ಶಿವಮೊಗ್ಗ:ಶಿವಮೊಗ್ಗ ವಿಭಾಗೀಯ ವ್ಯಾಪ್ತಿಯ ಜಾರಿ ಮತ್ತು ಜಾಗೃತಿ ದಳ ಹಾಗೂ ವಿಭಾಗೀಯ ಸರಕು ಮತ್ತು ಸೇವಾ ತೆರಿಗೆ ಇಲಾಖೆಯ ಸುಮಾರು 40 ಅಧಿಕಾರಿಗಳ ತಂಡ, ಮಲೆನಾಡು ವಿಭಾಗ ವ್ಯಾಪ್ತಿಯ ಎಲ್ಲಾ ಅಡಿಕೆ ವರ್ತಕರ ವ್ಯಾಪಾರ ಗೋದಾಮು ಸ್ಥಳಗಳ ಮೇಲೆ ದಿಢೀರ್ ದಾಳಿ ನಡೆಸಿದೆ.
ಶಿವಮೊಗ್ಗ: ಅಡಿಕೆ ದಾಸ್ತಾನು ಮಳಿಗೆ ಮೇಲೆ ತೆರಿಗೆ ಅಧಿಕಾರಿಗಳಿಂದ ದಾಳಿ - Tax Officials Raid - TAX OFFICIALS RAID
ಅಡಿಕೆ ದಾಸ್ತಾನು ಮಳಿಗೆಗಳ ಮೇಳೆ ದಾಳಿ ಮಾಡಿರುವ ತೆರಿಗೆ ಅಧಿಕಾರಿಗಳು, ಅಕ್ರಮ ಅಡಿಕೆ ವಹಿವಾಟು ದಾಸ್ತಾನು ಪತ್ತೆ ಜತೆಗೆ ದಂಡ ಸಹ ವಿಧಿಸಿದ್ದಾರೆ.
ಅಡಿಕೆ ದಾಸ್ತಾನು ಮಳಿಗೆ (ETV Bharat)
Published : May 29, 2024, 7:11 PM IST
ದಾಳಿ ವೇಳೆ ಲಕ್ಷಾಂತರ ಮೊತ್ತದ ಅಕ್ರಮ ಅಡಿಕೆ ವಹಿವಾಟು ದಾಸ್ತಾನು ಪತ್ತೆ ಹಚ್ಚಿದ್ದಲ್ಲದೇ ದಂಡ ಸಹ ವಿಧಿಸಿರುತ್ತಾರೆ. ಈ ವಿಶೇಷ ಕಾರ್ಯಾಚರಣೆಯ ನೇತೃತ್ವವನ್ನು ಶಿವಮೊಗ್ಗದ ಮಲೆನಾಡು ವಿಭಾಗೀಯ ತೆರಿಗೆ ಜಾಗೃತಿ ದಳ ಹಾಗೂ ಸರಕು ಮತ್ತು ಸೇವಾ ತೆರಿಗೆಗಳ ಜಂಟಿ ಆಯುಕ್ತರುಗಳು ಹಾಗೂ ಉಪ ಆಯುಕ್ತರುಗಳ ನೇತೃತ್ವದಲ್ಲಿ ನಡೆಸಿದ್ದಾರೆ. ಅಕ್ರಮವಾಗಿ ಅಡಿಕೆ ಸಂಗ್ರಹಿಸಿದ ವ್ಯಾಪಾರಿಗಳ ಮೇಲೆ ಜಿಎಸ್ಟಿ ಕಾಯ್ದೆ ನಿಯಮಾನುಸಾರ ಕ್ರಮ ಜರುಗಿಸಲಾಗಿದೆ.