ತುಮಕೂರು:ಹೇಮಾವತಿ ನದಿ ನೀರನ್ನು ಮಾಗಡಿ ತಾಲೂಕಿಗೆ ಹಂಚಿಕೆ ಮಾಡುವ ಹೇಮಾವತಿ ಲಿಂಕ್ ಎಕ್ಸ್ಪ್ರೆಸ್ ಕೆನಾಲ್ ಕಾಮಗಾರಿಯನ್ನು ತಕ್ಷಣ ನಿಲ್ಲಿಸುವಂತೆ ಸಂಬಂಧಪಟ್ಟ ಇಂಜಿನಿಯರ್ಗೆ ಶಾಸಕ ಎಂ.ಟಿ. ಕೃಷ್ಣಪ್ಪ ಖಡಕ್ ಸೂಚನೆ ನೀಡಿದ್ದಾರೆ. ಈ ಬಗ್ಗೆ ಫೋನ್ ಕರೆಯಲ್ಲಿ ಮಾತನಾಡಿದ ಅವರು, ಮಾಗಡಿ ತಾಲೂಕಿಗೆ ನಡೆಯುತ್ತಿರುವ ಕಾಮಗಾರಿ ಬಗ್ಗೆ ಇಂಜಿನಿಯರ್ ಜೊತೆ ತುರುವೇಕೆರೆಯಲ್ಲಿ ಮಾತನಾಡಿದರು.
ಕೆನಾಲ್ ಕಾಮಗಾರಿ ವಿರೋಧಿಸಿ ಕರೆದಿದ್ದ ಪತ್ರಿಕಾಗೋಷ್ಠಿಯ ವೇಳೆ ಶಾಸಕರು ಹಾಗೂ ಇಂಜಿನಿಯರ್ ನಡುವೆ ಈ ಫೋನ್ ಸಂಭಾಷಣೆ ನಡೆದಿದೆ. ಎಕ್ಸ್ಪ್ರೆಸ್ ಕೆನಾಲ್ ಕಾಮಗಾರಿಯನ್ನು ತಕ್ಷಣ ನಿಲ್ಲಿಸಬೇಕು ಎಂದು ಹೇಮಾವತಿ ಜಲಾನಯನ ಅಭಿವೃದ್ಧಿ ಇಲಾಖೆ ಇಂಜಿನಿಯರ್ಗೆ ಶಾಸಕರು ಸೂಚಿಸಿದರು. ಇದೇ ವೇಳೆ, ತಮ್ಮ ವಿರುದ್ಧ ಪ್ರಕರಣ ದಾಖಲಿಸುವಂತೆಯೂ ಸವಾಲು ಹಾಕಿದರು.