ಕರ್ನಾಟಕ

karnataka

ಎಟಿಎಂ, ಮನೆಗಳ್ಳತನಕ್ಕೆ ಯತ್ನಿಸಿ ಬಸ್ ನಿಲ್ದಾಣಕ್ಕೆ ಬಂದು ಪೊಲೀಸರಿಗೆ ಸೆರೆಸಿಕ್ಕ!

By ETV Bharat Karnataka Team

Published : Feb 9, 2024, 6:08 PM IST

ಎರಡು ಬಾರಿ ಕಳ್ಳತನಕ್ಕೆ ಯತ್ನಿಸಿದ್ದ ಖದೀಮನನ್ನು ರಾತ್ರಿ ಗಸ್ತಿನಲ್ಲಿದ್ದ ಪೊಲೀಸರು ಬಂಧಿಸಿದ್ದಾರೆ.

patrol-police-arrested-a-accused-who-attempted-robbery-in-nelamangala
ಎಟಿಎಂ ಕಳ್ಳತನ, ಮನೆಗಳ್ಳತನಕ್ಕೆ ವಿಫಲ ಯತ್ನ; ಬಸ್ ನಿಲ್ದಾಣಕ್ಕೆ ಬಂದು ಪೊಲೀಸರಿಗೆ ಸೆರೆಸಿಕ್ಕ ಕಳ್ಳ!

ನೆಲಮಂಗಲ(ಬೆಂಗಳೂರು ಗ್ರಾಮಾಂತರ): ರಾತ್ರಿ ಗಸ್ತಿನಲ್ಲಿದ್ದ ದಾಬಸ್‌ಪೇಟೆ ಪೊಲೀಸರು ಎರಡು ಬಾರಿ ಕಳ್ಳತನಕ್ಕೆ ಪ್ರಯತ್ನಿಸಿದ್ದ ಆರೋಪಿಯನ್ನು ಬಂಧಿಸಿದ್ದಾರೆ. ರಂಗನಾಥ್ ಅಲಿಯಾಸ್ ವಿರಾಟ್ ಬಂಧಿತ ಆರೋಪಿ.

ಈತ ಕಳೆದ ಮಂಗಳವಾರ ರಾತ್ರಿ ಸುಮಾರು 1 ಗಂಟೆ ಸಮಯದಲ್ಲಿ ತಾಲೂಕಿನ ಟಿ.ಬೇಗೂರು ಗ್ರಾಮದಲ್ಲಿನ ಎಟಿಎಂನಲ್ಲಿ ಕಳ್ಳತನಕ್ಕೆ ಯತ್ನಿಸಿದಾಗ ಸೈರನ್ ಕೂಗಿಕೊಂಡಿತ್ತು. ಇದರಿಂದ ಭಯಗೊಂಡು ಅಲ್ಲಿಂದ ಪರಾರಿಯಾಗಿದ್ದಾನೆ. ನಂತರ ಎಟಿಎಂನಿಂದ ಪೊಲೀಸರಿಗೆ ಸಂದೇಶ ರವಾನೆಯಾಗಿತ್ತು. ಕೂಡಲೇ ಸ್ಥಳಕ್ಕಾಗಮಿಸಿದ ನೆಲಮಂಗಲ ಗ್ರಾಮಾಂತರ ಪೊಲೀಸರು ಸಿಸಿಟಿವಿ ದೃಶ್ಯಗಳನ್ನು ಪರಿಶೀಲಿಸಿ, ಅದರಲ್ಲಿ ದಾಖಲಾಗಿದ್ದ ಆರೋಪಿಯ ಫೋಟೋವನ್ನು ಬೇರೆ ಠಾಣೆಗಳ ವಾಟ್ಸ್​ಆ್ಯಪ್​ ಗ್ರೂಪ್‌ಗಳಿಗೆ ಕಳುಹಿಸಿ ನಿಗಾವಹಿಸಲು ಸೂಚಿಸಿದ್ದರು.

ತದನಂತರ ಇದೇ ಆರೋಪಿ, ಮನೆಗಳ್ಳತನಕ್ಕೆ ಹೋಗಿ ಮನೆ ಬೀಗ ಒಡೆಯುವ ವೇಳೆ ಅಕ್ಕಪಕ್ಕದ ಮನೆಯವರು ಕೂಗಿಕೊಂಡಿದ್ದರಿಂದ ಅಲ್ಲಿಂದಲೂ ಎಸ್ಕೇಪ್ ಆಗಿ ಬಸ್‌ ನಿಲ್ದಾಣಕ್ಕೆ ಬಂದಿದ್ದ. ಈ ಸಂದರ್ಭದಲ್ಲಿ ಅನುಮಾನಾಸ್ಪದವಾಗಿ ಕಂಡುಬಂದ ಹಿನ್ನೆಲೆಯಲ್ಲಿ ಗಸ್ತಿನಲ್ಲಿದ್ದ ಪೊಲೀಸರು ವಿಚಾರಣೆ ನಡೆಸಿದ್ದು, ಮನೆಗಳ್ಳತನಕ್ಕೆ ಯತ್ನಿಸಿರುವ ಬಗ್ಗೆ ಗೊತ್ತಾಗಿದೆ. ಆರೋಪಿಯನ್ನು ಬಂಧಿಸಿದ ಪೊಲೀಸರು ಮಾರಕಾಸ್ತ್ರ ವಶಪಡಿಸಿಕೊಂಡು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

ಇದನ್ನೂ ಓದಿ:ನಕಲಿ ಕೀ ಬಳಸಿ ವಾಹನ ಕಳ್ಳತನ: ಮೂವರು ಸೆರೆ, ₹10 ಲಕ್ಷದ ಮಾಲು ವಶಕ್ಕೆ

ABOUT THE AUTHOR

...view details