ಬೆಂಗಳೂರು :ಕೇಂದ್ರ ಸರ್ಕಾರದ ಬಜೆಟ್ ಬಗ್ಗೆ ನಮ್ಮ ನಿರೀಕ್ಷೆ ಶೂನ್ಯ ಇದೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು. ವಿಧಾನಸೌಧದಲ್ಲಿ ಮಾತನಾಡಿದ ಅವರು, ಕೇಂದ್ರದಿಂದ ಉದ್ಯೋಗ ಸೃಷ್ಟಿಆಗಿದ್ಯಾ? 10 ಸಾವಿರ ಜನ ಇಸ್ರೇಲ್ನಲ್ಲಿ ಕೆಲಸ ಮಾಡುತ್ತಿದ್ದಾರೆ ಯಾಕೆ?. ರೈತರ ಆದಾಯ ದುಪ್ಪಟ್ಟು ಮಾಡಿದ್ರಾ? ಎಂದು ಕೇಂದ್ರದ ವಿರುದ್ಧ ವಾಗ್ದಾಳಿ ನಡೆಸಿದರು.
ರಾಷ್ಟ್ರ ಬಡತನ ರೇಖೆಯಲ್ಲಿ 111ನೇ ಸ್ಥಾನದಲ್ಲಿದೆ. ಹಸಿವಿನಲ್ಲಿ 113 ನೇ ಸ್ಥಾನದಲ್ಲಿದೆ. ಭ್ರಷ್ಟಾಚಾರದಲ್ಲಿ 93 ನೇ ಸ್ಥಾನದಲ್ಲಿದೆ. ಹೀಗಾಗಿ ಬಜೆಟ್ನಲ್ಲಿ ನಮ್ಮ ನಿರೀಕ್ಷೆ ಶೂನ್ಯವಾಗಿದೆ. ಈ ಬಗ್ಗೆ 9 ವರ್ಷಗಳ ಟ್ರಾಕ್ ರೆಕಾರ್ಡ್ಗಳು ಹೇಳುತ್ತಿವೆ. ಕೇಂದ್ರದಿಂದ ಕನ್ನಡಿಗರಿಗೆ ಅನ್ಯಾಯ ಆಗ್ತಾನೇ ಇದೆ. ಜಿಎಸ್ಟಿ ಮರುಪಾವತಿಯಲ್ಲಿ ಅನ್ಯಾಯವಾಗಿದೆ. ಕಲಬುರಗಿಯಲ್ಲಿ ಇಂಡಸ್ಟ್ರೀಸ್ ಮಾಡುತ್ತೇವೆ ಎಂದರು ಆಯ್ತಾ?, ಕಲಬುರಗಿ ರೈಲ್ವೇ ಡಿವಿಜನ್ ಮಾಡಲು ಆಗಿಲ್ಲ. ಮೋದಿ ಗ್ಯಾರೆಂಟಿಯಲ್ಲಿ 50% ಕನ್ನಡಿಗರ ಬೆವರಿದೆ. ಜಲಜೀವನ್ ಮಿಷನ್ನಲ್ಲೂ 50% ಬೆವರಿದೆ ಎಂದು ಪ್ರಿಯಾಂಕ್ ಖರ್ಗೆ ಹೇಳಿದರು.