ಕರ್ನಾಟಕ

karnataka

ETV Bharat / state

ಝೀರೊ ಟ್ರಾಫಿಕ್‌ ನಿಯಮ ಉಲ್ಲಂಘನೆ: ಶಾಸಕ ಜನಾರ್ದನ ರೆಡ್ಡಿ ರೇಂಜ್ ರೋವರ್ ಕಾರು ವಶಕ್ಕೆ

ಸಿಎಂ ತೆರಳುವ ವೇಳೆ ಝೀರೊ ಟ್ರಾಫಿಕ್‌ ನಿಯಮ ಉಲ್ಲಂಘಿಸಿದ್ದರಿಂದ ಪೊಲೀಸರು ಶಾಸಕ ಜನಾರ್ದನ ರೆಡ್ಡಿ ಅವರ ಒಂದು ಹಾಗೂ ಅವರ ಬೆಂಬಲಿಗರ ಎರಡು ಕಾರುಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

By ETV Bharat Karnataka Team

Published : 4 hours ago

ಜನಾರ್ದನ ರೆಡ್ಡಿ ಕಾರು ರೇಂಜ್ ರೋವರ್ ವಶಕ್ಕೆ
ಜನಾರ್ದನ ರೆಡ್ಡಿ ರೇಂಜ್ ರೋವರ್ ಕಾರು ವಶಕ್ಕೆ (ETV Bharat)

ಗಂಗಾವತಿ(ಕೊಪ್ಪಳ):ಶಾಸಕ ಜನಾರ್ದನ ರೆಡ್ಡಿ ಅವರ ರೇಂಜ್ ರೋವರ್ ಕಾರು ಹಾಗೂ ಅವರ ಬೆಂಬಲಿಗರ ಎರಡು ಕಾರುಗಳನ್ನು ಮಂಗಳವಾರ ನಗರದ ಸಂಚಾರಿ ಠಾಣೆಯ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಸಿಎಂ ಸಿದ್ದರಾಮಯ್ಯ ಇತ್ತೀಚೆಗೆ ಗಂಗಾವತಿ ಮಾರ್ಗವಾಗಿ ಕೊಪ್ಪಳಕ್ಕೆ ತೆರಳುವ ಸಂದರ್ಭದಲ್ಲಿ ಝೀರೊ ಟ್ರಾಫಿಕ್‌ ನಿಯಮ ಉಲ್ಲಂಘಿಸಿದ್ದರಿಂದ ರೆಡ್ಡಿ ಕಾರು ಚಾಲಕ ಹುಸೇನ್ ಸೇರಿದಂತೆ ಮೂವರ ಮೇಲೆ ಪ್ರಕರಣ ದಾಖಲಾಗಿತ್ತು.

ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿದ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ತಂಗಡಗಿ, ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ಸೂಚನೆ ನೀಡಿದ್ದರು. ಇದರ ಬೆನ್ನಲ್ಲೇ ನಗರ ಸಂಚಾರಿ ಠಾಣೆಯ ಪೊಲೀಸರು ಮೂರು ವಾಹನಗಳನ್ನು ವಶಕ್ಕೆ ಪಡೆದಿದ್ದಾರೆ.

ಇದನ್ನೂ ಓದಿ:ಸಿಎಂ ಆಗಮನಕ್ಕಾಗಿ ಜನಾರ್ದನ ರೆಡ್ಡಿ ಕಾರಿಗೆ ತಡೆ: ಡಿವೈಡರ್​ ಹತ್ತಿಸಿಕೊಂಡು ತೆರಳಿದ ಶಾಸಕ - Janardhan Reddy

ABOUT THE AUTHOR

...view details