ಚಿಕ್ಕಮಗಳೂರು:ದೇಶದೆಲ್ಲೆಡೆ ಇಂದು ಸಂಭ್ರದಿಂದ ಗಣೇಶ ಚೌತಿ ಹಬ್ಬವನ್ನು ಆಚರಿಸಲಾಗುತ್ತಿದೆ. ಅದರಂತೆ ನಗರದ ಹನುಮಂತಪ್ಪ ವೃತ್ತದಲ್ಲಿರುವ ಹಿಂದೂ ಮಹಾಸಭಾ ಗಣಪತಿಯನ್ನು ಸಡಗರದಿಂದ ಬರಮಾಡಿಕೊಂಡಿದ್ದು, ಮೆರವಣಿಗೆ ವೇಳೆ ಗಣಪತಿಯ ಮುಂಭಾಗದಲ್ಲಿ ಡ್ರಮ್ ಸೆಟ್ ಶಬ್ಧಕ್ಕೆ ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಭರ್ಜರಿ ಡ್ಯಾನ್ಸ್ ಮಾಡಿದ್ದಾರೆ. ಸಿ.ಟಿ.ರವಿ ಜೊತೆ ಯುವಕರು ಕುಣಿದು ಸಂಭ್ರಮಿಸಿದರು. ಚಿಕ್ಕಮಗಳೂರು ನಗರದ ಹನುಮಂತಪ್ಪ ವೃತ್ತದಲ್ಲಿ ಹಿಂದೂ ಮಹಾಸಭಾ ಗಣಪತಿ ಪ್ರತಿಷ್ಠಾಪನೆ ತುಂಬಾ ಅದ್ಧೂರಿಯಾಗಿ ನಡೆಯಿತು.
ವಿಭಿನ್ನ ಆಕರ್ಷಕ ಗಣಪನ ಮೂರ್ತಿಗಳು:ನಾಡಿನೆಲ್ಲೆಡೆ ವಿಘ್ನ ನಿವಾರಕನ ಹಬ್ಬದ ಸಂಭ್ರಮ ಮನೆ ಮಾಡಿದೆ. ಕಾಫಿ ನಾಡು ಚಿಕ್ಕಮಗಳೂರಿನಲ್ಲಿಯೂ ಅದ್ಧೂರಿಯಾಗಿ ಗಣೇಶೋತ್ಸವ ನಡೆಯುತ್ತಿದೆ. ಗಣೇಶೋತ್ಸವದ ಪ್ರಮುಖ ಆಕರ್ಷಣೆಯೆಂದರೆ ಬಣ್ಣ ಬಣ್ಣದ ಗಣಪನ ಮೂರ್ತಿಗಳು. ಜಿಲ್ಲೆಯ ಹಳ್ಳಿ ಹಳ್ಳಿಗಳಲ್ಲಿ ವಿವಿಧ ರೀತಿಯ ಆಕರ್ಷಕ ಗಣಪನ ಮೂರ್ತಿಗಳು ಪ್ರತಿಷ್ಠಾಪನೆಗೊಳ್ಳುತ್ತಿವೆ.