ಕರ್ನಾಟಕ

karnataka

ETV Bharat / state

ಚಾರಣ ಪ್ರಿಯರಿಗೆ ಗುಡ್​ ನ್ಯೂಸ್​: ನಾಗಮಲೆಗೆ ತೆರಳಲು ಅವಕಾಶ, ಬುಕಿಂಗ್ ಆರಂಭ

ದಕ್ಷಿಣ ಭಾರತದ ಪ್ರಮುಖ ಚಾರಣ ಸ್ಥಳವಾದ ನಾಗಮಲೆಗೆ ತೆರಳಲು ಮತ್ತೆ ಅವಕಾಶ ನೀಡಲಾಗುತ್ತಿದೆ. ಆದರೆ, ಅರಣ್ಯ ಇಲಾಖೆಯ ವೆಬ್​ಸೈಟ್​ನಲ್ಲಿ ಬುಕಿಂಗ್​ ಮಾಡಬೇಕಿದ್ದು, ಈ ಕುರಿತಾದ ಮಾಹಿತಿ ಇಲ್ಲಿದೆ.

By ETV Bharat Karnataka Team

Published : 4 hours ago

nagamale trek
ಸಂಗ್ರಹ ಚಿತ್ರ (ETV Bharat)

ಚಾಮರಾಜನಗರ:ದಕ್ಷಿಣ ಭಾರತದ ಪ್ರಮುಖ ಯಾತ್ರಾ ಸ್ಥಳವಾದ ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟಕ್ಕೆ ತೆರಳುವವರು ಈಗ ನಾಗಮಲೆಗೂ ಭೇಟಿ ನೀಡಬಹುದಾಗಿದೆ. ಭಕ್ತಾದಿಗಳು ಅರಣ್ಯ ಇಲಾಖೆಯ ವೆಬ್​ಸೈಟ್​ನಲ್ಲಿ ನೋಂದಣಿ ಮಾಡಿಕೊಂಡು, ನಾಗಮಲೆಗೆ ಕಾಲ್ನಡಿಗೆಯಲ್ಲಿ ತೆರಳಬಹುದು.

ಮಲೆ ಮಹದೇಶ್ವರ ಬೆಟ್ಟಕ್ಕೆ ಬರುವಂತಹ ಬಹುತೇಕ ಭಕ್ತಾದಿಗಳು ನಾಗಮಲೆ ಕ್ಷೇತ್ರಕ್ಕೆ ಹೋಗಿ ಬರುವುದು ಸಂಪ್ರದಾಯವಾಗಿತ್ತು. ಜಾತ್ರಾ ಮಹೋತ್ಸವ, ಹಬ್ಬ ಹರಿದಿನ ಸೇರಿದಂತೆ ಇನ್ನಿತರ ದಿನಗಳಲ್ಲಿ ಭಕ್ತಾದಿಗಳು ದಿನದ 24 ಗಂಟೆಯೂ ನಾಗಮಲೆ ಕ್ಷೇತ್ರಕ್ಕೆ ಹೋಗಿ ಬರುತ್ತಿದ್ದರು. ಆದರೆ, ಅಲ್ಲಿಗೆ ಹೋಗುವಾಗ ಹಾಗೂ ಬರುವಾಗ ಕಾಡು ಪ್ರಾಣಿಗಳ ದಾಳಿ ನಡೆಸಿದ ಪರಿಣಾಮ ಭಕ್ತಾದಿಗಳು ಮೃತಪಟ್ಟಿದ್ದರಿಂದ ಅರಣ್ಯ ಇಲಾಖೆ ಕಟ್ಟುನಿಟ್ಟಿನ ಕ್ರಮ ಕೈಗೊಂಡಿತ್ತು. ಕಳೆದ ಫೆ‌ಬ್ರವರಿ 5ರಿಂದ ನಾಗಮಲೆ ಕ್ಷೇತ್ರಕ್ಕೆ ಜೀಪ್ ಮುಖಾಂತರ ಹಾಗೂ ಪಾದಯಾತ್ರೆಯ ಮೂಲಕ ಭಕ್ತಾದಿಗಳು ತೆರಳಲು ನಿರ್ಬಂಧ ವಿಧಿಸಲಾಗಿತ್ತು.

ನಾಗಮಲೆ (ETV Bharat)

ಪ್ರತಿದಿನ 200 ಮಂದಿಗೆ ಅವಕಾಶ:ನಾಗಮಲೆಗೆ ಚಾರಣಕ್ಕೆ ತೆರಳಲು ಅರಣ್ಯ ಇಲಾಖೆಯ www.aranyavihaara.karanataka.gov.inಗೆ ಭೇಟಿ ನೀಡಿ ನೋಂದಾಯಿಸಿಕೊಂಡು, ನಂತರ ದಿನಾಂಕ ನಿಗದಿ ಮಾಡಿಕೊಂಡು ದರ್ಶನ ಪಡೆಯಬಹುದಾಗಿದೆ. ಭಕ್ತಾದಿಗಳಿಗೆ ಹಾಗೂ ಚಾರಣಿಗರಿಗೆ ಬೆಳಗ್ಗೆ 6ರಿಂದ 10 ಗಂಟೆಯ ತನಕದ ಸ್ಲಾಟ್​​ ಬುಕಿಂಗ್​ಗೆ ಅವಕಾಶ ನೀಡಲಾಗಿದೆ. ಒಬ್ಬರಿಗೆ 200 ರೂ. ನಿಗದಿ ಮಾಡಲಾಗಿದೆ.

ನಾಗಮಲೆ (ETV Bharat)

ನಾಗಮಲೆ ಯಾತ್ರೆಯು 14 ಕಿ.ಮೀ.ಗಳಷ್ಟಿದ್ದು, ಹಳೆಯೂರು ಗೇಟ್​​ನಿಂದ ಚಾರಣ ಆರಂಭಗೊಳ್ಳಲಿದೆ. ಜೊತೆಗೆ ಗೈಡ್ ಕೂಡ ಇರಲಿದ್ದಾರೆ. ಅರಣ್ಯ ಇಲಾಖೆಯಿಂದ ಪ್ರಾಯೋಗಿಕವಾಗಿ ಒಂದು ದಿನಕ್ಕೆ 200 ಜನರಿಗೆ ಚಾರಣಕ್ಕೆ ಅವಕಾಶ ಕಲ್ಪಿಸಲಾಗಿದೆ. ಮುಂದಿನ ದಿನಗಳಲ್ಲಿ ಇನ್ನು ಹೆಚ್ಚು ಜನರಿಗೆ ಅವಕಾಶ ಮಾಡಿಕೊಡುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇದನ್ನೂ ಓದಿ:ರೇಣುಕಾ ಯಲ್ಲಮ್ಮನ ಪಡ್ಡಲಗಿ ತುಂಬಿಸಲು ದೇವಗಿರಿಯಿಂದ ಸವದತ್ತಿಗೆ ಬಂಡಿ ಯಾತ್ರೆ ಕೈಗೊಂಡ ಮುಸ್ಲಿಂ ಭಕ್ತ

ಭಕ್ತಾದಿಗಳು ಹೆಚ್ಚಿನ ಮಾಹಿತಿಗಾಗಿ, ಮಹದೇಶ್ವರ ಬೆಟ್ಟ ವನ್ಯಜೀವಿ ವಲಯ ಅರಣ್ಯಾಧಿಕಾರಿ - 9481995510, ಡಿಆರ್​ಎಫ್ - 9481995527, ಪಾಲಾರ್ ಆರ್​​ಎಫ್ - 9481995512, ಡಿ ಆರ್​ಎಫ್​ಒ - 9481995531, ಗಸ್ತು ಅರಣ್ಯಪಾಲಕ ಇಂಡಿಗನತ್ತ - 9481995597 ಅವರನ್ನು ಸಂಪರ್ಕಿಸಬಹುದಾಗಿದೆ.

ನಾಗಮಲೆ ಮಾದಪ್ಪನ ಭಕ್ತರ ಆರಾಧ್ಯ ನೆಲೆ:ಮಲೆ ಮಹದೇಶ್ವರಸ್ವಾಮಿಯು ಲಿಂಗದ ರೂಪದಲ್ಲಿ ನಾಗಮಲೆಯಲ್ಲಿ ನೆಲೆಸಿದ್ದಾರೆಂಬ ನಂಬಿಕೆ ಭಕ್ತರದ್ದಾಗಿದೆ. ಮಹದೇಶ್ವರ ಬೆಟ್ಟಕ್ಕೆ ತೆರಳಿದ್ದವರು ನಾಗಮಲೆಗೆ ಬರುವುದು ಸಂಪ್ರದಾಯವಾಗಿತ್ತು. ದಟ್ಟಕಾಡಿನ ಮಧ್ಯೆ ಕಾಲ್ನಡಿಗೆಯಲ್ಲಿ ಸಾಗುವುದು ದೈವಿಕದ ಜೊತೆ ರೋಮಾಂಚಕ ಅನುಭವ ನೀಡಲಿದೆ.

ಇದನ್ನೂ ಓದಿ:16,200 ಕೆ.ಜಿ. ದೀಪದ ಎಣ್ಣೆ ಸಂಗ್ರಹಿಸಿ ಯಲ್ಲಮ್ಮದೇವಿ ದೇವಾಲಯ ದಾಖಲೆ! 21 ಲಕ್ಷ ಭಕ್ತರಿಂದ ತಾಯಿ ದರ್ಶನ

ABOUT THE AUTHOR

...view details