ಕರ್ನಾಟಕ

karnataka

ಪ್ರವೀಣ್ ನೆಟ್ಟಾರು ಹತ್ಯೆ ಕೇಸ್‌: ಸಂಚುಕೋರನಿಗೆ ಆಶ್ರಯ ನೀಡಿದ್ದ ಇಬ್ಬರ ವಿರುದ್ಧ ಎನ್ಐಎ ಚಾರ್ಜ್​ಶೀಟ್ - Praveen Nettaru Murder Case

By ETV Bharat Karnataka Team

Published : Aug 2, 2024, 9:50 PM IST

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಸಂಚುಕೋರನಿಗೆ ಆಶ್ರಯ ನೀಡಿದ್ದ ಇಬ್ಬರ ವಿರುದ್ಧ ಎನ್​ಐಎ ಚಾರ್ಜ್​ಶೀಟ್ ಸಲ್ಲಿಸಿದೆ.

praveen nettaru
ಪ್ರವೀಣ್ ನೆಟ್ಟಾರು (ETV Bharat)

ಬೆಂಗಳೂರು:ಬಿಜೆಪಿ ಯುವ ಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಮುಸ್ತಫಾ ಪೈಚಾರ್‌ಗೆ ಆಶ್ರಯ ನೀಡಿದ್ದ ಇಬ್ಬರು ಆರೋಪಿಗಳಾದ ಮನ್ಸೂರ್ ಪಾಷಾ ಹಾಗೂ ರಿಯಾಜ್ ಹೆಚ್.ವೈ. ಎಂಬವರ ವಿರುದ್ಧ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಇಂದು ಚಾರ್ಜ್​ಶೀಟ್​ ಸಲ್ಲಿಸಿತು.

2022ರ ಜುಲೈ 26ರಂದು ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ಪ್ರವೀಣ್ ನೆಟ್ಟಾರು ಮೇಲೆ ಇಬ್ಬರು ದುಷ್ಕರ್ಮಿಗಳು ಮಾರಕಾಸ್ತ್ರದಿಂದ ಹಲ್ಲೆ ನಡೆಸಿ ಕೊಲೆ ಮಾಡಿದ್ದರು. ಗಂಭೀರವಾಗಿ ಗಾಯಗೊಂಡಿದ್ದ ಪ್ರವೀಣ್​ ಅವರನ್ನು ಕೂಡಲೇ ಆಸ್ಪತ್ರೆಗೆ ಸಾಗಿಸಲಾಗಿತ್ತು. ಆದರೆ, ಮಾರ್ಗಮಧ್ಯೆ ಮೃತಪಟ್ಟಿದ್ದರು. ಕೃತ್ಯದ ಕುರಿತು‌ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ಳಾರೆ ಠಾಣೆಯಲ್ಲಿ‌ ಪ್ರಕರಣ ದಾಖಲಾಗಿತ್ತು. ಬಳಿಕ ಅದೇ ವರ್ಷ ಆಗಸ್ಟ್ 4ರಂದು ಪ್ರತ್ಯೇಕ ಪ್ರಕರಣ ದಾಖಲಿಸಿಕೊಂಡಿದ್ದ ಎನ್ಐಎ‌ ತನಿಖೆಗಿಳಿದಿತ್ತು.

ಎನ್ಐಎ ಅಧಿಕಾರಿಗಳು ತಲೆಮರೆಸಿಕೊಂಡಿದ್ದ ಪ್ರಕರಣದ ಪ್ರಮುಖ ಸಂಚುಕೋರ ಹಾಗೂ ರಾಜ್ಯದಲ್ಲಿ ಪಿಎಫ್‌ಐ ಸಂಘಟನೆಯ ಮಾಸ್ಟರ್ ಟ್ರೈನರ್ ಆಗಿದ್ದ ಆರೋಪಿ ಮುಸ್ತಫಾ ಪೈಚಾರ್ ಹಾಗೂ ಆತನಿಗೆ ನೆರವು ನೀಡಿದ್ದ ಮನ್ಸೂರ್ ಪಾಷಾನನ್ನು ಮೇ 10ರಂದು ಹಾಸನ ಜಿಲ್ಲೆಯ ಸಕಲೇಶಪುರದಲ್ಲಿ ಬಂಧಿಸಿದ್ದರು.

ಬಳಿಕ ಆರೋಪಿ ಮುಸ್ತಫಾ ಪೈಚಾರ್‌ಗೆ ಆಶ್ರಯ ನೀಡಿದ್ದ ಮತ್ತೋರ್ವ ಆರೋಪಿ ರಿಯಾಜ್ ಹೆಚ್.ವೈ. ಭಾರತದಿಂದ ಪರಾರಿಯಾಗಲು ಯತ್ನಿಸುತ್ತಿದ್ದಾಗ ಜೂನ್ 3ರಂದು ಮುಂಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂಧಿಸಲಾಗಿತ್ತು.

ಇಬ್ಬರೂ ಆರೋಪಿಗಳ ಪಾತ್ರದ ಕುರಿತು ಐಪಿಸಿಯ ಸೆಕ್ಷನ್ 120 ಬಿ ಮತ್ತು 212 ಮತ್ತು ಯುಎ (ಪಿ) ಆ್ಯಕ್ಟ್‌ನ ಸೆಕ್ಷನ್ 19ರ ಆಧಾರದಲ್ಲಿ ತಕ್ಷಣ ಪ್ರಕರಣ ದಾಖಲಿಸಿದ ಎನ್ಐಎ ಸದ್ಯ ಇಬ್ಬರ ವಿರುದ್ಧ ಚಾರ್ಜ್​ಶೀಟ್​ ಸಲ್ಲಿಸಿದೆ. ಪ್ರಕರಣದಲ್ಲಿ ಇದುವರೆಗೆ 19 ಆರೋಪಿಗಳನ್ನು ಬಂಧಿಸಿದಂತಾಗಿದ್ದು, ಉಳಿದ ಏಳು ಜನ ಆರೋಪಿಗಳಿಗಾಗಿ ಪತ್ತೆ ಕಾರ್ಯ ಮುಂದುವರೆದಿದೆ.

ಇದನ್ನೂ ಓದಿ:ಪ್ರವೀಣ್​ ನೆಟ್ಟಾರು ಹತ್ಯೆ ಕೇಸ್: ತಲೆಮರೆಸಿಕೊಂಡಿದ್ದ ಮತ್ತೊಬ್ಬ ಆರೋಪಿ ಸೆರೆ - Praveen Nettaru Murder Case

ABOUT THE AUTHOR

...view details