮತ್ತು ತರಬೇತಿ ನೀಡುವ ಕೇಂದ್ರ, ಇಂಧನ ಆವಿಷ್ಕಾರ ಮತ್ತು ತಂತ್ರಜ್ಞಾನ ಪ್ರಗತಿ ಕ್ಷೇತ್ರಗಳಲ್ಲಿ ಅತ್ಯಾಧುನಿಕ ಸಂಶೋಧನೆ ಹಾಗೂ ಅಭಿವೃದ್ಧಿ ಕೇಂದ್ರ (ಆರ್‌ಆ್ಯಂಡ್‌ಡಿ) ಸ್ಥಾಪಿಸಲಾಗುವುದು ಎಂದು ಕಂಪನಿಯ ಚೇರ್ಮನ್‌ ಹೊ ಕ್ಯೂನ್‌ ಸಾಂಗ್‌ ಅವರು ತಿಳಿಸಿದ್ದಾರೆ.

'ಐಟಿ, ಎಲೆಕ್ಟ್ರಾನಿಕ್‌ ಸಿಸ್ಟಮ್ಸ್‌, ವೈಮಾಂತರಿಕ್ಷ ಹಾಗೂ ರಕ್ಷಣೆಗೆ ಸಂಬಂಧಿಸಿದ ಉದ್ದಿಮೆಗಳಲ್ಲಿ ಕರ್ನಾಟಕವು ಭಾರತದಲ್ಲಿ ಮೊದಲ ಸ್ಥಾನದಲ್ಲಿ ಇರುವುದನ್ನು ಸಚಿವ ಪಾಟೀಲ ಅವರು ಕೊರಿಯಾದ ಕಂಪನಿಗಳಿಗೆ ಮನವರಿಕೆ ಮಾಡಿಕೊಟ್ಟರು. ಸೌರಶಕ್ತಿಯೂ ಸೇರಿದಂತೆ ರಾಜ್ಯವು ವಿಪುಲ ಪ್ರಮಾಣದಲ್ಲಿ ನೈಸರ್ಗಿಕ ಸಂಪನ್ಮೂಲ ಹೊಂದಿದೆ. ವಿದ್ಯುತ್‌ ಚಾಲಿತ ವಾಹನ, ಎಲೆಕ್ಟ್ರಾನಿಕ್ಸ್‌ ಮತ್ತು ಸ್ಮಾರ್ಟ್‌ಫೋನ್‌ ತಯಾರಿಕೆಗೆ ರಾಜ್ಯ ಸರ್ಕಾರವು ಗರಿಷ್ಠ ಪ್ರಮಾಣದಲ್ಲಿ ಉತ್ತೇಜನ ನೀಡುತ್ತಿದೆ' ಎಂದು ಹೇಳಿದ್ದಾರೆ.

ರಾಜ್ಯದಲ್ಲಿ ವಿದ್ಯುತ್‌ ಚಾಲಿತ ದ್ವಿಚಕ್ರ ವಾಹನಗಳ ಮಾರುಕಟ್ಟೆ ಗಮನಾರ್ಹವಾಗಿ ವಿಸ್ತರಣೆಗೊಳ್ಳುತ್ತಿರುವುದನ್ನು ಕೊರಿಯಾದ ಕಂಪನಿಗಳ ಗಮನಕ್ಕೆ ತರಲಾಯಿತು. ಈಗಾಗಲೇ ಭಾರತದ ವಿವಿಧ ನವೋದ್ಯಮಗಳಲ್ಲಿ 1,162 ಕೋಟಿ ರೂ. ಹೂಡಿಕೆ ಮಾಡಿರುವ ಜಾಗತಿಕ ಗೇಮಿಂಗ್‌ ಕಂಪನಿ ಕ್ರಾಫ್ಟನ್‌ ಇಂಕ್‌, ಮುಂದಿನ 2 ರಿಂದ 3 ವರ್ಷಗಳಲ್ಲಿ ಗೇಮಿಂಗ್‌ ಮತ್ತು ತಂತ್ರಜ್ಞಾನ ಕ್ಷೇತ್ರಗಳಲ್ಲಿ 1,245 ಕೋಟಿ ರೂ. ಹೂಡಿಕೆ ಮಾಡುವುದಾಗಿ ನಿಯೋಗದ ಜೊತೆಗಿನ ಸಭೆಯಲ್ಲಿ ಬದ್ಧತೆ ತೋರಿದೆ.

ಭಾರತದಲ್ಲಿನ ಗೇಮಿಂಗ್‌ ಎಂಜಿನಿಯರ್‌ಗಳನ್ನು ಹೆಚ್ಚಿನ ಸಂಖ್ಯೆಯಲ್ಲಿ ನೇಮಕ ಮಾಡಿಕೊಳ್ಳುವ ಬಗ್ಗೆ ಕ್ರಾಫ್ಟನ್‌ ಕಂಪನಿ ಇಂಗಿತ ವ್ಯಕ್ತಪಡಿಸಿದೆ. ಬೌದ್ಧಿಕ ಆಸ್ತಿ (ಐಪಿ) ಆಧಾರಿತ ಕ್ರೀಡೆ, ಇ - ಕ್ರೀಡೆಗಳ ಅಭಿವೃದ್ಧಿ ಮತ್ತು ಮೊಬೈಲ್‌ ಫೋನ್‌ ಗೇಮಿಂಗ್‌ ಕುರಿತು ಪ್ರಮುಖವಾಗಿ ಚರ್ಚಿಸಲಾಯಿತು.

ಕೈಗಾರಿಕಾ ಇಲಾಖೆ ಪ್ರಧಾನ ಕಾರ್ಯದರ್ಶಿ ಸೆಲ್ವಕುಮಾರ್, ಆಯುಕ್ತೆ ಗುಂಜನ್ ಕೃಷ್ಣ, ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ ಸೇರಿದಂತೆ ಇತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಇದನ್ನೂ ಓದಿ :ಸೆಮಿಕಂಡಕ್ಟರ್ ಉದ್ಯಮ: ಗುಜರಾತ್ ಮಾದರಿಯಲ್ಲಿ ರಾಜ್ಯಕ್ಕೂ ಸಬ್ಸಿಡಿ ಕೊಡಲಿ- ಎಂ.ಬಿ.ಪಾಟೀಲ್‌ - M B Patil

ABOUT THE AUTHOR

...view details